AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ. ಇತ್ತ, ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ
ರಾಯಚೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ಎರಡು ದೂರು ದಾಖಲು (ಸಾಂದರ್ಭಿಕ ಚಿತ್ರ)Image Credit source: bit.ly/3g2VADu
ಭೀಮೇಶ್​​ ಪೂಜಾರ್
| Edited By: |

Updated on: Nov 03, 2023 | 2:58 PM

Share

ರಾಯಚೂರು, ನ.3: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ (Dead Body) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಮಂಜುಳಾ (45) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದಳು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ.

ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ. ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.

ಪತಿಯನನ್ನ ಕಳೆದುಕೊಂಡು ತನ್ನ ಮಕ್ಕಳೊಂದಿಗೆ ಮಂಜುಳಾ ಹಟ್ಟಿ ಕಂಪನಿಯ ಕ್ಯಾಂಪ್​ನ ಜಿ.ಆರ್.ಕಾಲೋನಿಯಲ್ಲಿ ವಾಸವಿದ್ದರು. ಪತಿಯನ್ನು ಕಳೆದುಕೊಂಡಿದ್ದ ಆಕೆ, ಮಾನಿಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅ.26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರ ಮೇಲೂ ಶಂಕೆ ಇಲ್ಲವೆಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್