AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದಾರೆ. ಇತ್ತ, ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ
ರಾಯಚೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ಎರಡು ದೂರು ದಾಖಲು (ಸಾಂದರ್ಭಿಕ ಚಿತ್ರ)Image Credit source: bit.ly/3g2VADu
ಭೀಮೇಶ್​​ ಪೂಜಾರ್
| Edited By: Rakesh Nayak Manchi|

Updated on: Nov 03, 2023 | 2:58 PM

Share

ರಾಯಚೂರು, ನ.3: ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ (Dead Body) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದ್ದು, ಯಾರೋ ಪರಿಚಯಸ್ಥರು ಹಣ, ಚಿನ್ನ ಲೂಟಿ ಮಾಡಿ ಹತ್ಯೆಗೈದಿರುವ ಆರೋಪ ಮಾಡಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಮಂಜುಳಾ (45) ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದಳು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ.

ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ. ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.

ಪತಿಯನನ್ನ ಕಳೆದುಕೊಂಡು ತನ್ನ ಮಕ್ಕಳೊಂದಿಗೆ ಮಂಜುಳಾ ಹಟ್ಟಿ ಕಂಪನಿಯ ಕ್ಯಾಂಪ್​ನ ಜಿ.ಆರ್.ಕಾಲೋನಿಯಲ್ಲಿ ವಾಸವಿದ್ದರು. ಪತಿಯನ್ನು ಕಳೆದುಕೊಂಡಿದ್ದ ಆಕೆ, ಮಾನಿಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಅ.26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರ ಮೇಲೂ ಶಂಕೆ ಇಲ್ಲವೆಂದು ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ