AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಮಳೆ

Rain in many parts of the Karnataka; ಮಂಡ್ಯದಲ್ಲಿ ಕಾವೇರಿ ಹೋರಾಟದ ನಡುವೆ ಗುಡುಗು ಸಹಿತ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಮಳೆಯ ಆಗಮನದಿಂದ ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅತ್ತ ಕಲಬುರಗಿ ನಗರ ಸೇರಿದಂತೆ ಕಲಬುರಗಿ ಜಿಲ್ಲೆಯ ಹಲವಡೆ ಕೂಡ ಮಳೆಯಾಗಿದೆ.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಮಳೆ
ಕಲಬುರಗಿಯಲ್ಲಿ ಮಳೆ
TV9 Web
| Edited By: |

Updated on: Sep 22, 2023 | 9:31 PM

Share

ಬೆಂಗಳೂರು, ಸೆಪ್ಟೆಂಬರ್ 22: ಬೆಂಗಳೂರು ಮಹಾನಗರದ (Bangalore Rains) ಹಲವೆಡೆ, ಮಂಡ್ಯ, ಕಲಬುರಗಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ಹಾಗೂ ರಾತ್ರಿ ದಿಢೀರ್ ಮಳೆ ಸುರಿಯಿತು. ಆ ಮೂಲಕ ಬಿಸಿಲ ಬೇಗೆಗೆ ಬಸವಳಿದಿದ್ದ ಧರೆಗೆ ತುಸು ತಂಪೆರೆಯಿತು. ಬೆಂಗಳೂರಿನ ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ರಾಜಾಜಿನಗರ, ಶಾಂತಿನಗರ ಸೇರಿದಂತೆ ಹಲವೆಡೆ ಶುಕ್ರವಾರ ರಾತ್ರಿ ಹಠಾತ್ ವರ್ಷಧಾರೆಯಾಯಿತು. ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಯಿತು. ಸಂಚಾರ ದಟ್ಟಣೆ ಉಂಟಾಯಿತು.

ಮಂಡ್ಯದಲ್ಲಿ ಕಾವೇರಿ ಹೋರಾಟದ ನಡುವೆ ಗುಡುಗು ಸಹಿತ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಮಳೆಯ ಆಗಮನದಿಂದ ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಲಬುರಗಿ ನಗರ ಸೇರಿದಂತೆ ಕಲಬುರಗಿ ಜಿಲ್ಲೆಯ ಹಲವಡೆ ಕೂಡ ಮಳೆಯಾಗಿದೆ. ಗುಡುಗು ಸಹಿತ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಮಳೆ ಇಲ್ಲದೇ ಕಂಗಾಲಾಗಿದ್ದ ಜನರು ತುಸು ನಿರಾಳರಾಗಿದ್ದಾರೆ. ಸುಮಾರು ಅರ್ದಗಂಟೆಯಿಂದ ಜಿಲ್ಲೆಯ ವಿವಿಧಡೆ ಮಳೆ ಸುರಿದಿದೆ.

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರಿನ ಹಲವೆಡೆ ಗುರುವಾರ ರಾತ್ರಿಯೂ ಭಾರಿ ಮಳೆಯಾಗಿತ್ತು. ರಾಮಕೃಷ್ಣ ಆಶ್ರಮ ವೃತ್ತ, ಬಸವನಗುಡಿ, ಹನುಮಂತನಗರ, ಮುನೇಶ್ವರ ಬ್ಲಾಕ್, ಶ್ರೀನಿವಾಸ ನಗರ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಗುರುವಾರ ರಾತ್ರಿ ಮಳೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ