AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ನಲ್ಲಿ ಸೀಟು ಸಿಗದೆ ಮಗುವನ್ನು ಲಗೇಜ್‌ ಕ್ಯಾರಿಯರ್‌ನಲ್ಲಿ ಮಲಗಿಸಿದ ತಾಯಿ, ವಿಡಿಯೋ ವೈರಲ್

ಹಬ್ಬ-ಹರಿದಿನ ಬಂತೆಂದರೆ ಸಾಕು ಎಲ್ಲ ಬಸ್‌ಗಳಲ್ಲೂ ಫುಲ್. ಅದರಲ್ಲೂ ಶಕ್ತಿ ಯೋಜನೆ ಬಂದಾಗಿನಿಂದ ಕೆಎಸ್​ಆರ್​ಟಿಸಿ ಬಸ್​ಗಳು ತುಂಬಿ ತುಳುಕುತ್ತಿವೆ. ಸೀಟಿಗಾಗಿ ಹಲವು ಕಡೆ ಗಲಾಟೆ ಮಾಡಿಕೊಂಡ ಉದಾಹರಣೆಗಳು ಇವೆ. ಇದರ ಮಧ್ಯ, ಮಹಿಳೆಯೊಬ್ಬರು ಸೀಟು ಸಿಗದಿದ್ದಕ್ಕೆ ತನ್ನ ಮಗುವನ್ನು ಬಸ್​ನ ಲಗೇಜ್ ಕ್ಯಾರಿಯರ್​ನಲ್ಲಿ ಮಲಗಿಸಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಭೀಮೇಶ್​​ ಪೂಜಾರ್
| Edited By: |

Updated on:Apr 08, 2024 | 6:29 PM

Share

ರಾಯಚೂರು, (ಏಪ್ರಿಲ್, 08): ಯುಗಾದಿ (Ugadi) ಮತ್ತು ರಂಜಾನ್ ಹಬ್ಬ (Festival) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳ ತೆರಳುತ್ತಿದ್ದಾರೆ. ಇದರಿಂದ ಬಸ್​ಗಳು (Bus( ಫುಲ್ ರಶ್​ ಆಗಿದ್ದು, ಸೀಟುಗಳು ಸಿಗದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಸೀಟು ಇಲ್ಲದಕ್ಕೆ ಮಹಿಳೆಯೊಬ್ಬರು ತನ್ನ ಮಗುವನ್ನು ಲಗೇಜ್​ ಕ್ಯಾರಿಯರ್​​ನಲ್ಲಿ ಮಲಗಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು-ಕಲಬುರಗಿ ತೆರಳುತ್ತಿದ್ದ ಬಸ್​ ಪುಲ್ ಗದ್ದಲ ಇದ್ದರಿಂದ ಮಹಿಳೆ ತನ್ನ ಮಗುವನ್ನು ಲಗೇಜ್ ಕ್ಯಾರಿಯರ್​ನಲ್ಲಿ ಮಲಗಿಸಿದ್ದು, ಸದ್ಯ ಮಗುವಿನ ಪ್ರಯಾಣದ ವಿಡಿಯೋ ಫುಲ್ ವೈರಲ್ ಆಗಿದೆ.

ಸೋಮವಾರ ಯುಗಾದಿ ಅಮಾವಾಸ್ಯೆ. ಹಾಗೇ ಶಕ್ತಿ ಯೋಜನೆ ಪರಿಣಾಮ ರಾಯಚೂರಿನಲ್ಲೂ ಸಹ ಬಹುತೇಕ ಸರಕಾರಿ ಬಸ್‌ಗಳು ಫುಲ್ ರಶ್ ಆಗಿವೆ. ಹೀಗಾಗಿ ಲಿಂಗಸಗೂರು-ಕಲಬುರಗಿ ಮಾರ್ಗದ ಬಸ್‌ ಪ್ರಯಾಣಿಕರಿಂದ ತುಂಬಿ ಹೋಗಿತ್ತು. ಮೊದಲೇ ಹೊರಗಡೆ ಸುಡು ಬಿಸಿಲು. ಇದರಿಂದ ಉಸಿರಾಡಲು ಕಷ್ಟ ಎಂಬಂತೆ ಪ್ರಯಾಣಿಕಕರು ಒಬ್ಬರಿಗೊಬ್ಬರು ತಳ್ಳಾಡುತ್ತಾ ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ.

ಹೀಗಾಗಿ ಸೀಟ್‌ ಸಿಗದೆ ನಿಂತಿದ್ದ ಮಹಿಳೆಯೊಬ್ಬರು, ಮಗುವನ್ನು ಹಿಡಿದುಕೊಂಡು ಪ್ರಯಾಣಿಸುವುದು ಕಷ್ಟ ಎಂದು ಲಗೇಜ್‌ಗಳನ್ನು ಕ್ಯಾರಿಯರ್‌ನಲ್ಲಿ ಮಲಗಿಸಿದ್ದಾರೆ. ಇನ್ನು ಮಹಿಳೆಯ ಐಡಿಯಾ ನೋಡಿ ಸಹ ಪ್ರಯಾಣಿಕರು ಫಿದಾ ಆಗಿದ್ದಾರೆ. ಅದರಲ್ಲೊಬ್ಬರು ತಮ್ಮ ಕೈಯಲ್ಲಿದ್ದ ಮೊಬೈಲ್​ ಮೂಲಕ ವಿಡಿಯೋ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಮಗು ಲಗೇಜ್​ ಕ್ಯಾರಿಯರ್​ನಲ್ಲಿ ಆಯಾಗಿ ಮಲಗಿ ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:28 pm, Mon, 8 April 24

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ