AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಧಿಕ ಮಳೆ ದಾಖಲಾಗಿದೆ.

Karnataka Rains: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ; ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jul 20, 2023 | 10:21 PM

Share

ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದೆ (Karnataka Rains). ಸಾಮಾನ್ಯವಾಗಿ ಈ ಅವಧಿಯಲ್ಲಿ 35.35 ಸೆಂ.ಮೀ ಮಳೆಯಾಗುತ್ತಿದೆ. ಈ ವರ್ಷ ಶೇ 23 ರಷ್ಟು ಮಳೆ ಕೊರತೆಯಾಗಿದೆ ಎಂಬುದು ಹವಾಮಾನ ಇಲಾಖೆ (IMD) ದತ್ತಾಂಶಗಳಿಂದ ತಿಳಿದುಬಂದಿದೆ. ಹವಾಮಾನ ಇಲಾಖೆಯ ದತ್ತಾಂಶಗಳ ಪ್ರಕಾರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಆದರೆ, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ವರದಿಯಾಗಿದ್ದು, ನಂತರದ ಸ್ಥಾನದಲ್ಲಿ ಹಾಸನ, ರಾಮನಗರ ಮತ್ತು ಶಿವಮೊಗ್ಗ ಮತ್ತು ಬಾಗಲಕೋಟೆ ಇವೆ.

ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಧಿಕ ಮಳೆ ದಾಖಲಾಗಿದೆ.

ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯನ್ನು ಗಮನಿಸಿರುವ ರಾಜ್ಯ ಸರ್ಕಾರ ಮೋಡ ಬಿತ್ತನೆ ಕೈಗೊಳ್ಳುವ ವಿಚಾರವಾಗಿ ಹವಾಮಾನ ಇಲಾಖೆಯನ್ನು ಸಂಪರ್ಕಿಸಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: Karnataka Weather: ರಾಜ್ಯದ ಹಲವೆಡೆ ಇಂದು ಭಾರಿ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಕಳೆದ ವರ್ಷ ಇದೇ ಕಾವೇರಿ ಜಲಾನಯನ ಪ್ರದೇಶಗಳು, ಇತರ ಜಲಾನಯನ ಪ್ರದೇಶಗಳು ಮತ್ತು ಘಟ್ಟ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹ ಉಂಟಾಗಿತ್ತು ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಕಳೆದ ವರ್ಷ, ಮುಂಗಾರು ಪ್ರಾರಂಭವು ಮೇ 29ಕ್ಕೂ ಮುಂಚಿತವಾಗಿಯೇ ಆಗಿತ್ತು. ಆದರೆ, ಈ ವರ್ಷ ವಿಳಂಬವಾಗಿದೆ. ನಂತರವೂ ಭಾರೀ ಮಳೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಅಂಕಿಅಂಶಗಳ ಪ್ರಕಾರ, 13 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ ಮತ್ತು 16 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:24 pm, Thu, 20 July 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ