AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ನಕಲಿ ಬ್ರಾಂಡ್ ದಂಧೆ ಪತ್ತೆ; ಬ್ರಾಂಡೆಡ್ ಪ್ರಾಡಕ್ಟ್ ನಕಲಿ ಮಾಡಿ ಮಾರಾಟ, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ

ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪ್ ಬಳಿ ನಕಲಿ ವಸ್ತುಗಳ ತಯಾರಿ ಕೇಂದ್ರ ವಿದ್ದು ನಿತ್ಯ ಬಳಕೆ ಮಾಡುವ ಟೀ ಪುಡಿ, ಪ್ಯಾರಾಚೂಟ್ ಕೊಬ್ಬರಿ ಎಣ್ಣೆ ತಯಾರಿ ಮಾಡಿ ಮಾರಾಟ ಮಾಡುತ್ತಿದ್ದರು.

ರಾಯಚೂರಿನಲ್ಲಿ ನಕಲಿ ಬ್ರಾಂಡ್ ದಂಧೆ ಪತ್ತೆ; ಬ್ರಾಂಡೆಡ್ ಪ್ರಾಡಕ್ಟ್ ನಕಲಿ ಮಾಡಿ ಮಾರಾಟ, ಲಕ್ಷಾಂತರ ಮೌಲ್ಯದ ವಸ್ತುಗಳು ಜಪ್ತಿ
ಬ್ರಾಂಡೆಡ್ ಪ್ರಾಡಕ್ಟ್ ನಕಲಿ ಮಾಡಿ ಮಾರಾಟ
TV9 Web
| Edited By: ಆಯೇಷಾ ಬಾನು|

Updated on:Jun 17, 2022 | 8:55 AM

Share

ರಾಯಚೂರು: ಜಿಲ್ಲೆಯಲ್ಲಿ ನಕಲಿ ಬ್ರಾಂಡ್ಗಳ ದಂಧೆ(Fake Brand) ಜೋರಾಗಿ ಸಾಗಿದೆ. ಗ್ರಾಮೀಣ ಭಾಗದ ಜನರನ್ನು ಟಾರ್ಗೆಟ್ ಮಾಡಿ ನಕಲಿ ವಸ್ತು ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿದೆ. ಹೈದರಾಬಾದ್ ಮೂಲದ ಕಿಂಗ್ ಪಿನ್ ಮೂಲಕ ನಡೆಯುತ್ತಿದ್ದ ಬೃಹತ್ ದಂಧೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ಪೊಲೀಸರ ಬಲೆಗೆ ಇಬ್ಬರು ಖದೀಮರು ಬಿದ್ದಿದ್ದಾರೆ.

ಸಿರವಾರ ತಾಲೂಕಿನ ಬಾಲಾಜಿ ಕ್ಯಾಂಪ್ ಬಳಿ ನಕಲಿ ವಸ್ತುಗಳ ತಯಾರಿ ಕೇಂದ್ರ ವಿದ್ದು ನಿತ್ಯ ಬಳಕೆ ಮಾಡುವ ಟೀ ಪುಡಿ, ಪ್ಯಾರಾಚೂಟ್ ಕೊಬ್ಬರಿ ಎಣ್ಣೆ ತಯಾರಿ ಮಾಡಿ ಮಾರಾಟ ಮಾಡುತ್ತಿದ್ದರು. ಮೂಲ ಕಂಪನಿ ಹೆಸರು, ಚಿಹ್ನೆ ಬಳಸಿಕೊಂಡು ಜನರಿಗೆ ಮೋಸ ಮಾಡುತ್ತಿದ್ದರು. ಇದನ್ನು ತಿಳಿದ ಸಿರವಾರ ಪೊಲೀಸರು ಗೋದಾಮಿನ ಮೇಲೆ ದಾಳಿ ನಡೆಸಿ ಅಕ್ರಮ ಬಯಲಿಗೆಳೆದಿದ್ದಾರೆ. ಹಾಗೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರತನ್ ಸಿಂಗ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳು. ಇದನ್ನೂ ಓದಿ: ಚಿನ್ನದ ಸರ, ಬೈಕ್ ಕಳವು ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರ ಬಂಧನ: 14.45 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಹೈದರಾಬಾದ್ ಮೂಲದ ಕಿಂಗ್ ಪಿನ್ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಇನ್ನು ಬಂಧಿತ ಇಬ್ಬರನ್ನೂ ವಿಚಾರಣೆ ಮಾಡಿದಾಗ ಲಕ್ಷಾಂತರ ನಕಲಿ ವಸ್ತುಗಳು ಪತ್ತೆಯಾಗಿವೆ. ನಕಲಿ ರೆಡ್ ಲೇಬಲ್ ಟೀ ಪೌಡರ್, ತ್ರೀ ರೋಸಸ್ ಟೀ ಪೌಡರ್, ಸರ್ಫ್ ಎಕ್ಸೆಲ್ ಡಿಟರ್ಜಂಟ್ ಪೌಡರ್, ಫೆವಿಕ್ವಿಕ್ ಸೇರಿ‌ ವಿವಿಧ ಪ್ರಾಡಕ್ಟ್ ಸೀಜ್ ಮಾಡಲಾಗಿದೆ. ಸುಮಾರು 26 ಲಕ್ಷ ಮೌಲ್ಯದ ವಿವಿಧ ಪ್ರಾಡಕ್ಟ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೆ ಲಕ್ಷಾಂತರ ರೂ. ಮೌಲ್ಯದ ಯಂತ್ರಗಳು ಹಾಗೂ ವಾಹನಗಳನ್ನೂ ಸೀಜ್ ಮಾಡಲಾಗಿದ್ದು ಈ ಸಂಬಂಧ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:55 am, Fri, 17 June 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ