AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ. ಇತ್ತ, ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ
ರಾಯಚೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ಎರಡು ದೂರು ದಾಖಲು (ಸಾಂದರ್ಭಿಕ ಚಿತ್ರ)Image Credit source: bit.ly/3g2VADu
ಭೀಮೇಶ್​​ ಪೂಜಾರ್
| Edited By: Rakesh Nayak Manchi|

Updated on: Nov 03, 2023 | 2:58 PM

Share

ರಾಯಚೂರು, ನ.3: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ (Dead Body) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಮಂಜುಳಾ (45) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದಳು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ.

ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ. ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.

ಪತಿಯನನ್ನ ಕಳೆದುಕೊಂಡು ತನ್ನ ಮಕ್ಕಳೊಂದಿಗೆ ಮಂಜುಳಾ ಹಟ್ಟಿ ಕಂಪನಿಯ ಕ್ಯಾಂಪ್​ನ ಜಿ.ಆರ್.ಕಾಲೋನಿಯಲ್ಲಿ ವಾಸವಿದ್ದರು. ಪತಿಯನ್ನು ಕಳೆದುಕೊಂಡಿದ್ದ ಆಕೆ, ಮಾನಿಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅ.26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರ ಮೇಲೂ ಶಂಕೆ ಇಲ್ಲವೆಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ