AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು, ಬೀಗರಿಗೆ ಸುಧಾಮೂರ್ತಿ ಸಾಥ್

ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ. ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಬೀಗತಿಯಾಗಿರುವ ಸುಧಾಮೂರ್ತಿ ಅವರು ಕೂಡ ಜೊತೆ ಆಗಮಿಸಿದ್ದರು.

ಮಂತ್ರಾಲಯ ರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು, ಬೀಗರಿಗೆ ಸುಧಾಮೂರ್ತಿ ಸಾಥ್
ಮಂತ್ರಾಲಯ ರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು|

Updated on:Sep 13, 2023 | 11:36 AM

Share

ರಾಯಚೂರು, ಸೆ.13: ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ(G20) ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ರಿಷಿ ಸುನಾಕ್(Rishi Sunak) ಅವರ ತಂದೆ-ತಾಯಿ ಕೂಡ ಭಾರತಕ್ಕೆ ಬಂದಿದ್ದಾರೆ. ಸದ್ಯ ರಿಷಿ ಸುನಾಕ್ ಅವರ ಕುಟುಂಬ ಅನೇಕ ಆಧ್ಯಾತ್ಮಿಕತೆಯಲ್ಲಿ ತೊಡಗಿಕೊಳ್ಳುತ್ತಿದ್ದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ(Rishi Sunak Parents). ಶೃಂಗಸಭೆ ವೇಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ರಿಷಿ ಸುನಕ್‌ ದಂಪತಿ ಫೋಟೋಗಳು ವೈರಲ್ ಆಗಿದ್ದವು. ಬಳಿಕ ರಿಷಿ ಸುನಾಕ್ ಅವರ ತಾಯಿ ಉಷಾ ಸುನಕ್‌ ಅವರು ತಮ್ಮ ಬೀಗತಿ ಸುಧಾಮೂರ್ತಿ(Sudha Murthy) ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್‌ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗಿಯಾಗಿದ್ದು ಜನರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ರಿಷಿ ಸುನಾಕ್ ಅವರ ಪೋಷಕರು ಮಂತ್ರಾಲಯದ ರಾಯರ ದರ್ಶನ ಮಾಡಿದ್ದಾರೆ.

ರಾಯರ ದರ್ಶನ ಮಾಡಿದ ಬ್ರಿಟನ್ ಪ್ರಧಾನಿ ಪೋಷಕರು

ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ. ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಬೀಗತಿಯಾಗಿರುವ ಸುಧಾಮೂರ್ತಿ ಅವರು ಕೂಡ ಜೊತೆ ಆಗಮಿಸಿದ್ದರು. ಮೊದಲು ರಾಯರ ದರ್ಶನ ಪಡೆದು, ಬಳಿಕ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಸುಧಾಮೂರ್ತಿ ಹಾಘೂ ರಿಷಿ ಸುನಕ್ ಪೋಷಕರಿಗೆ ಶ್ರೀಗಳು ಆಶಿರ್ವಚನ ಮಾಡಿದರು. ನಂತರ ಪರಿಮಳ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಆಶಿರ್ವದಿಸಿದರು. ಮತ್ತೊಂದೆಡೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಮಂತ್ರಾಕ್ಷತೆ, ಪರಿಮಳ ಪ್ರಸಾದ ತಲುಪಿಸಲು ತಿಳಿಸಿದರು.

UK PM Rishi sunak parents visits raichur raghavendra swamy mutt mantralayam with infosys sudha murthy

ಮಂತ್ರಾಲಯ ರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು

ಇದನ್ನೂ ಓದಿ: ಅಕ್ಷರಧಾಮ ದೇವಾಲಯದಲ್ಲಿ ಆರತಿ ಬೆಳಗಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ

ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ರಿಷಿ ಸುನಕ್ ದಂಪತಿ ಜೊತೆ ಪೋಷಕರು ಕೂಡ ಭಾರತಕ್ಕೆ ಬಂದಿದ್ದರು. ಅಂದಿನಿಂದ ಒಂದಲ್ಲಾ ಒಂದು ರೀತಿಯಲ್ಲಿ ಸುನಕ್ ಕುಟುಂಬ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಬ್ರಿಟನ್​ನಲ್ಲಿದ್ದರು ಬ್ರಿಟಿಷರ ಸಂಪ್ರದಾಯಕ್ಕೆ ಮಾರು ಹೋಗದೆ ಭಾರತೀಯ ಪಾರಂಪರೆಯ ಮೇಲಿನ ಗೌರವವನ್ನು ಎತ್ತಿ ಹಿಡಿದಿದ್ದಾರೆ. ನಾನೊಬ್ಬ ಹಿಂದೂ ಎಂಬ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿರೋದು ಭಾರತೀಯರಿಗೆ ಸುನಕ್ ಕುಟುಂಬದ ಮೇಲಿನ ಗೌರವ ಹೆಚ್ಚಿಸಿದೆ. ರಿಷಿ ಸುನಕ್ ದಂಪತಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಉಷಾ ಸುನಕ್ ಅವರು ಶಾಸಕ ಉದಯ ಗರುಡಾಚಾರ್‌ ಅವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗಿಯಾಗಿ ಭಾರತೀಯ ಸಂಪ್ರದಾಯದಂತೆ ಅರಿಶಿಣ-ಕುಂಕುಮ ತೆಗೆದುಕೊಂಡಿದ್ದು, ಇದೀಗ ರಾಯರ ದರ್ಶನ ಮಾಡಿದ್ದು ಭಾರತೀಯ ಸಂಪ್ರದಾಯದ ಬಗೆಗೆ ಸುನಕ್ ಕುಟುಂಬಕ್ಕಿರುವ ಗೌರವವನ್ನು ತೋರಿಸುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:22 am, Wed, 13 September 23

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ