AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಮಳೆ

Rain in many parts of the Karnataka; ಮಂಡ್ಯದಲ್ಲಿ ಕಾವೇರಿ ಹೋರಾಟದ ನಡುವೆ ಗುಡುಗು ಸಹಿತ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಮಳೆಯ ಆಗಮನದಿಂದ ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅತ್ತ ಕಲಬುರಗಿ ನಗರ ಸೇರಿದಂತೆ ಕಲಬುರಗಿ ಜಿಲ್ಲೆಯ ಹಲವಡೆ ಕೂಡ ಮಳೆಯಾಗಿದೆ.

Karnataka Rains: ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಮಳೆ
ಕಲಬುರಗಿಯಲ್ಲಿ ಮಳೆ
TV9 Web
| Edited By: |

Updated on: Sep 22, 2023 | 9:31 PM

Share

ಬೆಂಗಳೂರು, ಸೆಪ್ಟೆಂಬರ್ 22: ಬೆಂಗಳೂರು ಮಹಾನಗರದ (Bangalore Rains) ಹಲವೆಡೆ, ಮಂಡ್ಯ, ಕಲಬುರಗಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ಹಾಗೂ ರಾತ್ರಿ ದಿಢೀರ್ ಮಳೆ ಸುರಿಯಿತು. ಆ ಮೂಲಕ ಬಿಸಿಲ ಬೇಗೆಗೆ ಬಸವಳಿದಿದ್ದ ಧರೆಗೆ ತುಸು ತಂಪೆರೆಯಿತು. ಬೆಂಗಳೂರಿನ ಮೆಜೆಸ್ಟಿಕ್, ಟೌನ್ ಹಾಲ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ರಾಜಾಜಿನಗರ, ಶಾಂತಿನಗರ ಸೇರಿದಂತೆ ಹಲವೆಡೆ ಶುಕ್ರವಾರ ರಾತ್ರಿ ಹಠಾತ್ ವರ್ಷಧಾರೆಯಾಯಿತು. ಮಳೆಯಿಂದ ವಾಹನ ಸವಾರರು ಪರದಾಟ ನಡೆಸುವಂತಾಯಿತು. ಸಂಚಾರ ದಟ್ಟಣೆ ಉಂಟಾಯಿತು.

ಮಂಡ್ಯದಲ್ಲಿ ಕಾವೇರಿ ಹೋರಾಟದ ನಡುವೆ ಗುಡುಗು ಸಹಿತ ಮಳೆ ಸುರಿಯಿತು. ಏಕಾಏಕಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಿತು. ಮಳೆಯ ಆಗಮನದಿಂದ ಮಂಡ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕಲಬುರಗಿ ನಗರ ಸೇರಿದಂತೆ ಕಲಬುರಗಿ ಜಿಲ್ಲೆಯ ಹಲವಡೆ ಕೂಡ ಮಳೆಯಾಗಿದೆ. ಗುಡುಗು ಸಹಿತ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಮಳೆ ಇಲ್ಲದೇ ಕಂಗಾಲಾಗಿದ್ದ ಜನರು ತುಸು ನಿರಾಳರಾಗಿದ್ದಾರೆ. ಸುಮಾರು ಅರ್ದಗಂಟೆಯಿಂದ ಜಿಲ್ಲೆಯ ವಿವಿಧಡೆ ಮಳೆ ಸುರಿದಿದೆ.

ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಬೆಂಗಳೂರಿನ ಹಲವೆಡೆ ಗುರುವಾರ ರಾತ್ರಿಯೂ ಭಾರಿ ಮಳೆಯಾಗಿತ್ತು. ರಾಮಕೃಷ್ಣ ಆಶ್ರಮ ವೃತ್ತ, ಬಸವನಗುಡಿ, ಹನುಮಂತನಗರ, ಮುನೇಶ್ವರ ಬ್ಲಾಕ್, ಶ್ರೀನಿವಾಸ ನಗರ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಗುರುವಾರ ರಾತ್ರಿ ಮಳೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ