AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ರಾಯಚೂರಿನಲ್ಲಿ 4 ಕೋಟಿ ರೂಪಾಯಿ ರಹಸ್ಯ ಭೇದಿಸಿದ ಇಡಿ

ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ರಾಜ್ಯ ಸರ್ಕಾರವನ್ನು ಪೇಚಿಗೆ ಸಿಲುಕಿಸಿದ್ದು, ಇದೀಗ ಮಾಜಿ ಸಚಿವ ನಾಗೇಂದ್ರರ ಬಂಧನವಾಗುತ್ತಿದ್ದಂತೆಯೇ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ, ತನಿಖೆಯ ಅಖಾಡಕ್ಕೆ ಇಳಿದಿರುವ ಜಾರಿ ನಿರ್ದೇಶನಾಲಯ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ರಾಯಚೂರಿನಲ್ಲಿ ಭಾರಿ ಅಕ್ರಮ ನಡೆದಿರುವುದನ್ನು ಬಯಲಿಗೆಳೆದಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ರಾಯಚೂರಿನಲ್ಲಿ 4 ಕೋಟಿ ರೂಪಾಯಿ ರಹಸ್ಯ ಭೇದಿಸಿದ ಇಡಿ
ಜಾರಿ ನಿರ್ದೇಶನಾಲಯImage Credit source: PTI
ಭೀಮೇಶ್​​ ಪೂಜಾರ್
| Edited By: |

Updated on: Jul 13, 2024 | 2:19 PM

Share

ರಾಯಚೂರು, ಜುಲೈ 13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಯಚೂರಿನಲ್ಲಿ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಕಾಂಗ್ರೆಸ್ ಶಾಸಕ, ನಿಗದಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ ಸುಮಾರು 4 ಕೋಟಿ ರೂಪಾಯಿ ವ್ಯವಹಾರ ನಡೆದಿರುವುದನ್ನು ಇಡಿ ಪತ್ತೆ ಮಾಡಿದೆ.

ರಾಯಚೂರು ತಾಲೂಕಿನ ಆಸ್ಕಿಹಾಳ ಗ್ರಾಮದಲ್ಲಿ ದದ್ದಲ್ ಸಂಬಂಧಿ ಕಾರ್ತಿಕ್ ಎಂಬಾತ ಲಕ್ಷ್ಮೀದೇವಿ ಎಂಬ ಮಹಿಳೆಯಿಂದ 4 ಕೋಟಿ ರೂಪಾಯಿ ಕೊಟ್ಟು ಜಮೀನು ಖರೀದಿ ಮಾಡಿದ್ದ. ಕಾರ್ತಿಕ್, ಆಂಜನೇಯ ಎಂಬುವರ ಹೆಸರಿನಲ್ಲಿ ಜಮೀನು ನೋಂದಣಿಯಾಗಿದೆ. ಲಕ್ಷ್ಮೀದೇವಿಗೆ 25 ಲಕ್ಷ ಮೊತ್ತದ 3 ಚೆಕ್​ಗಳನ್ನು ಕಾರ್ತಿಕ್, ಆಂಜನೇಯ ನೀಡಿದ್ದರು. ಉಳಿದ ಹಣವನ್ನ ನಗದು ರೂಪದಲ್ಲಿ ನೀಡಲಾಗಿತ್ತು ಎನ್ನಲಾಗಿದೆ. ಇದೀಗ ಲಕ್ಷ್ಮೀದೇವಿಗೆ ಸಂಕಷ್ಟ ಎದುರಾಗಿದೆ.

ಗೃಹ ಪ್ರವೇಶ ದಿನವೇ ಇಡಿ ಶಾಕ್

ಜಮೀನು ಮಾರಿದ್ದ ಲಕ್ಷ್ಮೀದೇವಿ ಹೊಸ ಮನೆ ಖರೀದಿಸಿದ್ದರು. ಅದರ ಗೃಹ ಪ್ರವೇಶ ದಿನವೇ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಮನೆ ಖರೀದಿಸಲು ಹಣ ಬಂದಿರುವುದು ಹೇಗೆ ಎಂದು ಇಡಿ ಪ್ರಶ್ನೆ ಮಾಡಿದೆ. ಜತೆಗೆ, ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟು ತೆರಳಿದೆ.

ಈ ಮಧ್ಯೆ, ಭೂಮಿ ಖರೀದಿ ಬಗ್ಗೆ ಪ್ರತಿಕ್ರಿಯಿಸಿರುವ ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷ, ನೋಂದಣಿ ಇಲಾಖೆ ದರ ಕೇವಲ 23 ಲಕ್ಷ ರೂಪಾಯಿ ಇದೆ. ಆದರೆ, ಮಾರ್ಕೆಟ್ ದರ ಬೇರೆಯೇ ಇರುತ್ತದೆ. ಇದರಲ್ಲಿ ಎಸ್‌ಟಿ ಹಣವನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಶಾಸಕ ಬಸನಗೌಡ ದದ್ದಲ್‌ಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ದದ್ದಲ್‌ ಅಜ್ಞಾತವಾಗಿದ್ದಾರೆ. ಶುಕ್ರವಾರ ಎಸ್ಐಟಿ ವಿಚಾರಣೆ ಎದುರಿಸಿದ್ದ ದದ್ದಲ್‌, ತಮ್ಮನ್ನ ಬಂಧಿಸುವಂತೆ ಕೇಳಿಕೊಂಡಿದ್ದರು ಎನ್ನಲಾಗಿತ್ತು. ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಎಸ್ಐಟಿ ಅಧಿಕಾರಿಗಳಿಗೆ ಬಂಧಿಸುವಂತೆ ದುಂಬಾಲು ಬಿದ್ದಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ದದ್ದಲ್ ಎಲ್ಲೂ ತಪ್ಪಿಸಿಕೊಂಡು ಹೋಗಿಲ್ಲ. ಅವರು ಇಲ್ಲೇ ಓಡಾಡಿಕೊಂಡು ಇದ್ದಾರೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್