AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain Updates: ನಾಳೆ(ಡಿ.15) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ ಇನ್ನೂ 5 ದಿನ ಮಳೆ

ಮಾಂಡಸ್ ಚಂಡಮಾರುತದಿಂದ (Cyclone Mandous) ಕರ್ನಾಟಕದ ಅನೇಕ ಕಡೆ ಮಳೆಯಾಗುತ್ತಿದೆ. ಇನ್ನು ಕೆಲವೆಡೆ ಮೋಡಕವಿದ ಜೊತೆ ಶೀತಗಾಳಿ ಬೀಸುತ್ತಿದ್ದ, ಚಳಿಗೆ ಜನ ತತ್ತರಿಸಿದ್ದಾರೆ. ಇದರ ಮಧ್ಯೆ ಇನ್ನೂ ಐದು ಕರ್ನಾಟಕದಲ್ಲಿ ಮಳೆಯಾಗಲಿದೆ.

Karnataka Rain Updates: ನಾಳೆ(ಡಿ.15) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ ಇನ್ನೂ 5 ದಿನ ಮಳೆ
ಮಳೆ
TV9 Web
| Edited By: |

Updated on:Dec 14, 2022 | 5:17 PM

Share

ಬೆಂಗಳೂರು: ಕರ್ನಾಟಕದಲ್ಲಿ (Karnataka) ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣ, ತುಂತುರು ಮಳೆ(Rain), ವಿಪರೀತ ಚಳಿಯ ವಾತಾವರಣ ಇದೆ. ಇದರಿಂದ ಜನ ತಲ್ಲಣಗೊಂಡಿದ್ದಾರೆ. ಇದರ ಮಧ್ಯೆ ರಾಜ್ಯದಲ್ಲಿ ಇನ್ನೂ  ಐದು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದ್ದು, ಚಳಿ, ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಆರ್.ಪ್ರಸಾದ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗಾಳಿ-ಮಳೆಯಿರಲಿ, ಕೊರೆಯುವ ಚಳಿಯಿರಲಿ; ಜನರಿಗೆ ಕೆಲಸಕ್ಕೆ ಹೋಗುವುದು ಮಾತ್ರ ತಪ್ಪದು!

ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯಲ್ಲಿ ನಾಳೆ (ಡಿಸೆಂಬರ್ 15) ವಾಯುಭಾರ ಕುಸಿತವಾಗಲಿದೆ. ಹೀಗಾಗಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮಾಹಿತಿ ತಿಳಿಸಿದರು.

ಬೆಂಗಳೂರಿನ ಸುತ್ತಮುತ್ತಲೂ 1ರಿಂದ 2 ಸೆಂ.ಮೀ. ಮಳೆಯಾಗಿದೆ. ಇಂದು(ಡಿ.14) ಕರಾವಳಿ ಭಾಗದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ(ಡಿ.13) ಕಾರಾವಳಿ ಭಾಗದಲ್ಲಿ ಹಲವು ಕಡೆ ಹಗುರ ಮಳೆಯಾಗಿದೆ ಎಂದರು.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ 8 ಸೆಂ ಮೀ ಮಳೆಯಾಗಿದ್ದರೆ, ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಒಂದರಿಂದ ಎರಡು ಸೆಂ ಮೀ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ನಗರದಲ್ಲಿಂದು ಗರಿಷ್ಠ ತಾಪಮಾಮ 25 ಡಿಗ್ರಿ, ಕನಿಷ್ಟ ತಾಪಾಮಾನ 19 ಡಿಗ್ರಿ ಇರಲಿದೆ ಎಂದು ಹೇಳಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:08 pm, Wed, 14 December 22

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು