AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು

ರಾಯಚೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆ ರೈತರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದ್ದು ಕಣ್ಣೀರು ಹಾಕಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು
ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು
TV9 Web
| Edited By: |

Updated on: Jan 23, 2022 | 12:23 PM

Share

ರಾಯಚೂರು: ಬೇಸಿಗೆ ಬೆನ್ನಲ್ಲೆ ಬಿಸಿಲು ನಾಡು ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬಂದಿದೆ. ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ಪೂರೈಸುವ ಶಕ್ತಿಕೇಂದ್ರದಲ್ಲೇ ವಿದ್ಯುತ್ ಸಮಸ್ಯೆ ಎದುರಾಗಿದ್ದು ರಾಯಚೂರು ನಗರದ ಜೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆ ರೈತರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದ್ದು ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಕೃಷಿ ಚಟುವಟಿಕೆಗೆ ಪ್ರತಿದಿನ 12 ಗಂಟೆ ವಿದ್ಯುತ್ ಪೂರೈಸಲಾಗುತ್ತಿತ್ತು. ಈಗ 12 ಗಂಟೆ ಬದಲು 8 ಗಂಟೆ ವಿದ್ಯುತ್ ಪೂರೈಸಲಾಗುತ್ತಿದೆ. ಜೊತೆಗೆ ಗಂಟೆಗೊಮ್ಮೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಹೀಗಾಗಿ ರೈತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಜೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದ್ರೆ ಇಷ್ಟೆಲ್ಲಾ ಆದರೂ ಈ ವರೆಗೆ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಜಿಲ್ಲೆಯಲ್ಲಿ ಭತ್ತ, ಶೇಂಗಾ, ತರಕಾರಿ ಬೆಳೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ ಎಂದು ರೈತರ ಕಣ್ಣೀರು ಹಾಕಿದ್ದಾರೆ. ಮೊದಲಿನಂತೆ 12 ಗಂಟೆ ವಿದ್ಯುತ್‌ ಪೂರೈಕೆಗೆ ರೈತರು ಒತ್ತಾಯಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಈ ವೆರೆಗೆ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಕೊಳವೆ ಬಾವಿ ಕೊರೆಸಿ ವರ್ಷಗಳೇ ಕಳೆದ್ರೂ, ಈ ವರೆಗೆ ವಿದ್ಯುತ್ ಸಂಪರ್ಕ ನೀಡಿಲ್ಲ. ಬೆಳೆ ಹಾಳಾದರೇ ನೀವೇ ಜವಾಬ್ದಾರರು ಅಂತ ರೈತರು ಅಧಿಕಾರಿಗಳ ಮೇಲೆ ಕೆಂಡಾಮಂಡಲರಾಗಿದ್ದಾರೆ. ಪವರ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಕಾರ್ಯ ನಡೀತಿದೆ. ಕೂಡಲೇ ವಿದ್ಯುತ್ ಸಮಸ್ಯೆ ಪರಿಹರಿಸೋದಾಗಿ ಜೆಸ್ಕಾ ಅಧಿಕಾರಿಗಳು ಉತ್ತರಿಸಿದ್ದಾರೆ.

ಇದನ್ನೂ ಓದಿ: ‘ನೆನಪಿರಲಿ’ ಪ್ರೇಮ್​ ಮಗಳ ಜನ್ಮದಿನ; ಮುದ್ದಿನ ಪುತ್ರಿಯ ಫೋಟೋ ಹಂಚಿಕೊಂಡು ಶುಭಕೋರಿದ ನಟ

ಗಣರಾಜ್ಯೋತ್ಸವಕ್ಕೆ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ: ಮಂಗಳೂರಿನಲ್ಲಿ ಮೆರವಣಿಗೆ ನಡೆಸಿ ಪ್ರತಿಭಟಿಸಲು ಜನಾರ್ದನ ಪೂಜಾರಿ ಕರೆ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್