AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲು

ಸಂಕ್ರಾಂತಿ ಹಬ್ಬ ಹಿನ್ನೆಲೆ ಪೂಜೆ ಹಾಗೂ ಪುಣ್ಯ ಸ್ನಾನಕ್ಕೆ ಎಂದು ನಿನ್ನೆ ಐದಾರು ಜನ ಸ್ನೇಹಿತರು ಕೃಷ್ಣಾ ನದಿಗೆ ಹೋಗಿದ್ದರು. ಈ ವೇಳೆ ಗಣೇಶ್ ಮತ್ತು ಉದಯ್ ಕುಮಾರ್ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮಕರ ಸಂಕ್ರಾಂತಿ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲು
ಮಕರ ಸಂಕ್ರಾಂತಿ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲು
TV9 Web
| Updated By: ಆಯೇಷಾ ಬಾನು|

Updated on:Jan 15, 2022 | 12:06 PM

Share

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಸ್ನೇಹಿತರು ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ. ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆ ನದಿ ಸ್ನಾನ ಮಾಡಲು ಹೋಗಿದ್ದ ಸ್ನೇಹಿತರು ನೀರುಪಾಲಾಗಿದ್ದಾರೆ. ಗಣೇಶ್(42), ಉದಯ್ ಕುಮಾರ್(43) ಮೃತರು.

ಸಂಕ್ರಾಂತಿ ಹಬ್ಬ ಹಿನ್ನೆಲೆ ಪೂಜೆ ಹಾಗೂ ಪುಣ್ಯ ಸ್ನಾನಕ್ಕೆ ಎಂದು ನಿನ್ನೆ ಐದಾರು ಜನ ಸ್ನೇಹಿತರು ಕೃಷ್ಣಾ ನದಿಗೆ ಹೋಗಿದ್ದರು. ಈ ವೇಳೆ ಗಣೇಶ್ ಮತ್ತು ಉದಯ್ ಕುಮಾರ್ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗಣೇಶ್ ಶವ ಪತ್ತೆಯಾಗಿದ್ದು ಉದಯ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಮೃತ ಗಣೇಶ್ ರಾಯಚೂರಿನ ನಿಜಲಿಂಗಪ್ಪ ಕಾಲೋನಿ ನಿವಾಸಿ ಹಾಗೂ ಉದಯ್‌ಕುಮಾರ್ ರಾಯಚೂರಿನ KEB ಕಾಲೋನಿಯ ನಿವಾಸಿ. ಸದ್ಯ ಶಕ್ತಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಬ್ಬದ ಸಂಭ್ರಮದಲ್ಲಿರಬೇಕಾಗಿದ್ದ ಕುಟುಂಬದಲ್ಲಿ ಸೂತಕನ ಛಾಯೆ ಆವರಿಸಿದೆ.

ಗಣೇಶ್ ಮತ್ತು ಉದಯ್ ಇಬ್ಬರೂ ನದಿಗೆ ಬೀಳ್ತಿದ್ದಂತೆ ಕೃಷ್ಣಾ ನದಿ ತೀರದಲ್ಲೇ ವಾಸವಾಗಿದ್ದ ಅನಾಥ ಯುವಕ ಬಾಲು ಕಾಪಾಡಲು ಯತ್ನಿಸಿದ್ದ. ನದಿಗೆ ಹಾರಿ ಗಣೇಶನನ್ನ ಕಾಪಾಡಿದ್ದ. ಆದರೆ ಅಷ್ಟರಲ್ಲಾಗಲೇ ಗಣೇಶ್ ಮೃತಪಟ್ಟಿದ್ದರು. ನಿನ್ನೆ ಸಂಕ್ರಾಂತಿ ಹಿನ್ನೆಲೆ ಕೃಷ್ಣಾ ನದಿಗೆ ರವಿಕುಮಾರ್, ಖಲೀಲ್, ಗಣೇಶ್, ಉದಯ್ ಕುಮಾರ್ ಸೇರಿ ಒಟ್ಟು ಆರು ಜನ ಹಳೆ ಸ್ನೇಹಿತರು ಹೋಗಿದ್ದರು. ಈ ಪೈಕಿ ನಾಲ್ಕು ಜನ ಸರ್ಕಾರಿ ನೌಕರರು. ಮೃತ ಉದಯ್ ಕುಮಾರ್, ಜೆಸ್ಕಾಂ ಲೈನ್ ಮ್ಯಾನ್. ಗಣೇಶ್ ಖಾಸಗಿ ವಾಹನ ಚಾಲಕ. ಮೊದಲು ಎಲ್ಲರೂ ಒಟ್ಟಿಗೆ ನದಿಯಲ್ಲಿ ಸ್ನಾನ ಮುಗಿಸಿದ್ದರು. ಬಳಿಕ ಮತ್ತೆ ಈಜುವುದಾಗಿ ಗಣೇಶ್ ಹಾಗೂ ಉದಯ್ ಕುಮಾರ್ ನದಿಗೆ ಇಳಿದಿದ್ದರು. ಆಗ ಘಟನೆ ನಡೆದಿದೆ.

ಇದನ್ನೂ ಓದಿ: Makar Sankranti: ಮಕರ ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಈ ವರ್ಷ ಸಂಕ್ರಾಂತಿ ಜನವರಿ 15 ಏಕೆ?

Published On - 10:22 am, Sat, 15 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ