AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ನ್ಯಾಯವಾಗಿದ್ದರೆ ಯಾಕೆ ಜೈಲಿಗೆ ಹೋಗುತ್ತಿದ್ದ?: ಡಿಕೆ ಶಿವಕುಮಾರ್ ವಿರುದ್ಧ ರಾಯಚೂರು ಗುತ್ತಿಗೆದಾರರ ಆಕ್ರೋಶ

ಬಿಬಿಎಂಪಿ ಕಾಮಗಾರಿ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ. ಇದೀಗ ಡಿಸಿಎಂ ವಿರುದ್ಧ ರಾಯಚೂರು ಜಿಲ್ಲಾ ಗುತ್ತಿಗೆದಾರರು ಆಕ್ರೋಶ ಹೊರಹಾಕಿದ್ದಾರೆ.

ಆತ ನ್ಯಾಯವಾಗಿದ್ದರೆ ಯಾಕೆ ಜೈಲಿಗೆ ಹೋಗುತ್ತಿದ್ದ?: ಡಿಕೆ ಶಿವಕುಮಾರ್ ವಿರುದ್ಧ ರಾಯಚೂರು ಗುತ್ತಿಗೆದಾರರ ಆಕ್ರೋಶ
ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ ರಾಯಚೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಪ್ಪ ಗಿರಿಣಿ
ಭೀಮೇಶ್​​ ಪೂಜಾರ್
| Edited By: Rakesh Nayak Manchi|

Updated on: Aug 11, 2023 | 2:42 PM

Share

ರಾಯಚೂರು, ಆಗಸ್ಟ್ 11: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D. K. Shivakumar) ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಿಲ್ ಬಾಕಿ ಇರಿಸಿ ಕಮಿಷನ್​ಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಶಿವಕುಮಾರ್ ವಿರುದ್ಧ ರಾಯಚೂರು (Raichur) ಜಿಲ್ಲಾ ಗುತ್ತಿಗೆದಾರರು ಸಿಡಿದೆದ್ದಿದ್ದಾರೆ.

ಆತ ನ್ಯಾಯವಾಗಿದ್ದರೆ ಆತ ಯಾಕೆ ಜೈಲಿಗೆ ಹೋಗುತ್ತಿದ್ದ? ಆತ ಎಲ್ಲ ದಾಖಲೆ ಕೊಟ್ಟಿದ್ದಿದ್ದರೆ ಆತ ಯಾಕೆ ಒಂಬತ್ತು ತಿಂಗಳು ಜೈಲಿನಲ್ಲಿ ಇರುತ್ತಿದ್ದ ಎಂದು ರಾಯಚೂರು ಜಿಲ್ಲೆಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಪ್ಪ ಗಿರಿಣಿ ಅವರು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇವು ಎಲ್ಲಾ ಕರ್ನಾಟಕ ರಾಜ್ಯದಲ್ಲಿ ನಡೆಯಲ್ಲ. ನೀನು ದುರಹಂಕಾರ ಇವೆಲ್ಲಾ ಬಿಟ್ಟು ಬಿಡು. ಗುತ್ತಿಗೆದಾರರಿಗೆ ಸರ್ಕಾರ ತರುವುದು ಗೊತ್ತು ಬೀಳಿಸುವುದು‌ ಗೊತ್ತು. ಹಿಂದೆ ಬಿಜೆಪಿ ಸರ್ಕಾರ ಬೀಳಿಸಿದ್ದೆವು, ನೀವು ಹೀಗೆ ಮಾಡಿದರೆ ಲೋಕಸಭೆಯಲ್ಲಿ ನಿಮ್ಮನ್ನ ಹಾಳು ಮಾಡುತ್ತೇವೆ ಎಂದು ನಾಗಪ್ಪ ಗಿರಿಣಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸರ್ಕಾರದ ಕುತ್ತಿಗೆಗೆ ಗುತ್ತಿಗೆ ಕುಣಿಕೆ! ಬೊಮ್ಮಾಯಿ, ಅಶೋಕ್ ಜತೆ ಗುತ್ತಿಗೆದಾರರ ಸಮಾಲೋಚನೆ, ಪಟ್ಟು ಬಿಡದ ಡಿಕೆ ಶಿವಕುಮಾರ್

ಕಾಮಗಾರಿಯ 46 ಸಾವಿರ ಕೋಟಿ ಬಾಕಿಬಿದೆ. 25-30 ಸಾವಿರ ಕೋಟಿ ಕೊಟ್ಟರೆ ಗುತ್ತಿಗೆದಾರರು ಬದುಕುತ್ತೇವೆ. ಜನವರಿಯಿಂದ ಹಣ ಬಂದಿಲ್ಲ. ಎಂಟು ತಿಂಗಳಾಯ್ತು. ಬಡ್ಡಿ ಕಟ್ಟಿ ಕೆಲಸ ಮಾಡಿಸಿದ್ದೇವೆ. ಇಎಂಐ ಕಟ್ಟಲಾಗದೇ ವಾಹನಗಳು ಸೀಜ್ ಆಗಿವೆ ಎಂದು ಅವರು ಅಸಾಮಾಧನ ಹೊರಹಾಕಿದರು.

ನಮ್ಮ ಜಿಲ್ಲೆಯ ಗುತ್ತಿಗೆದಾರರಿಗೆ 500-600 ಕೋಟಿ ಬರಬೇಕು. ಇದಕ್ಕೆ ದುಡ್ಡು ಕೊರತೆಯಿಲ್ಲ. ಕೆಕೆಆರ್​ಡಿಪಿಗೆ ಹೋಗಿ ನಮ್ಮ ಸಂಘದ ಪ್ರಮುಖರು ಬೇಟಿಯಾಗಿದ್ದಾರೆ. ಅಲ್ಲಿನ ಅಧಿಕಾರಿ 1900 ಕೋಟಿ ರೆಡಿ‌ ಇದೆ, ನಂದೇನು ತಪ್ಪಿಲ್ಲ ಅಂದಿದ್ದಾರೆ. ಆದರೆ ಇದರಲ್ಲೇನು ಇಂಟರೆಸ್ಟ್ ತೋರಿಸುತ್ತೀರಿ ಎಂದು ಕೇಳಿದ್ದಾರೆ. ಹಾಗಾದರೆ ಇದಲ್ಲಿ ನಿಂದೇನಿದೆಯಪ್ಪ ಇಂಟರೆಸ್ಟ್? ನಿಮ್ಮದು, ಸರ್ಕಾರದ್ದು ಇಂಟರೆಸ್ಟ್ ಬೇಡ. ನಮ್ಮ ಹಣ ಕೊಡಿ ಅಂತ ಅಧಿಕಾರಿ ವಿರುದ್ಧ ನಾಗಪ್ಪ ಗಿರಿಣಿ ಆಕ್ರೋಶ ಹೊರಹಾಕಿದರು. ಅಲ್ಲದೆ, ಇಂಟರೆಸ್ಟ್ ಅಂದರೆ ಪರ್ಸೆಂಟೇಜ್‌. ಇದನ್ನು ಬಿಡಿಸಿ ಹೇಳುವ ಹಾಗಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ