Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿಬಿದ್ದ ಹೆಡ್​ಕಾನ್ಸ್​ಟೇಬಲ್, ಇಬ್ಬರನ್ನು ಲಾಕ್ ಮಾಡಿ ಎಸ್​ಪಿಗೆ ಕರೆದ ಮಾಡಿದ ಪತ್ನಿ

ಕಳೆದ 4 ವರ್ಷಗಳಿಂದ ಪತ್ನಿಯನ್ನು ದೂರ ಮಾಡಿ ಪ್ರೇಯಸಿಯೊಂದಿಗೆ ಎಂಜಾಯ್​ ಮಾಡುತ್ತ ಕಾಲ ಕಳೆಯುತ್ತಿದ್ದ ಹೆಡ್​ ಕಾನ್ಸ್​ಟೇಬಲ್​ ಇದೀಗ ಲಾಕ್​ ಆಗಿದ್ದಾನೆ. ಕದ್ದು ಮುಚ್ಚಿ ಪ್ರೇಯಿಸಿ ಜೊತೆ ಲವ್ವಿಡವ್ವಿ ಇಟ್ಟುಕೊಂಡಿದ್ದ ಹೆಡ್​ಕಾನ್ಸ್​ಟೇಬಲ್​​ನನ್ನು ಪತ್ನಿಯೇ ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಅಲ್ಲದೇ ಇಬ್ಬರನ್ನೂ ಲಾಕ್ ಮಾಡಿ ಎಸ್​ಪಿಗೆ ದೂರು ನೀಡಿದ್ದಾರೆ,

ಪ್ರೇಯಸಿ ಜತೆ ಇರುವಾಗಲೇ ಸಿಕ್ಕಿಬಿದ್ದ ಹೆಡ್​ಕಾನ್ಸ್​ಟೇಬಲ್, ಇಬ್ಬರನ್ನು ಲಾಕ್ ಮಾಡಿ ಎಸ್​ಪಿಗೆ ಕರೆದ ಮಾಡಿದ ಪತ್ನಿ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on:Jul 24, 2024 | 10:47 PM

ರಾಯಚೂರು, (ಜುಲೈ 24): ಗಂಡ ಸಿರವಾರ  ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿದ್ದರೆ, ಹೆಂಡ್ತಿ ದೇವದುರ್ಗ ಠಾಣೆ ಕಾನ್ಸ್ ಟೇಬಲ್ ಆಗಿದ್ದಾರೆ. ಇಬ್ಬರು ಅನ್ಯೂನ್ಯವಾಗಿದ್ದರು. ಆದ್ರೆ, ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್ ಬೇರೆ ಹೆಣ್ಮಗಳ ಪ್ರೀತಿಯ ಬಲೆಗೆ ಬಿದ್ದಿದ್ದು, ಇದೀಗ ರಾಜ್ ಮೊಹಮ್ಮದ್ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಚೆಲ್ಲಾಟವಾಡುವಾಗಲೇ ಹೆಂಡ್ತಿ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಹೌದು.. ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಮನೆಯೊಂದರಲ್ಲಿ ಹೆಡ್​ಕಾನ್ಸ್​ಟೇಬ್ ರಾಜ್ ಮೊಹಮ್ಮದ್, ಪ್ರೇಯಸಿ ಜೊತೆ ಇದ್ದಾಗಲೇ ಸಿಕ್ಕಿಬಿದ್ದಿದ್ದಾರೆ. ತನ್ನ ಪತಿ ಪ್ರೇಯಸಿ ಜೊತೆ ಇರುವುದನ್ನು ರೆಡ್​ಹ್ಯಾಂಡ್​ ಆಗಿ ಲಾಕ್ ಮಾಡಿದ ಪತ್ನಿ ಪ್ಯಾರಿ ಬೇಗಂ, ಬಳಿಕ ಎಸ್​​ಪಿಗೆ ಕರೆ ಮಾಡಿ ದೂರು ನೀಡಿದ್ದಾರೆ.

ರಾಜ್ ಮೊಹಮ್ಮದ್ , ಪ್ರೇಯಸಿಗಾಗಿ ಕಳೆದ 4 ವರ್ಷಗಳಿಂದ ಪತ್ನಿಯನ್ನು ದೂರ ಮಾಡಿದ್ದ ಎಂದು ಆರೋಪಿಸಲಾಗಿದೆ. ಆದ್ರೆ, ಈ ಬಾರಿ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್, ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಮನೆಯೊಂದರಲ್ಲಿ ಪ್ರೇಯಸಿ ಜೊತೆ ಇರುವಾಗಲೇ ಪತ್ನಿ ಪ್ಯಾರಿ ಬೇಗಂ ಲಾಕ್ ಮಾಡಿದ್ದು, ಬಳಿಕ ಕರೆ ಮಾಡಿ ಎಸ್​​ಪಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಲೇಡಿಸ್ ಪಿಜಿಯಲ್ಲಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಕೊಲೆಗಾರನ ಸುಳಿವು ಪತ್ತೆ, ಯಾರು ಗೊತ್ತಾ?

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆ ಪೊಲೀಸರು ಆಗಮಿಸಿ ಮನೆ ಲಾಕ್​ ಓಪನ್ ಮಾಡಿ ಬಳಿಕ ಹೆಡ್​ಕಾನ್ಸ್​ಟೇಬಲ್ ರಾಜ್ ಮೊಹಮ್ಮದ್ ಮತ್ತು ಪ್ರೇಯಸಿಯನ್ನು ಕರೆದುಕೊಂಡು ಹೋಗಿದ್ದಾರೆ.  ಈ ವೇಳೆ ಸುತ್ತಮುತ್ತಲಿನ ಜನರು ಜಮಾವಣೆಗೊಂಡಿದ್ದರು.

ಈ ಹಿಂದೆ ಎರಡು ಬಾರಿ ಹಿರಿಯ ಅಧಿಕಾರಿಗಳು ರಾಜ್ ಮೊಹಮ್ಮದ್​ಗೆ ಬೈದು ಬುದ್ದಿ ಹೇಳಿದ್ದರು. ಆದ್ರೆ, ರಾಜ್ ಮೊಹಮ್ಮದ್ ತನ್ನ ಚಾಳಿ ಹಳೇ ಚಾಳಿ ಮಾತ್ರ ಬಿಟ್ಟಿಲ್ಲ. ಈ ಹಿಂದೆ ಹಲವರು ತಿಳುವಳಿಕೆ ಹೇಳಿದ್ದರೂ ಸಹ ಮತ್ತೆ ಅದೇ ರಾಗ ಮುಂದುವರೆಸಿರುವ ರಾಜ್ ಮೊಹಮ್ಮದ್ ವಿರುದ್ಧ ಪತ್ನಿ ದೂರು ನೀಡಲು ಮುಂದಾಗಿದ್ದಾರೆ.

Published On - 10:39 pm, Wed, 24 July 24

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ