Karnataka Rains: ಇಂದು ಕರ್ನಾಟಕದ ಕರಾವಳಿಯಲ್ಲಿ ಮಹಾ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ

|

Updated on: Jul 14, 2023 | 7:42 AM

ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಇಂದು ಕರ್ನಾಟಕದ ಕರಾವಳಿಯಲ್ಲಿ ಮಹಾ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ
ಮಳೆ
Image Credit source: News 9
Follow us on

ಕರ್ನಾಟಕದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಲ್ಲೂರು, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಕದ್ರಾ, ಕೋಟ, ಪಣಂಬೂರು, ಲಿಂಗನಮಕ್ಕಿ, ಶಿರಾಲಿ, ಉಡುಪಿ, ಕುಂದಾಪುರ, ಮಂಗಳೂರು, ತಾಳಗುಪ್ಪ, ಶೃಂಗೇರಿ, ಸಿದ್ದಾಪುರ, ಹೊನ್ನಾವರ, ಕಾರ್ಕಳ, ಮಂಗಳೂರು, ಹುಂಚದಕಟ್ಟೆ, ಮಾಣಿ, ಮುಲ್ಕಿ, ಕುಮಟಾ, ಔರಾದ್, ಕಮ್ಮರಡಿ, ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಅಂಕೋಲಾ, ಗೋಕರ್ಣ, ಸಂತಪುರ, ಜಯಪುರ, ಜಾನ್ಮನೆ, ಬೇಲಿಕೇರಿ, ಕ್ಯಾಸಲ್ ರಾಕ್, ತಾವರಗೇರಾ, ಕಳಸ, ಕೊಪ್ಪ, ತುಮಕೂರು, ತ್ಯಾಗರ್ತಿ, ಮಂಚಿಕೆರೆ, ಧರ್ಮಸ್ಥಳ, ಗಂಗಾವತಿ, ಗುಂಜಿ, ಗುಂಡಗುರ್ತಿ, ರಾಯಚೂರು, ಪಿಟಿಐ, ಕಂಪ್ಲಿ, ಮಂಡಗದ್ದೆ, ತೊಂಡೆಭಾವಿ, ಸಕಲೇಶಪುರ, ಸುಬ್ರಹ್ಮಣ್ಯ, ಬನವಾಸಿ, ಬೀದರ್, ಭಾಲ್ಕಿ, ಬೀದರ್, ಸಿಂಧನೂರು, ದೇವದುರ್ಗ, ಲೋಂಡಾ, ಗುಬ್ಬಿ, ಮಧುಗಿರಿ, ಸುಂಟಿಕೊಪ್ಪ, ನಾಪೋಕ್ಲು, ಸೋಮವಾರಪೇಟೆ, ಶನಿವಾರಸಂತೆ, ಬೆಂಗಳೂರು ನಗರ, ಮೂಡಿಗೆರೆ, ಬೆಂಗಳೂರು ನಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Weather: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಮಳೆಯಾಗಲಿದೆ.ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ