Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿಬಿದ್ದ ಹೆಡ್​ಕಾನ್ಸ್​ಟೇಬಲ್, ಇಬ್ಬರನ್ನು ಲಾಕ್ ಮಾಡಿ ಎಸ್​ಪಿಗೆ ಕರೆದ ಮಾಡಿದ ಪತ್ನಿ

ಕಳೆದ 4 ವರ್ಷಗಳಿಂದ ಪತ್ನಿಯನ್ನು ದೂರ ಮಾಡಿ ಪ್ರೇಯಸಿಯೊಂದಿಗೆ ಎಂಜಾಯ್​ ಮಾಡುತ್ತ ಕಾಲ ಕಳೆಯುತ್ತಿದ್ದ ಹೆಡ್​ ಕಾನ್ಸ್​ಟೇಬಲ್​ ಇದೀಗ ಲಾಕ್​ ಆಗಿದ್ದಾನೆ. ಕದ್ದು ಮುಚ್ಚಿ ಪ್ರೇಯಿಸಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಹೆಡ್​ಕಾನ್ಸ್​ಟೇಬಲ್​​ನನ್ನು ಪತ್ನಿಯೇ ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಅಲ್ಲದೇ ಇಬ್ಬರನ್ನೂ ಲಾಕ್ ಮಾಡಿ ಎಸ್​ಪಿಗೆ ದೂರು ನೀಡಿದ್ದಾರೆ,

ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿಬಿದ್ದ ಹೆಡ್​ಕಾನ್ಸ್​ಟೇಬಲ್, ಇಬ್ಬರನ್ನು ಲಾಕ್ ಮಾಡಿ ಎಸ್​ಪಿಗೆ ಕರೆದ ಮಾಡಿದ ಪತ್ನಿ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on:Jul 24, 2024 | 10:47 PM

ರಾಯಚೂರು, (ಜುಲೈ 24): ಗಂಡ ಸಿರವಾರ  ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿದ್ದರೆ, ಹೆಂಡ್ತಿ ದೇವದುರ್ಗ ಠಾಣೆ ಕಾನ್ಸ್ ಟೇಬಲ್ ಆಗಿದ್ದಾರೆ. ಇಬ್ಬರು ಅನ್ಯೂನ್ಯವಾಗಿದ್ದರು. ಆದ್ರೆ, ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್ ಬೇರೆ ಹೆಣ್ಮಗಳ ಪ್ರೀತಿಯ ಬಲೆಗೆ ಬಿದ್ದಿದ್ದು, ಇದೀಗ ರಾಜ್ ಮೊಹಮ್ಮದ್ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಚೆಲ್ಲಾಟವಾಡುವಾಗಲೇ ಹೆಂಡ್ತಿ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಹೌದು.. ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಮನೆಯೊಂದರಲ್ಲಿ ಹೆಡ್​ಕಾನ್ಸ್​ಟೇಬ್ ರಾಜ್ ಮೊಹಮ್ಮದ್, ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದಿದ್ದಾರೆ. ತನ್ನ ಪತಿ ಪ್ರೇಯಸಿ ಜೊತೆ ಇರುವುದನ್ನು ರೆಡ್​ಹ್ಯಾಂಡ್​ ಆಗಿ ಲಾಕ್ ಮಾಡಿದ ಪತ್ನಿ ಪ್ಯಾರಿ ಬೇಗಂ, ಬಳಿಕ ಎಸ್​​ಪಿಗೆ ಕರೆ ಮಾಡಿ ದೂರು ನೀಡಿದ್ದಾರೆ.

ರಾಜ್ ಮೊಹಮ್ಮದ್ , ಪ್ರೇಯಸಿಗಾಗಿ ಕಳೆದ 4 ವರ್ಷಗಳಿಂದ ಪತ್ನಿಯನ್ನು ದೂರ ಮಾಡಿದ್ದ ಎಂದು ಆರೋಪಿಸಲಾಗಿದೆ. ಆದ್ರೆ, ಈ ಬಾರಿ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್, ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಇರುವಾಗಲೇ ಪತ್ನಿ ಪ್ಯಾರಿ ಬೇಗಂ ಲಾಕ್ ಮಾಡಿದ್ದು, ಬಳಿಕ ಕರೆ ಮಾಡಿ ಎಸ್​​ಪಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಲೇಡಿಸ್ ಪಿಜಿಯಲ್ಲಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಕೊಲೆಗಾರನ ಸುಳಿವು ಪತ್ತೆ, ಯಾರು ಗೊತ್ತಾ?

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಆಗಮಿಸಿ ಮನೆ ಲಾಕ್​ ಓಪನ್ ಮಾಡಿ ಬಳಿಕ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್ ಮತ್ತು ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಾರೆ.  ಈ ವೇಳೆ ಸುತ್ತಮುತ್ತಲಿನ ಜನರು ಜಮಾವಣೆಗೊಂಡಿದ್ದರು.

ಈ ಹಿಂದೆ ಎರಡು ಬಾರಿ ಹಿರಿಯ ಅಧಿಕಾರಿಗಳು ರಾಜ್ ಮೊಹಮ್ಮದ್​ಗೆ ಬೈದು ಬುದ್ದಿ ಹೇಳಿದ್ದರು. ಆದ್ರೆ, ರಾಜ್ ಮೊಹಮ್ಮದ್ ತನ್ನ ಚಾಳಿ ಹಳೇ ಚಾಳಿ ಮಾತ್ರ ಬಿಟ್ಟಿಲ್ಲ. ಈ ಹಿಂದೆ ಹಲವರು ತಿಳುವಳಿಕೆ ಹೇಳಿದ್ದರೂ ಸಹ ಮತ್ತೆ ಅದೇ ರಾಗ ಮುಂದುವರೆಸಿರುವ ರಾಜ್ ಮೊಹಮ್ಮದ್ ವಿರುದ್ಧ ಪತ್ನಿ ದೂರು ನೀಡಲು ಮುಂದಾಗಿದ್ದಾರೆ.

Published On - 10:39 pm, Wed, 24 July 24

ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ