ಮಳೆ ಮತ್ತು ಕೊರೊನಾ ಸೋಂಕು ಹರಡುವುದಕ್ಕೆ ಸಂಬಂಧ ಇದ್ಯಾ?

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊರೊನಾ ವೈರಸ್ ಹಬ್ಬುತ್ತಿರುವ ಈ ಸಂದರ್ಭದಲ್ಲಿ ಭಾರಿ ಮಳೆಯಾಗಿರುವುದರಿಂದ ವೈರಸ್ ಮತ್ತಷ್ಟು ವ್ಯಾಪಕವಾಗಿ ಹರಡಬಹುದು ಎಂದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಸಮಾಧಾನಕರ ಸಂಗತಿ ಏನಂದ್ರೆ ಮಳೆಗೂ ಕೊರೊನಾ ಸೋಂಕು ಹರಡುವುದಕ್ಕೂ ಯಾವುದೇ ಸಂಬಂಧವಿಲ್ಲ. ಉಷ್ಣಾಂಶದಲ್ಲಿ ಏರುಪೇರಾದರೆ ಮಾತ್ರ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಸದ್ಯ ಮಳೆ ಬಂದು ನಿಂತರೂ ವಾತಾವರಣದಲ್ಲಿ ಉಷ್ಣಾಂಶ ಇದೇ ರೀತಿ ಇದೆ. ಇದರಿಂದ ಡೆಂಘೀ ಜ್ವರ ಬರುವ ಸಾಧ್ಯತೆ ಇರುತ್ತದೆ. […]

ಮಳೆ ಮತ್ತು ಕೊರೊನಾ ಸೋಂಕು ಹರಡುವುದಕ್ಕೆ ಸಂಬಂಧ ಇದ್ಯಾ?
ಸಾಧು ಶ್ರೀನಾಥ್​

Updated on: Apr 29, 2020 | 4:19 PM

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಕೊರೊನಾ ವೈರಸ್ ಹಬ್ಬುತ್ತಿರುವ ಈ ಸಂದರ್ಭದಲ್ಲಿ ಭಾರಿ ಮಳೆಯಾಗಿರುವುದರಿಂದ ವೈರಸ್ ಮತ್ತಷ್ಟು ವ್ಯಾಪಕವಾಗಿ ಹರಡಬಹುದು ಎಂದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಆದ್ರೆ ಸಮಾಧಾನಕರ ಸಂಗತಿ ಏನಂದ್ರೆ ಮಳೆಗೂ ಕೊರೊನಾ ಸೋಂಕು ಹರಡುವುದಕ್ಕೂ ಯಾವುದೇ ಸಂಬಂಧವಿಲ್ಲ.

ಉಷ್ಣಾಂಶದಲ್ಲಿ ಏರುಪೇರಾದರೆ ಮಾತ್ರ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಸದ್ಯ ಮಳೆ ಬಂದು ನಿಂತರೂ ವಾತಾವರಣದಲ್ಲಿ ಉಷ್ಣಾಂಶ ಇದೇ ರೀತಿ ಇದೆ. ಇದರಿಂದ ಡೆಂಘೀ ಜ್ವರ ಬರುವ ಸಾಧ್ಯತೆ ಇರುತ್ತದೆ. ವಾತಾವರಣದಲ್ಲಿ ಇದೇ ರೀತಿ ಉಷ್ಣಾಂಶವಿದ್ದರೂ ಸಹ ಆತಂಕಪಡುವಂತಿಲ್ಲ ಎಂದು ಟಿವಿ9ಗೆ ಆರೋಗ್ಯ ಇಲಾಖೆಯ ಹಿರಿಯ ವೈದ್ಯರು ಮಾಹಿತಿ ನೀಡಿದ್ದಾರೆ.

Published On - 4:06 pm, Wed, 29 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us