AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ. ಇತ್ತ, ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ
ರಾಯಚೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ಎರಡು ದೂರು ದಾಖಲು (ಸಾಂದರ್ಭಿಕ ಚಿತ್ರ)Image Credit source: bit.ly/3g2VADu
ಭೀಮೇಶ್​​ ಪೂಜಾರ್
| Edited By: |

Updated on: Nov 03, 2023 | 2:58 PM

Share

ರಾಯಚೂರು, ನ.3: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ (Dead Body) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಮಂಜುಳಾ (45) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದಳು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ.

ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ. ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.

ಪತಿಯನನ್ನ ಕಳೆದುಕೊಂಡು ತನ್ನ ಮಕ್ಕಳೊಂದಿಗೆ ಮಂಜುಳಾ ಹಟ್ಟಿ ಕಂಪನಿಯ ಕ್ಯಾಂಪ್​ನ ಜಿ.ಆರ್.ಕಾಲೋನಿಯಲ್ಲಿ ವಾಸವಿದ್ದರು. ಪತಿಯನ್ನು ಕಳೆದುಕೊಂಡಿದ್ದ ಆಕೆ, ಮಾನಿಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅ.26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರ ಮೇಲೂ ಶಂಕೆ ಇಲ್ಲವೆಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ