AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಟ್ಟಿಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ: ಇಬ್ಬರ ಬಂಧನ, ಅನೈತಿಕ ಸಂಬಂಧ ಹತ್ಯೆಗೆ ಕಾರಣ

ಘಟನೆ ನಡೆದ ದಿನ ಹಂತಕರು ನಡುರಾತ್ರಿ ಪೂಜೆ ಮಾಡೋಣ ಅಂತ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ರನ್ನು ಕರೆಸಿಕೊಂಡಿದ್ದಾರೆ. ಹಣ, ಚಿನ್ನಾಭರಣಗಳಿಗೆ ಅರಿಶಿನ, ಕುಂಕುಮ ಸಿಂಪಡಿಸಿ ಪೂಜೆ ನೆಪದಲ್ಲಿ ಕೊಲೆ ಮಾಡಿಬಿಟ್ಟಿದ್ದಾರೆ. ಒಬ್ಬ ಹಂತಕ ಆರೋಪಿ ಸಮೀರ್ ಕೊಲೆ ಬಳಿಕ ಆಕೆಯನ್ನು ಆಕೆಯ ಮನೆಯ ಬಳಿಯೇ ಸುಟ್ಟು ಹಾಕಿದ್ದ. ಬಳಿಕ ಆಕೆಯ ಬಳಿಯಿದ್ದ 10 ಲಕ್ಷ ಹಣ ಹಾಗೂ ಚಿನ್ನಾಭರಣ ಪಡೆದು ಸ್ನೇಹಿತ ಮೊಹಮ್ಮದ್ ಕೈಫ್ ಜೊತೆ ಆತನ ಕಾರ್ ನಲ್ಲಿ ಎಸ್ಕೇಪ್ ಆಗಿದ್ದ.

ಹಟ್ಟಿಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ: ಇಬ್ಬರ ಬಂಧನ, ಅನೈತಿಕ ಸಂಬಂಧ ಹತ್ಯೆಗೆ ಕಾರಣ
ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ: ಇಬ್ಬರ ಬಂಧನ
ಭೀಮೇಶ್​​ ಪೂಜಾರ್
| Edited By: |

Updated on: Nov 14, 2023 | 9:45 AM

Share

ರಾಯಚೂರು, ನವೆಂಬರ್​ 14: ಹಟ್ಟಿ ಪಟ್ಟಣದ (raichur, hutti) ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ (woman Lab technician murder) ಪ್ರಕರಣದಲ್ಲಿ ಅದು ಆತ್ಮಹತ್ಯೆಯಲ್ಲ; ಕೊಲೆ ಅನ್ನೋದನ್ನ ಹಟ್ಟಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೊಲೆ ನಡೆದ 20 ದಿನಗಳ ಬಳಿಕ ಹಟ್ಟಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಮಹಿಳೆಯು ಮಗನ ವಯಸ್ಸಿನ ಯುವಕನ ಜೊತೆ ಅನೈತಿಕ ಸಂಬಂಧ (illicit affair) ಹೊಂದಿದ್ದಳು. ಮಾಟ-ಮಂತ್ರ ಪರಿಹಾರದ ಪೂಜೆ ಅಂತ ಪುಸಲಾಯಿಸಿ, ನಡುರಾತ್ರಿ ಆ ಮಹಿಳೆಯನ್ನು ಕರೆಸಿಕೊಂಡು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಘಟನೆ ನಡೆದಿತ್ತು. ಸಮೀರ್ ಸೊಹೈಲ್(23) ಹಾಗೂ ಮೊಹಮ್ಮದ್ ಕೈಫ್(23)ಬಂಧಿತರು.

ಕಳೆದ ನವೆಂಬರ್ 26 ರಂದು ಮಂಜುಳಾ ಅನ್ನೋ ಲ್ಯಾಬ್ ಟೆಕ್ನಿಶಿಯನ್ ಭೀಕರ ಕೊಲೆಯಾಗಿತ್ತು. ಮೃತ ಮಂಜುಳಾ ಮಂಡಿ ನೋವು ಸೇರಿ ಇತರೆ ಖಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿಂದೆ ಆಕೆ ಮನೆಯಲ್ಲಿದ್ದ ಚಿನ್ನಾಭರಣ, ನಗದು ಕಳುವಾಗಿತ್ತು. ಹೀಗಾಗಿ ಯಾರೋ ಮಾಟ-ಮಂತ್ರ ಮಾಡಿಸಿರೊ ಬಗ್ಗೆ ಆಕೆಗೆ ಅನುಮಾನವಿತ್ತು.

ಇದನ್ನೂ ಓದಿ: ಅನೈತಿಕ ಸಂಬಂಧವಿಟ್ಟುಕೊಂಡಿರುವ ಪತ್ನಿ, ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್

ಈ ಬಗ್ಗೆ ಘಟನೆ ನಡೆದ ದಿನ ಹಂತಕರು ನಡುರಾತ್ರಿ ಪೂಜೆ ಮಾಡೋಣ ಅಂತ ಕರೆಸಿಕೊಂಡಿದ್ದಾರೆ. ಹಣ, ಚಿನ್ನಾಭರಣಗಳಿಗೆ ಅರಿಶಿನ, ಕುಂಕುಮ ಸಿಂಪಡಿಸಿ ಪೂಜೆ ನೆಪದಲ್ಲಿ ಕೊಲೆ ಮಾಡಿಬಿಟ್ಟಿದ್ದಾರೆ. ಒಬ್ಬ ಹಂತಕ ಆರೋಪಿ ಸಮೀರ್ ಕೊಲೆ ಬಳಿಕ ಆಕೆಯನ್ನು ಆಕೆಯ ಮನೆಯ ಬಳಿಯೇ ಸುಟ್ಟು ಹಾಕಿದ್ದ. ಬಳಿಕ ಆಕೆಯ ಬಳಿಯಿದ್ದ 10 ಲಕ್ಷ ಹಣ ಹಾಗೂ ಚಿನ್ನಾಭರಣ ಪಡೆದು ಸ್ನೇಹಿತ ಮೊಹಮ್ಮದ್ ಕೈಫ್ ಜೊತೆ ಆತನ ಕಾರ್ ನಲ್ಲಿ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: ಹಟ್ಟಿ ಸರ್ಕಾರಿ ಉದ್ಯೋಗಸ್ಥ ಮಹಿಳೆ ಬೆಂಕಿಯಲ್ಲಿ ಭಸ್ಮವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! 10 ಲಕ್ಷ ನಗದು, ಚಿನ್ನಾಭರಣ ನಾಪತ್ತೆ

ಇಬ್ಬರೂ ಆರೋಪಿಗಳಿಂದ 7,49 ನಗದು, 9.7 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣ ಸೇರಿದಂತೆ ಕಾರು, ಬೈಕ್ ಸೇರಿ ಒಟ್ಟು 22 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ತನಿಖೆ ವೇಳೆ ಬೆಚ್ಚಿ ಬೀಳಿಸೊ ಸತ್ಯ ಬಾಯ್ಬಿಟ್ಟ ಹಂತಕ ಸಮೀರ್ ಸೋಹೈಲ್, ಮೃತ ಮಂಜುಳಾ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಗಿ ಹೇಳಿದ್ದಾನೆ. ಹಟ್ಟಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ