Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಟ್ಟಿಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ: ಇಬ್ಬರ ಬಂಧನ, ಅನೈತಿಕ ಸಂಬಂಧ ಹತ್ಯೆಗೆ ಕಾರಣ

ಘಟನೆ ನಡೆದ ದಿನ ಹಂತಕರು ನಡುರಾತ್ರಿ ಪೂಜೆ ಮಾಡೋಣ ಅಂತ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ರನ್ನು ಕರೆಸಿಕೊಂಡಿದ್ದಾರೆ. ಹಣ, ಚಿನ್ನಾಭರಣಗಳಿಗೆ ಅರಿಶಿನ, ಕುಂಕುಮ ಸಿಂಪಡಿಸಿ ಪೂಜೆ ನೆಪದಲ್ಲಿ ಕೊಲೆ ಮಾಡಿಬಿಟ್ಟಿದ್ದಾರೆ. ಒಬ್ಬ ಹಂತಕ ಆರೋಪಿ ಸಮೀರ್ ಕೊಲೆ ಬಳಿಕ ಆಕೆಯನ್ನು ಆಕೆಯ ಮನೆಯ ಬಳಿಯೇ ಸುಟ್ಟು ಹಾಕಿದ್ದ. ಬಳಿಕ ಆಕೆಯ ಬಳಿಯಿದ್ದ 10 ಲಕ್ಷ ಹಣ ಹಾಗೂ ಚಿನ್ನಾಭರಣ ಪಡೆದು ಸ್ನೇಹಿತ ಮೊಹಮ್ಮದ್ ಕೈಫ್ ಜೊತೆ ಆತನ ಕಾರ್ ನಲ್ಲಿ ಎಸ್ಕೇಪ್ ಆಗಿದ್ದ.

ಹಟ್ಟಿಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ: ಇಬ್ಬರ ಬಂಧನ, ಅನೈತಿಕ ಸಂಬಂಧ ಹತ್ಯೆಗೆ ಕಾರಣ
ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ: ಇಬ್ಬರ ಬಂಧನ
Follow us
ಭೀಮೇಶ್​​ ಪೂಜಾರ್
| Updated By: ಸಾಧು ಶ್ರೀನಾಥ್​

Updated on: Nov 14, 2023 | 9:45 AM

ರಾಯಚೂರು, ನವೆಂಬರ್​ 14: ಹಟ್ಟಿ ಪಟ್ಟಣದ (raichur, hutti) ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದ (woman Lab technician murder) ಪ್ರಕರಣದಲ್ಲಿ ಅದು ಆತ್ಮಹತ್ಯೆಯಲ್ಲ; ಕೊಲೆ ಅನ್ನೋದನ್ನ ಹಟ್ಟಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೊಲೆ ನಡೆದ 20 ದಿನಗಳ ಬಳಿಕ ಹಟ್ಟಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಮಹಿಳೆಯು ಮಗನ ವಯಸ್ಸಿನ ಯುವಕನ ಜೊತೆ ಅನೈತಿಕ ಸಂಬಂಧ (illicit affair) ಹೊಂದಿದ್ದಳು. ಮಾಟ-ಮಂತ್ರ ಪರಿಹಾರದ ಪೂಜೆ ಅಂತ ಪುಸಲಾಯಿಸಿ, ನಡುರಾತ್ರಿ ಆ ಮಹಿಳೆಯನ್ನು ಕರೆಸಿಕೊಂಡು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಘಟನೆ ನಡೆದಿತ್ತು. ಸಮೀರ್ ಸೊಹೈಲ್(23) ಹಾಗೂ ಮೊಹಮ್ಮದ್ ಕೈಫ್(23)ಬಂಧಿತರು.

ಕಳೆದ ನವೆಂಬರ್ 26 ರಂದು ಮಂಜುಳಾ ಅನ್ನೋ ಲ್ಯಾಬ್ ಟೆಕ್ನಿಶಿಯನ್ ಭೀಕರ ಕೊಲೆಯಾಗಿತ್ತು. ಮೃತ ಮಂಜುಳಾ ಮಂಡಿ ನೋವು ಸೇರಿ ಇತರೆ ಖಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿಂದೆ ಆಕೆ ಮನೆಯಲ್ಲಿದ್ದ ಚಿನ್ನಾಭರಣ, ನಗದು ಕಳುವಾಗಿತ್ತು. ಹೀಗಾಗಿ ಯಾರೋ ಮಾಟ-ಮಂತ್ರ ಮಾಡಿಸಿರೊ ಬಗ್ಗೆ ಆಕೆಗೆ ಅನುಮಾನವಿತ್ತು.

ಇದನ್ನೂ ಓದಿ: ಅನೈತಿಕ ಸಂಬಂಧವಿಟ್ಟುಕೊಂಡಿರುವ ಪತ್ನಿ, ಪತಿಯಿಂದ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್

ಈ ಬಗ್ಗೆ ಘಟನೆ ನಡೆದ ದಿನ ಹಂತಕರು ನಡುರಾತ್ರಿ ಪೂಜೆ ಮಾಡೋಣ ಅಂತ ಕರೆಸಿಕೊಂಡಿದ್ದಾರೆ. ಹಣ, ಚಿನ್ನಾಭರಣಗಳಿಗೆ ಅರಿಶಿನ, ಕುಂಕುಮ ಸಿಂಪಡಿಸಿ ಪೂಜೆ ನೆಪದಲ್ಲಿ ಕೊಲೆ ಮಾಡಿಬಿಟ್ಟಿದ್ದಾರೆ. ಒಬ್ಬ ಹಂತಕ ಆರೋಪಿ ಸಮೀರ್ ಕೊಲೆ ಬಳಿಕ ಆಕೆಯನ್ನು ಆಕೆಯ ಮನೆಯ ಬಳಿಯೇ ಸುಟ್ಟು ಹಾಕಿದ್ದ. ಬಳಿಕ ಆಕೆಯ ಬಳಿಯಿದ್ದ 10 ಲಕ್ಷ ಹಣ ಹಾಗೂ ಚಿನ್ನಾಭರಣ ಪಡೆದು ಸ್ನೇಹಿತ ಮೊಹಮ್ಮದ್ ಕೈಫ್ ಜೊತೆ ಆತನ ಕಾರ್ ನಲ್ಲಿ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: ಹಟ್ಟಿ ಸರ್ಕಾರಿ ಉದ್ಯೋಗಸ್ಥ ಮಹಿಳೆ ಬೆಂಕಿಯಲ್ಲಿ ಭಸ್ಮವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! 10 ಲಕ್ಷ ನಗದು, ಚಿನ್ನಾಭರಣ ನಾಪತ್ತೆ

ಇಬ್ಬರೂ ಆರೋಪಿಗಳಿಂದ 7,49 ನಗದು, 9.7 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣ ಸೇರಿದಂತೆ ಕಾರು, ಬೈಕ್ ಸೇರಿ ಒಟ್ಟು 22 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ತನಿಖೆ ವೇಳೆ ಬೆಚ್ಚಿ ಬೀಳಿಸೊ ಸತ್ಯ ಬಾಯ್ಬಿಟ್ಟ ಹಂತಕ ಸಮೀರ್ ಸೋಹೈಲ್, ಮೃತ ಮಂಜುಳಾ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಗಿ ಹೇಳಿದ್ದಾನೆ. ಹಟ್ಟಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?