AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಭಾರಿ ಮಳೆ ಕೊರತೆ; ಇಲ್ಲಿದೆ ವಿವರ

Rain Deficit in Cauvery dependent taluks of Karnataka; ಅಂಕಿಅಂಶಗಳ ಪ್ರಕಾರ, ಕೊಡಗು ಜಿಲ್ಲೆಯ ಎರಡು ತಾಲ್ಲೂಕುಗಳು ಸೇರಿದಂತೆ ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಶೇ 50 ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಭಾರಿ ಮಳೆ ಕೊರತೆ; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 28, 2023 | 4:24 PM

Share

ಮೈಸೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಕರ್ನಾಟಕದ ಹಲವೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಶುಕ್ರವಾರ ಕರ್ನಾಟಕ ಬಂದ್​ಗೆ (Karnataka Bandh) ವಿವಿಧ ಸಂಘಟನೆಗಳು ಕರೆ ನೀಡಿವೆ. ಈ ಮಧ್ಯೆ, ಕಾವೇರಿ ಹಾಗೂ ಅದರ ಉಪನದಿಗಳನ್ನು ಅವಲಂಬಿಸಿರುವ ಜಿಲ್ಲೆಗಳು ತೀವ್ರ ಮಳೆ ಕೊರತೆ ಎದುರಿಸುತ್ತಿವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ನೈಋತ್ಯ ಮಾನ್ಸೂನ್ ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಇದ್ದು, ಈ ಜಿಲ್ಲೆಗಳು ಶೇ 35 ಕ್ಕಿಂತ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವುದು ತಿಳಿದುಬಂದಿದೆ.

ಅಂಕಿಅಂಶಗಳ ಪ್ರಕಾರ, ಕೊಡಗು ಜಿಲ್ಲೆಯ ಎರಡು ತಾಲ್ಲೂಕುಗಳು ಸೇರಿದಂತೆ ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಶೇ 50 ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದೆ. ಇದೇ ವೇಳೆ, ರಾಜ್ಯ ಕೃಷಿ ಇಲಾಖೆ ಅಧಿಕಾರಿಗಳು ಹಂಚಿಕೊಂಡಿರುವ ಸೆಪ್ಟೆಂಬರ್ 22 ರವರೆಗಿನ ಅಂಕಿಅಂಶಗಳು, ಬರಗಾಲದ ನಡುವೆಯೂ ಬಿತ್ತನೆ ಚಟುವಟಿಕೆಗಳು ಉತ್ತಮವಾಗಿವೆ ಎಂಬುದನ್ನು ಸೂಚಿಸಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಜೂನ್ 1 ಮತ್ತು ಸೆಪ್ಟೆಂಬರ್ 27 ರ ನಡುವೆ ಕೊಡಗಿನಲ್ಲಿ ಶೇ -42 ಮಳೆ ದಾಖಲಾಗಿದೆ. ಇದು ಬಳ್ಳಾರಿ (ಶೇ -48) ಜಿಲ್ಲೆಯ ನಂತರ ಅತಿಹೆಚ್ಚು ಮಳೆ ಕೊರತೆ ದಾಖಲಿಸಿದ ಜಿಲ್ಲೆಯಾಗಿದೆ. ವಿರಾಜಪೇಟೆ ತಾಲ್ಲೂಕು (-59%) ಮತ್ತು ಪೊನ್ನಂಪೇಟೆ (-50%) ಕೊಡಗಿನಲ್ಲಿ ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ತಾಲ್ಲೂಕುಗಳಾಗಿವೆ. ಇವುಗಳಿಗಿಂತಲೂ ಹೆಚ್ಚು ಮಳೆ ಕೊರತೆಯನ್ನು ಬಳ್ಳಾರಿ ಜಿಲ್ಲೆಯ ಬಳ್ಳಾರಿ ಮತ್ತು ಸಂಡೂರು ತಾಲ್ಲೂಕುಗಳು ಎದುರಿಸುತ್ತಿವೆ. ಕಾವೇರಿಯ ಉಪನದಿ ಹೇಮಾವತಿ ಹರಿಯುವ ಚಿಕ್ಕಮಗಳೂರಿನ ಮೂಡಿಗೆರೆ ಜಿಲ್ಲೆಯಲ್ಲಿ ಶೇ -30 ಮಳೆ ದಾಖಲಾಗಿದೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಮಲೆನಾಡು ಜಿಲ್ಲೆಗಳಾದ ಕೊಡಗು (-42%), ಚಿಕ್ಕಮಗಳೂರು (-39%), ಮತ್ತು ಶಿವಮೊಗ್ಗ (-38%), ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆ ಎದುರಿಸಿವೆ. ಕಾವೇರಿ ಮತ್ತು ಅದರ ಉಪನದಿಗಳ ನೀರನ್ನು ಅವಲಂಬಿಸಿರುವ ಜಿಲ್ಲೆಗಳು, ಅಂದರೆ, ಹಾಸನ (-28%), ಮೈಸೂರು (-23%), ಮಂಡ್ಯ (-18%), ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ -17% ಮಳೆ ಕೊರತೆ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಂಕಿಅಂಶಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ರಾಜ್ಯ ಕೃಷಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್ 22 ರವರೆಗೆ, ನೈಋತ್ಯ ಮುಂಗಾರು ಅವಧಿಯಲ್ಲಿ ಶೇ 89ರ ಬಿತ್ತನೆ ಗುರಿ ಸಾಧಿಸಲಾಗಿದೆ. ಇದು ಶೇ 91ರ ನೀರಾವರಿ ಕೃಷಿ ಭೂಮಿಯನ್ನು ಒಳಗೊಂಡಿದೆ. ಹಾಸನದಲ್ಲಿ ಶೇ 98, ಶಿವಮೊಗ್ಗ ಶೇ 92, ಚಿಕ್ಕಮಗಳೂರು ಶೇ 84, ಮೈಸೂರು ಶೇ 80, ಮಂಡ್ಯ ಶೇ 78, ಚಾಮರಾಜನಗರ ಶೇ 72, ಕೊಡಗಿನಲ್ಲಿ ಶೇ 69ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ವರದಿ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ