AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಸುಟ್ಟುಗೊಂಡಿದ್ದಾರೆ: ಸಿದ್ದರಾಮಯ್ಯ, ಎಂಬಿ ಪಾಟೀಲ್​ ವಿರುದ್ಧ ಯತ್ನಾಳ್ ಕಿಡಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸ‌ವನ್ನು ಮಾಡೋದಕ್ಕೆ ಹೋಗಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಸುಟ್ಟುಗೊಂಡಿದ್ದಾರೆ: ಸಿದ್ದರಾಮಯ್ಯ, ಎಂಬಿ ಪಾಟೀಲ್​ ವಿರುದ್ಧ ಯತ್ನಾಳ್ ಕಿಡಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಭೀಮೇಶ್​​ ಪೂಜಾರ್
| Edited By: |

Updated on: Dec 24, 2023 | 10:45 PM

Share

ರಾಯಚೂರು, ಡಿಸೆಂಬರ್​ 24: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಸಚಿವ ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸ‌ವನ್ನು ಮಾಡೋದಕ್ಕೆ ಹೋಗಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರನ್ನು ಕೂಡಿಸುವಂತಹ ಕೆಲಸ‌ ಮಾಡಬೇಕು ಆದರೆ ಕೂಡಿಸುವಂತಹ ಕೆಲಸವನ್ನು ವೀರಶೈವ ಮಹಾಸಭಾ ಮಾಡಿಲ್ಲ ಎಂದಿದ್ದಾರೆ.

ಈವರೆಗೂ ವೀರಶೈವ ಪರಂಪರೆ, ಬಸವಣ್ಣನ ಪರಂಪರೆ ಜಗಳಗಳಿವೆ. ಈಗಲೂ ಸಮಾಜ ಒಡೆಯುವ ಕೆಲಸವನ್ನೇ ಮಹಾಸಭಾ ಮಾಡುತ್ತಿದೆ. ನಮಗೆ 2ಡಿ ಕೊಟ್ಟಿದಾರೆ, ರಾಜ್ಯ ಸರ್ಕಾರ ನೋಟಿಫಿಕೇಷನ್‌ ಮಾಡಿದೆ. ಎಲ್ಲಾ ಸಮುದಾಯಕ್ಕೂ ನಾವು ನ್ಯಾಯ ಕೊಡುವ ಕೆಲಸ‌ ಮಾಡಿದ್ದೇವೆ. ಈಗ ಠರಾವು ಮಾಡುವ ಅವಶ್ಯಕತೆ‌ ಏನಿಲ್ಲ ಎಂದು ಹೇಳಿದ್ದಾರೆ.

ಪಂಚಮಸಾಲಿ ದೊಡ್ಡ ಸಮಾಜ, ಹೀಗಾಗಿ ನಮ್ಮ ಸ್ವಾಮೀಜಿಗೆ ಕರೆದಿಲ್ಲ

ಸಮಾವೇಶಕ್ಕೆ ಜಯಮೃತ್ಯುಂಜಯ ಸ್ವಾಮೀಜಿಗೆ ಆಹ್ವಾನ ನೀಡದ ವಿಚಾರವಾಗಿ ಮಾತನಾಡಿದ ಅವರು, ನಮ್ಮನ್ನು ನಿರ್ಲಕ್ಷಿಸಿದರೆ ವೀರಶೈವ ಮಹಾಸಭಾದವರಿಗೆ ಗೌರವ ಇರುತ್ತೆ. ಪಂಚಮಸಾಲಿ ದೊಡ್ಡ ಸಮಾಜ, ಹೀಗಾಗಿ ನಮ್ಮ ಸ್ವಾಮೀಜಿಗೆ ಕರೆದಿಲ್ಲ ಎಂದಿದ್ದಾರೆ.

ವೀರಶೈವ ಲಿಂಗಾಯತ ಎಂದು ಬರೆಸಿದರೆ ಮೀಸಲಾತಿ ಸಿಗುವುದಿಲ್ಲ

ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಉಪಜಾತಿ ಬರೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ರೀತಿ ಬರೆದಿದ್ದರಿಂದಲೇ ಅನೇಕ ಉಪ ಜಾತಿಗಳು ಬಿಟ್ಟು ಹೋಗಿವೆ. ಲಿಂಗಾಯತ ಸಮುದಾಯದಲ್ಲಿ ಒಳ ಪಂಗಡಗಳಿಗೆ ಮೀಸಲಾತಿ ಸಿಗುತ್ತಿದೆ. ಹಾಗಾಗಿ ಅವರೆಲ್ಲಾ ವೀರಶೈವ ಸಮುದಾಯದಿಂದ ಬಿಟ್ಟು ಹೋಗುತ್ತಿದ್ದಾರೆ.

ಇದನ್ನೂ ಓದಿ: ವೀರಶೈವ ಲಿಂಗಾಯತ ಸಮಾವೇಶಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಠಕ್ಕರ್

ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಉಪಜಾತಿಗಳನ್ನು‌ ಸೇರಿಸಿಕೊಂಡಿದ್ದಾರೆ. ಜಾತಿಗಣತಿಯಲ್ಲಿ ಇಂದು ವೀರಶೈವ ಸಮಾಜ 4ನೇ ಸ್ಥಾನಕ್ಕೆ ಹೋಗಿದೆ. ವೀರಶೈವ ಲಿಂಗಾಯತ ಎಂದು ಬರೆಸಿದರೆ ಮೀಸಲಾತಿ‌ ಸಿಗೋದಿಲ್ಲ ಅಂತಾ ಸಮಾಜದ ಬಹಳಷ್ಟು ಜನರ ಭಾವನೆಯಲ್ಲಿ ಬಂದಿದೆ. ಹೀಗಾಗಿ ಹಿಂದೂ‌ ಎಂದು ಬರೆಸಿ ತಮ್ಮ ಉಪಜಾತಿಗಳು ಬರೆಸುತ್ತಿದ್ದಾರೆ ಎಂದಿದ್ದಾರೆ.

ವೀರಶೈವ ಲಿಂಗಾಯತ ಎಂದು ಬರೆಸಿದರೆ ಮೀಸಲಾತಿ ಸಿಗುವುದಿಲ್ಲ. ವೀರಶೈವ ಸಮಾಜದಲ್ಲಿ ಲಿಂಗಾಯತರು ಅಂತಾ ಬರೆಸಿದವರು ನಾವೇ. ಆದರೆ ಬೇರೆಯವರೆಲ್ಲಾ ಬೇರೆ ಬೇರೆ ಕೆಟಗರಿಯಲ್ಲಿ ಹೋಗಿಬಿಟ್ಟಿದ್ದಾರೆ. ಬಣಜಿಗರು 2Aದಲ್ಲಿ ಹೋಗಿದ್ದಾರೆ, ಅಲ್ಲಿಂದ ಗಾಣಿಗ ಸಮಾಜ ಹೋಗಿದೆ. ತಮ್ಮ ಮಕ್ಕಳ‌ಭವಿಷ್ಯದ ಸಲುವಾಗಿ ಹೋಗಿದ್ದಾರೆ, ಉಳಿದವರು ನಾವಷ್ಟೇ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ