ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣರಾಯ

ಬೆಂಗಳೂರು: ರಾಜ್ಯದಲ್ಲಿ ಇಗಾಗಲೇ ವರುಣನ ಅಬ್ಬರ ಜೋರಾಗಿದೆ. ಈ ನಡುವೆ ಮುಂದಿನ 5 ದಿನವೂ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ಅರಬ್ಬೀ ಸಮುದ್ರದ ಪೂರ್ವಕೇಂದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಮುಂದಿನ 5 ದಿನ ರಾಜ್ಯದಲ್ಲಿ ಮಳೆಯಾಗಲಿದೆ. 24 ಗಂಟೆಯಲ್ಲಿ ಮತ್ತಷ್ಟು ವಾಯುಭಾರ ಕುಸಿತ ಆಗುವ ಸಾಧ್ಯತೆ ಇರುವುದರಿಂದ, ಮತ್ತೆ 12 ಗಂಟೆ ಕಳೆದ ಮೇಲೆ ವಾಯುಭಾರ ಕುಸಿತದ ತೀವ್ರತೆ ಸಹ ಹೆಚ್ಚಾಗಲಿದೆ. ಬೆಳಗಾವಿ, ಹುಬ್ಬಳ್ಳಿ, ಧಾರವಾಡದಲ್ಲಿ […]

ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣರಾಯ
ಸಾಧು ಶ್ರೀನಾಥ್​

Updated on: Oct 21, 2019 | 6:43 PM

ಬೆಂಗಳೂರು: ರಾಜ್ಯದಲ್ಲಿ ಇಗಾಗಲೇ ವರುಣನ ಅಬ್ಬರ ಜೋರಾಗಿದೆ. ಈ ನಡುವೆ ಮುಂದಿನ 5 ದಿನವೂ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ಅರಬ್ಬೀ ಸಮುದ್ರದ ಪೂರ್ವಕೇಂದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಮುಂದಿನ 5 ದಿನ ರಾಜ್ಯದಲ್ಲಿ ಮಳೆಯಾಗಲಿದೆ. 24 ಗಂಟೆಯಲ್ಲಿ ಮತ್ತಷ್ಟು ವಾಯುಭಾರ ಕುಸಿತ ಆಗುವ ಸಾಧ್ಯತೆ ಇರುವುದರಿಂದ, ಮತ್ತೆ 12 ಗಂಟೆ ಕಳೆದ ಮೇಲೆ ವಾಯುಭಾರ ಕುಸಿತದ ತೀವ್ರತೆ ಸಹ ಹೆಚ್ಚಾಗಲಿದೆ. ಬೆಳಗಾವಿ, ಹುಬ್ಬಳ್ಳಿ, ಧಾರವಾಡದಲ್ಲಿ ಹೆಚ್ಚು ಮಳೆಯಾಗಲಿದ್ದು, ಹುಬ್ಬಳಿ, ಧಾರವಾಡ, ಬೆಳಾಗವಿ ನಲ್ಲೂ ಮಳೆ ದಾಖಲೆ ಮಾಡಿದೆ. ಮಧ್ಯಾಹ್ನ,ರಾತ್ರಿ ವೇಳೆ ಹೆಚ್ಚು ಮಳೆ ಬರಲಿದೆ. ಇದು ತೀವ್ರವಾದ ವಾಯುಭಾರ ಕುಸಿತಕ್ಕೆ ಕಾರಣವಾಗಲಿದೆ.

ಮತ್ತೆ ಬಂಗಾಳಕೊಲ್ಲಿಯಲ್ಲೂ ವಾಯುಭಾರ ಕುಸಿತ ಸಾಧ್ಯತೆ ಹೆಚ್ಚಾಗಿದೆ ಹೀಗಾಗಿ ಇದೇ ತಿಂಗಳ 23 ರೊಳಗೆ ಮಳೆ ಆಗಲಿದ್ದು, ತಮಿಳುನಾಡು ಗಡಿ ಭಾಗ, ಆಂದ್ರ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರದಲ್ಲಿ ರಾತ್ರಿ ವೇಳೆ ಹೆಚ್ಚು ಮಳೆ ಆಗಲಿದೆ. ಸುಮಾರು 4 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Published On - 2:19 pm, Mon, 21 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us