AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur Rains: ಭಾರಿ ಮಳೆಯಿಂದ ಹುಂಜಿನ ಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ಧೆ ಸಾವು

ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ತೋಟಗಳು ಜಲಾವೃತವಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚೀಲಗಾನಹಳ್ಳಿಯಲ್ಲಿ ತೋಟದ ಮನೆಯಲ್ಲಿ ವಾಸವಿದ್ದ ಕುಟುಂಬವೊಂದನ್ನ ಅಗ್ನಿಶಾಮಕ ದಳ ರಕ್ಷಿಸಿದೆ.

Tumkur Rains: ಭಾರಿ ಮಳೆಯಿಂದ ಹುಂಜಿನ ಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ಧೆ ಸಾವು
ಭಾರಿ ಮಳೆಯಿಂದ ಹುಂಜಿನಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ಧೆ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Aug 04, 2022 | 6:45 PM

Share

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕುರುಡಗಾನಹಳ್ಳಿ ಬಳಿ ಭಾರಿ ಮಳೆಯಿಂದ ಹುಂಜಿನಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಲಕ್ಷ್ಮಮ್ಮ(70) ಸಾವನ್ನಪ್ಪಿದ ಮಹಿಳೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಮಧ್ಯೆ, ತುಮಕೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ತಿಪಟೂರು ತಾಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಈಡೇನಹಳ್ಳಿಯಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಗ್ರಾಮಕ್ಕೆ ತಹಶೀಲ್ದಾರ್ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಿಪಟೂರು KSRTC ಬಸ್ ನಿಲ್ದಾಣಕ್ಕೂ ಮಳೆ ನೀರು ನುಗ್ಗಿದೆ.

ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ತೋಟಗಳು ಜಲಾವೃತವಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚೀಲಗಾನಹಳ್ಳಿಯಲ್ಲಿ ತೋಟದ ಮನೆಯಲ್ಲಿ ವಾಸವಿದ್ದ ಕುಟುಂಬವೊಂದನ್ನ ಅಗ್ನಿಶಾಮಕ ದಳ ರಕ್ಷಿಸಿದೆ. ತೋಟದ ಮನೆಯಲ್ಲಿ ಸಿಲುಕಿದ್ದ ತಾಯಿ ಮಗುವನ್ನ ರಕ್ಷಣೆ ಮಾಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ: ಮಳೆಗೆ ಸ್ಕಿಡ್ ಆಗಿ ಬಿದ್ದ ದ್ವಿಚಕ್ರ ವಾಹನ ಸವಾರ, ತಲೆ ಮೇಲೆ ಹತ್ತಿದ ಐಚರ್ ವಾಹನ, ಸಾವು

ಬೆಂಗಳೂರು: ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ಬೈಕ್​ಗೆ ಹಿಂಬದಿಯಿಂದ ಈಚರ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೊಮ್ಮಸಂದ್ರದ ನಿವಾಸಿ ಕಿರಣ್ ಕುಮಾರ್ (30) ಮೃತ ದುರ್ದೈವಿ. ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಬಳಿ ಕೆಲಕಾಲ ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ಸವಾರ ಕಿರಣ್ ಕುಮಾರ್ ತನ್ನ ಸ್ಕೂಟಿ ವಾಹನ ಓಡಿಸಿಕೊಂಡು ಸಿಲ್ಕ್ ಬೋರ್ಡ್ ಕಡೆ ಹೊರಟಿದ್ದ. ಮಳೆಗೆ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾನೆ. ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಐಚರ್ ವಾಹನ ಆತನ ತಲೆಯ ಮೇಲೆ ಚಲಿಸಿದೆ. ಮೃತ ವ್ಯಕ್ತಿಯ ಶವ ಸೇಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ‌ ನೀಡಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮೃತ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಬೆಂಗಳೂರು-ಚೆನೈ ಹೈವೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

Published On - 6:18 pm, Thu, 4 August 22

Follow Us
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು