AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ. ಇತ್ತ, ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ
ರಾಯಚೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ಎರಡು ದೂರು ದಾಖಲು (ಸಾಂದರ್ಭಿಕ ಚಿತ್ರ)Image Credit source: bit.ly/3g2VADu
ಭೀಮೇಶ್​​ ಪೂಜಾರ್
| Edited By: |

Updated on: Nov 03, 2023 | 2:58 PM

Share

ರಾಯಚೂರು, ನ.3: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ (Dead Body) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಮಂಜುಳಾ (45) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದಳು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ.

ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ. ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.

ಪತಿಯನನ್ನ ಕಳೆದುಕೊಂಡು ತನ್ನ ಮಕ್ಕಳೊಂದಿಗೆ ಮಂಜುಳಾ ಹಟ್ಟಿ ಕಂಪನಿಯ ಕ್ಯಾಂಪ್​ನ ಜಿ.ಆರ್.ಕಾಲೋನಿಯಲ್ಲಿ ವಾಸವಿದ್ದರು. ಪತಿಯನ್ನು ಕಳೆದುಕೊಂಡಿದ್ದ ಆಕೆ, ಮಾನಿಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅ.26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರ ಮೇಲೂ ಶಂಕೆ ಇಲ್ಲವೆಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ