AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಪಕ ಮಳೆಯಿಂದ ಬೆಳೆ ಹಾನಿ; ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡುವ ಬಗ್ಗೆ ಬಿಸಿ ಪಾಟೀಲ್ ಹೇಳಿಕೆ

Karnataka Rains: ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ನಿಂದ ಪರಿಹಾರ ಹಂಚಿಕೆ ಮಾಡಲಾಗುವುದು. ಪರಿಹಾರ ಹಣ ಪರಿಷ್ಕರಣೆ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಗೈಡ್‌ಲೈನ್ಸ್‌ ಬಂದ ಬಳಿಕ ಪರಿಹಾರ ಮೊತ್ತ ಘೋಷಿಸುತ್ತೇವೆ ಎಂದು ದಾವಣಗೆರೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ವ್ಯಾಪಕ ಮಳೆಯಿಂದ ಬೆಳೆ ಹಾನಿ; ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡುವ ಬಗ್ಗೆ ಬಿಸಿ ಪಾಟೀಲ್ ಹೇಳಿಕೆ
ಬಿಸಿ ಪಾಟೀಲ್
TV9 Web
| Edited By: |

Updated on: Oct 12, 2021 | 6:55 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವ್ಯಾಪಕ ಮಳೆಯಿಂದ ಬೆಳೆ ಹಾನಿ ಆಗಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿ ಬಗ್ಗೆ ತಕ್ಷಣ ಸರ್ವೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ. ವರದಿ ಬಳಿಕ ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡಲಾಗುವುದು. ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ನಿಂದ ಪರಿಹಾರ ಹಂಚಿಕೆ ಮಾಡಲಾಗುವುದು. ಪರಿಹಾರ ಹಣ ಪರಿಷ್ಕರಣೆ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಗೈಡ್‌ಲೈನ್ಸ್‌ ಬಂದ ಬಳಿಕ ಪರಿಹಾರ ಮೊತ್ತ ಘೋಷಿಸುತ್ತೇವೆ ಎಂದು ದಾವಣಗೆರೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ಕೆಲವು ಜಿಲ್ಲೆಗಳಲ್ಲಿ ಮಳೆ ಅಪಾರ ಹಾನಿ ಉಂಟುಮಾಡಿದೆ. ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಹಿನ್ನೆಲೆಯಲ್ಲಿ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸುವ ಸಾಧ್ಯತೆ ಇದೆ. ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜತೆ ಸಭೆ ಸಾಧ್ಯತೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಮಳೆ ಅನಾಹುತ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಕೆಲ ಸಚಿವರು ಸಹ ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಮಹಾಲಕ್ಷ್ಮಿ ಕ್ಲಬ್ ಹಿಂಭಾಗ ಧರೆಗುರುಳಿದ ಮರಗಳು ಸತತ ಸುರಿಯುತ್ತಿರುವ ಮಳೆಯಿಂದಾಗಿ 3 ಬೃಹದಾಕಾರದ ಮರಗಳು ಧರೆಗುರುಳಿದೆ. ಮಧ್ಯಾಹ್ನ 2:30 ಕ್ಕೆ ಮರಗಳು ಧರೆಗುರುಳಿದ್ದು ಮನೆಯ ಬಾಲ್ಕನಿಯ ಗೋಡೆ, 4 ಬೈಕ್ ಗಳಿಗೆ ಹಾನಿ ಆಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಿಬಿಎಂಪಿ‌ ಸಿಬ್ಬಂದಿಗಳು ಆಗಮಿಸಿದ್ದಾರೆ. ಧರೆಗುರುಳಿದ ಮರಗಳ ತೆರವು ಕಾರ್ಯ ನಡೆಯುತ್ತಿದೆ. ಸಂಜೆ 4:30, 5 ಗಂಟೆ ಸುಮಾರಿಗೆ ತೆರವು ಕಾರ್ಯ ಪ್ರಾರಂಭಿಸಿದ್ದು, ಮಹಾಲಕ್ಷ್ಮಿ ಕ್ಲಬ್ ಹಿಂಭಾಗದಲ್ಲಿ ಘಟನೆ ನಡೆದಿದೆ. ಮರ ತೆರವು ಕಾರ್ಯ ವೇಳೆ ಸಿಬ್ಬಂದಿಗಳು ಪ್ರದೇಶದ ವಿದ್ಯುತ್ ಸರಬರಾಜು ಕಡಿತಗೊಳಿಸಿದ್ದಾರೆ. ಸುಮಾರು 2 ಗಂಟೆಯಿಂದ ಮಹಾಲಕ್ಷ್ಮಿ ಲೇಔಟ್​ನಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಬಾರೀ ಮಳೆ ಉಡುಪಿ ಜಿಲ್ಲೆಯ ಹಲವೆಡೆ ಇಂದು ಮಧ್ಯಾಹ್ನದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಉಡುಪಿ ನಗರ ಸೇರಿದಂತೆ ಕಾರ್ಕಳ, ಕಾಪು, ಕುಂದಾಪುರದ ಬೈಂದೂರು ಭಾಗಗಳಲ್ಲೂ ವರುಣನ ಅಬ್ಬರ ಜೋರಾಗಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ವಾಹನ ಸವಾರರ ಪರದಾಟ ಕಂಡುಬಂದಿದೆ.

ಇದನ್ನೂ ಓದಿ: ಜೋರು ಮಳೆ, ಪೊಲೀಸ್ ಕಾರ್ಯಾಚರಣೆ; ಬಾವಿಗೆ ಬಿದ್ದ ಆರೋಪಿ, ಪೊಲೀಸರಿಂದಲೇ ರಕ್ಷಣೆ

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ; ಮನೆ ಕುಸಿದು ಆರು ಮೇಕೆ ಸಾವು, ಕುಟುಂಬಸ್ಥರು ಪಾರು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ