Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಭಾರಿ ಮಳೆ ಕೊರತೆ; ಇಲ್ಲಿದೆ ವಿವರ

Rain Deficit in Cauvery dependent taluks of Karnataka; ಅಂಕಿಅಂಶಗಳ ಪ್ರಕಾರ, ಕೊಡಗು ಜಿಲ್ಲೆಯ ಎರಡು ತಾಲ್ಲೂಕುಗಳು ಸೇರಿದಂತೆ ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಶೇ 50 ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಭಾರಿ ಮಳೆ ಕೊರತೆ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Sep 28, 2023 | 4:24 PM

ಮೈಸೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಕರ್ನಾಟಕದ ಹಲವೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಶುಕ್ರವಾರ ಕರ್ನಾಟಕ ಬಂದ್​ಗೆ (Karnataka Bandh) ವಿವಿಧ ಸಂಘಟನೆಗಳು ಕರೆ ನೀಡಿವೆ. ಈ ಮಧ್ಯೆ, ಕಾವೇರಿ ಹಾಗೂ ಅದರ ಉಪನದಿಗಳನ್ನು ಅವಲಂಬಿಸಿರುವ ಜಿಲ್ಲೆಗಳು ತೀವ್ರ ಮಳೆ ಕೊರತೆ ಎದುರಿಸುತ್ತಿವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ನೈಋತ್ಯ ಮಾನ್ಸೂನ್ ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಇದ್ದು, ಈ ಜಿಲ್ಲೆಗಳು ಶೇ 35 ಕ್ಕಿಂತ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವುದು ತಿಳಿದುಬಂದಿದೆ.

ಅಂಕಿಅಂಶಗಳ ಪ್ರಕಾರ, ಕೊಡಗು ಜಿಲ್ಲೆಯ ಎರಡು ತಾಲ್ಲೂಕುಗಳು ಸೇರಿದಂತೆ ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಶೇ 50 ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ. ಇದೇ ವೇಳೆ, ರಾಜ್ಯ ಕೃಷಿ ಇಲಾಖೆ ಅಧಿಕಾರಿಗಳು ಹಂಚಿಕೊಂಡಿರುವ ಸೆಪ್ಟೆಂಬರ್ 22 ರವರೆಗಿನ ಅಂಕಿಅಂಶಗಳು, ಬರಗಾಲದ ನಡುವೆಯೂ ಬಿತ್ತನೆ ಚಟುವಟಿಕೆಗಳು ಉತ್ತಮವಾಗಿವೆ ಎಂಬುದನ್ನು ಸೂಚಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಕೊಡಗಿನಲ್ಲಿ ಶೇ -42 ಮಳೆ ದಾಖಲಾಗಿದೆ. ಇದು ಬಳ್ಳಾರಿ (ಶೇ -48) ಜಿಲ್ಲೆಯ ನಂತರ ಅತಿಹೆಚ್ಚು ಮಳೆ ಕೊರತೆ ದಾಖಲಿಸಿದ ಜಿಲ್ಲೆಯಾಗಿದೆ. ವಿರಾಜಪೇಟೆ ತಾಲ್ಲೂಕು (-59%) ಮತ್ತು ಪೊನ್ನಂಪೇಟೆ (-50%) ಕೊಡಗಿನಲ್ಲಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ತಾಲ್ಲೂಕುಗಳಾಗಿವೆ. ಇವುಗಳಿಗಿಂತಲೂ ಹೆಚ್ಚು ಮಳೆ ಕೊರತೆಯನ್ನು ಬಳ್ಳಾರಿ ಜಿಲ್ಲೆಯ ಬಳ್ಳಾರಿ ಮತ್ತು ಸಂಡೂರು ತಾಲ್ಲೂಕುಗಳು ಎದುರಿಸುತ್ತಿವೆ. ಕಾವೇರಿಯ ಉಪನದಿ ಹೇಮಾವತಿ ಹರಿಯುವ ಚಿಕ್ಕಮಗಳೂರಿನ ಮೂಡಿಗೆರೆ ಜಿಲ್ಲೆಯಲ್ಲಿ ಶೇ -30 ಮಳೆ ದಾಖಲಾಗಿದೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಮಲೆನಾಡು ಜಿಲ್ಲೆಗಳಾದ ಕೊಡಗು (-42%), ಚಿಕ್ಕಮಗಳೂರು (-39%), ಮತ್ತು ಶಿವಮೊಗ್ಗ (-38%), ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆ ಎದುರಿಸಿವೆ. ಕಾವೇರಿ ಮತ್ತು ಅದರ ಉಪನದಿಗಳ ನೀರನ್ನು ಅವಲಂಬಿಸಿರುವ ಜಿಲ್ಲೆಗಳು, ಅಂದರೆ, ಹಾಸನ (-28%), ಮೈಸೂರು (-23%), ಮಂಡ್ಯ (-18%), ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ -17% ಮಳೆ ಕೊರತೆ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಂಕಿಅಂಶಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯ ಕೃಷಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್ 22 ರವರೆಗೆ, ನೈಋತ್ಯ ಮುಂಗಾರು ಅವಧಿಯಲ್ಲಿ ಶೇ 89ರ ಬಿತ್ತನೆ ಗುರಿ ಸಾಧಿಸಲಾಗಿದೆ. ಇದು ಶೇ 91ರ ನೀರಾವರಿ ಕೃಷಿ ಭೂಮಿಯನ್ನು ಒಳಗೊಂಡಿದೆ. ಹಾಸನದಲ್ಲಿ ಶೇ 98, ಶಿವಮೊಗ್ಗ ಶೇ 92, ಚಿಕ್ಕಮಗಳೂರು ಶೇ 84, ಮೈಸೂರು ಶೇ 80, ಮಂಡ್ಯ ಶೇ 78, ಚಾಮರಾಜನಗರ ಶೇ 72, ಕೊಡಗಿನಲ್ಲಿ ಶೇ 69ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ವರದಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ