AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಭಾರಿ ಮಳೆ ಕೊರತೆ; ಇಲ್ಲಿದೆ ವಿವರ

Rain Deficit in Cauvery dependent taluks of Karnataka; ಅಂಕಿಅಂಶಗಳ ಪ್ರಕಾರ, ಕೊಡಗು ಜಿಲ್ಲೆಯ ಎರಡು ತಾಲ್ಲೂಕುಗಳು ಸೇರಿದಂತೆ ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಶೇ 50 ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಭಾರಿ ಮಳೆ ಕೊರತೆ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 28, 2023 | 4:24 PM

Share

ಮೈಸೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಕರ್ನಾಟಕದ ಹಲವೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಶುಕ್ರವಾರ ಕರ್ನಾಟಕ ಬಂದ್​ಗೆ (Karnataka Bandh) ವಿವಿಧ ಸಂಘಟನೆಗಳು ಕರೆ ನೀಡಿವೆ. ಈ ಮಧ್ಯೆ, ಕಾವೇರಿ ಹಾಗೂ ಅದರ ಉಪನದಿಗಳನ್ನು ಅವಲಂಬಿಸಿರುವ ಜಿಲ್ಲೆಗಳು ತೀವ್ರ ಮಳೆ ಕೊರತೆ ಎದುರಿಸುತ್ತಿವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ನೈಋತ್ಯ ಮಾನ್ಸೂನ್ ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಇದ್ದು, ಈ ಜಿಲ್ಲೆಗಳು ಶೇ 35 ಕ್ಕಿಂತ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವುದು ತಿಳಿದುಬಂದಿದೆ.

ಅಂಕಿಅಂಶಗಳ ಪ್ರಕಾರ, ಕೊಡಗು ಜಿಲ್ಲೆಯ ಎರಡು ತಾಲ್ಲೂಕುಗಳು ಸೇರಿದಂತೆ ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಶೇ 50 ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ. ಇದೇ ವೇಳೆ, ರಾಜ್ಯ ಕೃಷಿ ಇಲಾಖೆ ಅಧಿಕಾರಿಗಳು ಹಂಚಿಕೊಂಡಿರುವ ಸೆಪ್ಟೆಂಬರ್ 22 ರವರೆಗಿನ ಅಂಕಿಅಂಶಗಳು, ಬರಗಾಲದ ನಡುವೆಯೂ ಬಿತ್ತನೆ ಚಟುವಟಿಕೆಗಳು ಉತ್ತಮವಾಗಿವೆ ಎಂಬುದನ್ನು ಸೂಚಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಕೊಡಗಿನಲ್ಲಿ ಶೇ -42 ಮಳೆ ದಾಖಲಾಗಿದೆ. ಇದು ಬಳ್ಳಾರಿ (ಶೇ -48) ಜಿಲ್ಲೆಯ ನಂತರ ಅತಿಹೆಚ್ಚು ಮಳೆ ಕೊರತೆ ದಾಖಲಿಸಿದ ಜಿಲ್ಲೆಯಾಗಿದೆ. ವಿರಾಜಪೇಟೆ ತಾಲ್ಲೂಕು (-59%) ಮತ್ತು ಪೊನ್ನಂಪೇಟೆ (-50%) ಕೊಡಗಿನಲ್ಲಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ತಾಲ್ಲೂಕುಗಳಾಗಿವೆ. ಇವುಗಳಿಗಿಂತಲೂ ಹೆಚ್ಚು ಮಳೆ ಕೊರತೆಯನ್ನು ಬಳ್ಳಾರಿ ಜಿಲ್ಲೆಯ ಬಳ್ಳಾರಿ ಮತ್ತು ಸಂಡೂರು ತಾಲ್ಲೂಕುಗಳು ಎದುರಿಸುತ್ತಿವೆ. ಕಾವೇರಿಯ ಉಪನದಿ ಹೇಮಾವತಿ ಹರಿಯುವ ಚಿಕ್ಕಮಗಳೂರಿನ ಮೂಡಿಗೆರೆ ಜಿಲ್ಲೆಯಲ್ಲಿ ಶೇ -30 ಮಳೆ ದಾಖಲಾಗಿದೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಮಲೆನಾಡು ಜಿಲ್ಲೆಗಳಾದ ಕೊಡಗು (-42%), ಚಿಕ್ಕಮಗಳೂರು (-39%), ಮತ್ತು ಶಿವಮೊಗ್ಗ (-38%), ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆ ಎದುರಿಸಿವೆ. ಕಾವೇರಿ ಮತ್ತು ಅದರ ಉಪನದಿಗಳ ನೀರನ್ನು ಅವಲಂಬಿಸಿರುವ ಜಿಲ್ಲೆಗಳು, ಅಂದರೆ, ಹಾಸನ (-28%), ಮೈಸೂರು (-23%), ಮಂಡ್ಯ (-18%), ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ -17% ಮಳೆ ಕೊರತೆ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಂಕಿಅಂಶಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯ ಕೃಷಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್ 22 ರವರೆಗೆ, ನೈಋತ್ಯ ಮುಂಗಾರು ಅವಧಿಯಲ್ಲಿ ಶೇ 89ರ ಬಿತ್ತನೆ ಗುರಿ ಸಾಧಿಸಲಾಗಿದೆ. ಇದು ಶೇ 91ರ ನೀರಾವರಿ ಕೃಷಿ ಭೂಮಿಯನ್ನು ಒಳಗೊಂಡಿದೆ. ಹಾಸನದಲ್ಲಿ ಶೇ 98, ಶಿವಮೊಗ್ಗ ಶೇ 92, ಚಿಕ್ಕಮಗಳೂರು ಶೇ 84, ಮೈಸೂರು ಶೇ 80, ಮಂಡ್ಯ ಶೇ 78, ಚಾಮರಾಜನಗರ ಶೇ 72, ಕೊಡಗಿನಲ್ಲಿ ಶೇ 69ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ವರದಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?