AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಕೊರತೆ; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧಿಸಿದ ಕರ್ನಾಟಕ

ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವುದನ್ನು ನಿಲ್ಲಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರವು ಪ್ರತಿ ಜಾನುವಾರು ಸಾವಿಗೆ 10 ಸಾವಿರ ರೂ., ಕುರಿ ಮತ್ತು ಆಡುಗಳು ಸತ್ತರೆ 5 ಸಾವಿರ ರೂ. ಪರಿಹಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಮಳೆ ಕೊರತೆ; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧಿಸಿದ ಕರ್ನಾಟಕ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 23, 2023 | 12:08 PM

Share

ಮೈಸೂರು, ಸೆಪ್ಟೆಂಬರ್ 23: ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತವಾಗಿದೆ. ಹೀಗಾಗಿ ನೆರೆಯ ರಾಜ್ಯಗಳಿಗೆ ಮೇವು (Fodder) ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಿ ಕರ್ನಾಟಕ (Karnataka) ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ (K Venkatesh) ಮಾಹಿತಿ ನೀಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇತರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮೇವು ಬೇರೆ ರಾಜ್ಯಗಳಿಗೆ ಮಾರಾಟ ಮತ್ತು ಸಾಗಾಣಿಕೆ ನಿಷೇಧಿಸುವಂತೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಮೇವು ಬೆಳೆಯಲು ರೈತರಿಗೆ ಉಚಿತವಾಗಿ ಬೀಜಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವುದನ್ನು ನಿಲ್ಲಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರವು ಪ್ರತಿ ಜಾನುವಾರು ಸಾವಿಗೆ 10 ಸಾವಿರ ರೂ., ಕುರಿ ಮತ್ತು ಆಡುಗಳು ಸತ್ತರೆ 5 ಸಾವಿರ ರೂ. ಪರಿಹಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಇದಕ್ಕಾಗಿ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ಆಗಸ್ಟ್​​, ಸೆಪ್ಟೆಂಬರ್​​ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇಲ್ಲಿವೆ ಕೆಲವು ಕಾರಣ

ಕೇಂದ್ರ ಸರಕಾರವು ಪಶು ಸಹಾಯಕ ಯೋಜನೆಗೆ ಅನುದಾನ ನೀಡಿದ್ದು, ಜಾನುವಾರು ನಿರ್ವಹಣೆಯಲ್ಲಿ ತರಬೇತಿ ಪಡೆದ ಪ್ರತಿ ಮಹಿಳಾ ಪಶು ಸಹಾಯಕರಿಗೆ ಮಾಸಿಕ 3,900 ರೂ.ಗಳನ್ನು ನೀಡಲಾಗುವುದು. ವರುಣಾ ಕ್ಷೇತ್ರದ ಉತ್ತನಹಳ್ಳಿಯಲ್ಲಿ ಸೆಪ್ಟೆಂಬರ್ 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ವೆಂಕಟೇಶ್ ಮಾಹಿತಿ ನೀಡಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಕಾಲುಬಾಯಿ ರೋಗವನ್ನು ತಡೆಗಟ್ಟಲು ನಾಲ್ಕನೇ ಸುತ್ತಿನ ಲಸಿಕೆ ನೀಡಿಕೆ ಸಹ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ