AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ನಲ್ಲಿ ಸೀಟು ಸಿಗದೆ ಮಗುವನ್ನು ಲಗೇಜ್‌ ಕ್ಯಾರಿಯರ್‌ನಲ್ಲಿ ಮಲಗಿಸಿದ ತಾಯಿ, ವಿಡಿಯೋ ವೈರಲ್

ಹಬ್ಬ-ಹರಿದಿನ ಬಂತೆಂದರೆ ಸಾಕು ಎಲ್ಲ ಬಸ್‌ಗಳಲ್ಲೂ ಫುಲ್. ಅದರಲ್ಲೂ ಶಕ್ತಿ ಯೋಜನೆ ಬಂದಾಗಿನಿಂದ ಕೆಎಸ್​ಆರ್​ಟಿಸಿ ಬಸ್​ಗಳು ತುಂಬಿ ತುಳುಕುತ್ತಿವೆ. ಸೀಟಿಗಾಗಿ ಹಲವು ಕಡೆ ಗಲಾಟೆ ಮಾಡಿಕೊಂಡ ಉದಾಹರಣೆಗಳು ಇವೆ. ಇದರ ಮಧ್ಯ, ಮಹಿಳೆಯೊಬ್ಬರು ಸೀಟು ಸಿಗದಿದ್ದಕ್ಕೆ ತನ್ನ ಮಗುವನ್ನು ಬಸ್​ನ ಲಗೇಜ್ ಕ್ಯಾರಿಯರ್​ನಲ್ಲಿ ಮಲಗಿಸಿದ್ದಾಳೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಭೀಮೇಶ್​​ ಪೂಜಾರ್
| Edited By: |

Updated on:Apr 08, 2024 | 6:29 PM

Share

ರಾಯಚೂರು, (ಏಪ್ರಿಲ್, 08): ಯುಗಾದಿ (Ugadi) ಮತ್ತು ರಂಜಾನ್ ಹಬ್ಬ (Festival) ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳ ತೆರಳುತ್ತಿದ್ದಾರೆ. ಇದರಿಂದ ಬಸ್​ಗಳು (Bus( ಫುಲ್ ರಶ್​ ಆಗಿದ್ದು, ಸೀಟುಗಳು ಸಿಗದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಸೀಟು ಇಲ್ಲದಕ್ಕೆ ಮಹಿಳೆಯೊಬ್ಬರು ತನ್ನ ಮಗುವನ್ನು ಲಗೇಜ್​ ಕ್ಯಾರಿಯರ್​​ನಲ್ಲಿ ಮಲಗಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರು-ಕಲಬುರಗಿ ತೆರಳುತ್ತಿದ್ದ ಬಸ್​ ಪುಲ್ ಗದ್ದಲ ಇದ್ದರಿಂದ ಮಹಿಳೆ ತನ್ನ ಮಗುವನ್ನು ಲಗೇಜ್ ಕ್ಯಾರಿಯರ್​ನಲ್ಲಿ ಮಲಗಿಸಿದ್ದು, ಸದ್ಯ ಮಗುವಿನ ಪ್ರಯಾಣದ ವಿಡಿಯೋ ಫುಲ್ ವೈರಲ್ ಆಗಿದೆ.

ಸೋಮವಾರ ಯುಗಾದಿ ಅಮಾವಾಸ್ಯೆ. ಹಾಗೇ ಶಕ್ತಿ ಯೋಜನೆ ಪರಿಣಾಮ ರಾಯಚೂರಿನಲ್ಲೂ ಸಹ ಬಹುತೇಕ ಸರಕಾರಿ ಬಸ್‌ಗಳು ಫುಲ್ ರಶ್ ಆಗಿವೆ. ಹೀಗಾಗಿ ಲಿಂಗಸಗೂರು-ಕಲಬುರಗಿ ಮಾರ್ಗದ ಬಸ್‌ ಪ್ರಯಾಣಿಕರಿಂದ ತುಂಬಿ ಹೋಗಿತ್ತು. ಮೊದಲೇ ಹೊರಗಡೆ ಸುಡು ಬಿಸಿಲು. ಇದರಿಂದ ಉಸಿರಾಡಲು ಕಷ್ಟ ಎಂಬಂತೆ ಪ್ರಯಾಣಿಕಕರು ಒಬ್ಬರಿಗೊಬ್ಬರು ತಳ್ಳಾಡುತ್ತಾ ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ.

ಹೀಗಾಗಿ ಸೀಟ್‌ ಸಿಗದೆ ನಿಂತಿದ್ದ ಮಹಿಳೆಯೊಬ್ಬರು, ಮಗುವನ್ನು ಹಿಡಿದುಕೊಂಡು ಪ್ರಯಾಣಿಸುವುದು ಕಷ್ಟ ಎಂದು ಲಗೇಜ್‌ಗಳನ್ನು ಕ್ಯಾರಿಯರ್‌ನಲ್ಲಿ ಮಲಗಿಸಿದ್ದಾರೆ. ಇನ್ನು ಮಹಿಳೆಯ ಐಡಿಯಾ ನೋಡಿ ಸಹ ಪ್ರಯಾಣಿಕರು ಫಿದಾ ಆಗಿದ್ದಾರೆ. ಅದರಲ್ಲೊಬ್ಬರು ತಮ್ಮ ಕೈಯಲ್ಲಿದ್ದ ಮೊಬೈಲ್​ ಮೂಲಕ ವಿಡಿಯೋ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಮಗು ಲಗೇಜ್​ ಕ್ಯಾರಿಯರ್​ನಲ್ಲಿ ಆಯಾಗಿ ಮಲಗಿ ಪ್ರಯಾಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:28 pm, Mon, 8 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!