AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಆ 1ರಂದು ಈ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ನದಿಗಳ ಬೋರ್ಗರೆತ ಹೆಚ್ಚಾಗುತ್ತಿದೆ. ನದಿ ತೀರದ ಪ್ರದೇಶಗಳಲ್ಲಿ ಮತ್ತಷ್ಟು ಅವಾಂತರಗಳಾಗುವ ಸಾಧ್ಯತೆಗಳಿವೆ. ಹೀಗಾಗಿ ಮಕ್ಕಳ ಹಿತದೃಷ್ಟಿಯಿಂದಾಗಿ ದಕ್ಚಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್​ 1ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾ ಡಿಸಿ ಆದೇಶಿಸಿದ್ದಾರೆ.

ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಆ 1ರಂದು ಈ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ
ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಆ.1ರಂದು ಈ ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 31, 2024 | 10:34 PM

Share

ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ಮಳೆ (Rain) ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನದಿಗಳು ಬೋರ್ಗರೆಯುತ್ತಿದ್ರೆ, ಪ್ರವಾಹದ ನೀರು ಜನವಸತಿ ಪ್ರದೇಶನವನ್ನೂ ಆಪೋಷನಕ್ಕೆ ತೆಗೆದುಕೊಂಡಿದೆ. ಮನೆಗಳನ್ನು ಕಳೆದುಕೊಂಡು ಜನರು ಕಂಗಾಲಾಗಿದ್ದಾರೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ನಾಳೆ ಕೂಡ ಕೆಲ ಜಿಲ್ಲೆಗಳಿಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (holiday) ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ನೀಡಿ ಆದೇಶಿಸಲಾಗಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?

ಉಡುಪಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆಯಿಂದ ನಾಳೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: ಶಿರಾಡಿಘಾಟ್​ನಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ‌ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಆದೇಶ ಹೊರಡಿಸಿದ್ದಾರೆ.

ನಕಲಿ ಆದೇಶ ಪ್ರತಿ ವೈರಲ್​

ನಾಳೆ ಶಾಲೆಗಳಿಗೆ ರಜೆ ಎಂಬಂತೆ ಕೊಡಗು ಡಿಸಿ ನಕಲಿ ಆದೇಶ ಪ್ರತಿಯನ್ನು ಎಡಿಟ್ ಮಾಡಿ ಕಿಡಿಗೇಡಿಗಳಿಂದ ವೈರಲ್​ ಮಾಡುತ್ತಿದೆ. ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಎಂದು ನಕಲಿ ಪ್ರತಿ ವೈರಲ್​ ಮಾಡಲಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ.

ಇದನ್ನೂ ಓದಿ: Netravathi River: ಬಂಟ್ವಾಳದಲ್ಲಿ ನೇತ್ರಾವತಿ ನದಿ ಪ್ರವಾಹ, ಪುರಸಭಾ ವಾಣಿಜ್ಯ ಸಂಕೀರ್ಣ ಸೇರಿ ಹಲವೆಡೆ ಜಲಾವೃತ

ನಕಲಿ ಆದೇಶ ಪ್ರತಿ ಸೃಷ್ಟಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಇದುವರೆಗೆ ಈ ಬಗ್ಗೆ ಕೊಡಗು ಡಿಸಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು