AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ತಾಯಿ: ಸುಸೂತ್ರವಾಗಿ ಹೆರಿಗೆ ಮಾಡಿಸಿದ ಶುಶ್ರೂಷಕಿಗೆ ಸ್ಥಳೀಯರ ಶ್ಲಾಘನೆ

ಹೆರಿಕೆ ನೋವು ಕಾಣಿಸಿಕೊಂಡ ಹಿನ್ನೆಲೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದ್ರೆ ಮಾರ್ಗ ಮಧ್ಯೆ ನೋವು ಹೆಚ್ಚಾದ ಕಾರಣ ಆಂಬುಲೆನ್ಸ್‌ ವಾಹನದಲ್ಲಿಯೇ ಹೆರಿಗೆ ಮಾಡಲಾಗಿದೆ.

ಆಂಬ್ಯುಲೆನ್ಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ತಾಯಿ: ಸುಸೂತ್ರವಾಗಿ ಹೆರಿಗೆ ಮಾಡಿಸಿದ ಶುಶ್ರೂಷಕಿಗೆ ಸ್ಥಳೀಯರ ಶ್ಲಾಘನೆ
ಆಂಬುಲೆನ್ಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ತಾಯಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 01, 2023 | 9:38 AM

Share

ಮುಖ್ಯಾಂಶಗಳು

  • ಚಲಿಸುತ್ತಿದ್ದ 108 ಆಂಬುಲೆನ್ಸ್‌ ವಾಹನದಲ್ಲಿ ಹೆರಿಗೆ ಮಾಡಲಾಗಿದೆ
  • ಅಂಬುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ರೇಣುಕಾ
  • ಅಂಬುಲೆನ್ಸ್ ನಲ್ಲಿ ಹೆರಿಗೆ ಮಾಡಿಸಿ ಶುಶ್ರೂಷಕಿ ಲಕ್ಷ್ಮೀ ಹಾಗೂ ಚಾಲಕ ಯಾಸಿನ್ ಗೆ ಸ್ಥಳೀಯರ ಶ್ಲಾಘನೆ

ರಾಯಚೂರು: ಚಲಿಸುತ್ತಿದ್ದ 108 ಆಂಬುಲೆನ್ಸ್‌(Ambulance) ವಾಹನದಲ್ಲಿಯೇ ತಾಯಿ ಮಗುವಿಗೆ ಜನ್ಮ(Birth) ನೀಡಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕುರುಕುಂದ ಗ್ರಾಮದ ಬಳಿ ಹೆರಿಗೆಯಾಗಿದೆ. ಹೆರಿಕೆ ನೋವು ಕಾಣಿಸಿಕೊಂಡ ಹಿನ್ನೆಲೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದ್ರೆ ಮಾರ್ಗ ಮಧ್ಯೆ ನೋವು ಹೆಚ್ಚಾದ ಕಾರಣ ಆಂಬುಲೆನ್ಸ್‌ ವಾಹನದಲ್ಲಿಯೇ ಹೆರಿಗೆ ಮಾಡಲಾಗಿದೆ. ಗರ್ಭಿಣಿ ಮಹಿಳೆ ಆರೋಗ್ಯಕರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ನಿನ್ನೆ(ಮೇ 31) ತಡ ರಾತ್ರಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಇದೇ ಗ್ರಾಮದ ರೇಣುಕಾ ವಿರೇಶ್ ಎಂಬ ಗರ್ಭಿಣಿ ಮಹಿಳೆಯನ್ನು 108 ಮೂಲಕ ಸಿರವಾರ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಮಾರ್ಗ ಮಧ್ಯೆ ರೇಣುಕಾಳ ಹೆರಿಗೆ ನೋವು ತೀವ್ರಗೊಂಡಿದ್ದು ಮಾರ್ಗ ಮಧ್ಯೆಯೇ ಶುಶ್ರೂಷಕಿ ಲಕ್ಷ್ಮೀ ಅವರು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಂಬುಲೆನ್ಸ್‌ ವಾಹನದಲ್ಲಿಯೇ ರೇಣುಕಾಳ ಹೆರಿಗೆ ಮಾಡಿಸಿದ್ದಾರೆ. ಆಂಬುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗುವನ್ನು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಅಂಬುಲೆನ್ಸ್ ನಲ್ಲಿ ಹೆರಿಗೆ ಮಾಡಿಸಿದ ಶುಶ್ರೂಷಕಿ ಲಕ್ಷ್ಮೀ ಹಾಗೂ ಚಾಲಕ ಯಾಸಿನ್​ಗೆ ಸ್ಥಳೀಯರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Chikmagluru: ಚಲಿಸುವ ಬಸ್​ನಲ್ಲಿ ಹೆರಿಗೆ ನೋವು; ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ ಮಹಿಳಾ ಕಂಡಕ್ಟರ್.. ಪ್ರಶಂಸೆಯ ಮಹಾಪೂರ!

ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹೊತ್ತು 200 ಕಿ.ಮೀ ಪ್ರಯಾಣಿಸಿದ ವ್ಯಕ್ತಿ

ವಲಸೆ ಕಾರ್ಮಿಕರೊಬ್ಬರು ಆಂಬ್ಯುಲೆನ್ಸ್​ಗೆ ಕೊಡಲು ಹಣವಿಲ್ಲದೆ ಮಗನ ಶವವನ್ನು ಚೀಲದೊಳಗೆ ಹಾಕಿ 200 ಕಿ.ಮೀಗಳಷ್ಟು ದೂರ ಪ್ರಯಾಣಿಸಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುಸ್ತಫಾನಗರ ಗ್ರಾಮಪಂಚಾಯತ್​ನ ಡಂಗಿಪಾರಾ ಗ್ರಾಮದ ವಲಸೆ ಕಾರ್ಮಿಕ ಅಸೀಂ ದೇವಶರ್ಮಾ, ಆಂಬ್ಯುಲೆನ್ಸ್​ ಚಾಲಕ ಕೇಳಿದ ಶುಲ್ಕವನ್ನು ಭರಿಸಲು ಸಾಧ್ಯವಾಗದ ಕಾರಣ ಶವವನ್ನು ಹೊತ್ತುಕೊಂಡು 200 ಕಿ.ಮೀ ದೂರ ಸಾಗಿದ್ದಾರೆ. ಕಣ್ಣೀರು ತಡೆದುಕೊಂಡು ಬಸ್ ಹತ್ತಿದ್ದರು, ಬಸ್​ನಲ್ಲಿ ಯಾರಿಗೂ ತಿಳಿಯದಂತೆ ಎಚ್ಚರವಹಿಸಿದ್ದರು, ಒಂದೊಮ್ಮೆ ಹೇಳಿಬಿಟ್ಟರೆ ತಮ್ಮನ್ನು ಬಸ್ಸಿನಿಂದ ಇಳಿಸಬಹುದು ಎನ್ನುವ ಭಯವಿತ್ತು ಎಂದು ಹೇಳಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:23 am, Thu, 1 June 23

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ