AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು

ರಾಯಚೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆ ರೈತರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದ್ದು ಕಣ್ಣೀರು ಹಾಕಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು
ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ; ತರಕಾರಿ ಬೆಳೆಗಳಿಗೆ ಭಾರಿ ಹೊಡೆತ, ರೈತರು ಕಂಗಾಲು
TV9 Web
| Updated By: ಆಯೇಷಾ ಬಾನು|

Updated on: Jan 23, 2022 | 12:23 PM

Share

ರಾಯಚೂರು: ಬೇಸಿಗೆ ಬೆನ್ನಲ್ಲೆ ಬಿಸಿಲು ನಾಡು ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬಂದಿದೆ. ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ಪೂರೈಸುವ ಶಕ್ತಿಕೇಂದ್ರದಲ್ಲೇ ವಿದ್ಯುತ್ ಸಮಸ್ಯೆ ಎದುರಾಗಿದ್ದು ರಾಯಚೂರು ನಗರದ ಜೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದ ಹಿನ್ನೆಲೆ ರೈತರು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವಂತಾಗುತ್ತಿದ್ದು ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಕೃಷಿ ಚಟುವಟಿಕೆಗೆ ಪ್ರತಿದಿನ 12 ಗಂಟೆ ವಿದ್ಯುತ್ ಪೂರೈಸಲಾಗುತ್ತಿತ್ತು. ಈಗ 12 ಗಂಟೆ ಬದಲು 8 ಗಂಟೆ ವಿದ್ಯುತ್ ಪೂರೈಸಲಾಗುತ್ತಿದೆ. ಜೊತೆಗೆ ಗಂಟೆಗೊಮ್ಮೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಹೀಗಾಗಿ ರೈತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಜೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದ್ರೆ ಇಷ್ಟೆಲ್ಲಾ ಆದರೂ ಈ ವರೆಗೆ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಜಿಲ್ಲೆಯಲ್ಲಿ ಭತ್ತ, ಶೇಂಗಾ, ತರಕಾರಿ ಬೆಳೆಗಳಿಗೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ ಎಂದು ರೈತರ ಕಣ್ಣೀರು ಹಾಕಿದ್ದಾರೆ. ಮೊದಲಿನಂತೆ 12 ಗಂಟೆ ವಿದ್ಯುತ್‌ ಪೂರೈಕೆಗೆ ರೈತರು ಒತ್ತಾಯಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಈ ವೆರೆಗೆ ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಕೊಳವೆ ಬಾವಿ ಕೊರೆಸಿ ವರ್ಷಗಳೇ ಕಳೆದ್ರೂ, ಈ ವರೆಗೆ ವಿದ್ಯುತ್ ಸಂಪರ್ಕ ನೀಡಿಲ್ಲ. ಬೆಳೆ ಹಾಳಾದರೇ ನೀವೇ ಜವಾಬ್ದಾರರು ಅಂತ ರೈತರು ಅಧಿಕಾರಿಗಳ ಮೇಲೆ ಕೆಂಡಾಮಂಡಲರಾಗಿದ್ದಾರೆ. ಪವರ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಕಾರ್ಯ ನಡೀತಿದೆ. ಕೂಡಲೇ ವಿದ್ಯುತ್ ಸಮಸ್ಯೆ ಪರಿಹರಿಸೋದಾಗಿ ಜೆಸ್ಕಾ ಅಧಿಕಾರಿಗಳು ಉತ್ತರಿಸಿದ್ದಾರೆ.

ಇದನ್ನೂ ಓದಿ: ‘ನೆನಪಿರಲಿ’ ಪ್ರೇಮ್​ ಮಗಳ ಜನ್ಮದಿನ; ಮುದ್ದಿನ ಪುತ್ರಿಯ ಫೋಟೋ ಹಂಚಿಕೊಂಡು ಶುಭಕೋರಿದ ನಟ

ಗಣರಾಜ್ಯೋತ್ಸವಕ್ಕೆ ನಾರಾಯಣ ಗುರುಗಳ ಸ್ತಬ್ಧಚಿತ್ರ ತಿರಸ್ಕಾರ: ಮಂಗಳೂರಿನಲ್ಲಿ ಮೆರವಣಿಗೆ ನಡೆಸಿ ಪ್ರತಿಭಟಿಸಲು ಜನಾರ್ದನ ಪೂಜಾರಿ ಕರೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!