AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಾದ್ಯಂತ ಇಂದು ಕೂಡ ಮಳೆರಾಯನ ಆರ್ಭಟ; ಧಾರಾಕಾರ ಗಾಳೆ ಮಳೆಯಿಂದ ಹಲವೆಡೆ ಹಾನಿ

Bengaluru Rain: ನಗರದ ಹಲವೆಡೆ ಇಂದೂ ಮಳೆಯ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನರ ವೀಕೆಂಡ್ ಸುತ್ತಾಟಕ್ಕೆ ಬ್ರೇಕ್ ಬಿದಿದ್ದು,  ಟ್ರಾಫಿಕ್​ನಲ್ಲಿ ಸಿಲುಕಿ ವಾಹನ ಸವಾರರು ಪೇಚಾಡುತ್ತಿದ್ದಾರೆ.

Karnataka Rain: ಕರ್ನಾಟಕದಾದ್ಯಂತ ಇಂದು ಕೂಡ ಮಳೆರಾಯನ ಆರ್ಭಟ; ಧಾರಾಕಾರ ಗಾಳೆ ಮಳೆಯಿಂದ ಹಲವೆಡೆ ಹಾನಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 16, 2022 | 7:21 PM

Share

ಬೆಂಗಳೂರು: ನಗರದ ಹಲವೆಡೆ ಇಂದೂ ಮಳೆ (Rain) ಆರ್ಭಟ ಜೋರಾಗಿದೆ. ಸತತ ಮೂರು ದಿನಗಳಿಂದ ರಾಜಾಧಾನಿಯಲ್ಲಿ ಅಬ್ಬರಿಸುತ್ತಿರುವ ವರುಣಾ, ಕಬ್ಬನ್‌ಪಾರ್ಕ್, ರೇಸ್ ಕೋರ್ಸ್, ಮೆಜೆಸ್ಟಿಕ್, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಲಾಲ್​ಬಾಗ್, ಜಯನಗರ, ಕಾರ್ಪೋರೇಷನ್ , ವಿಲ್ಸನ್ ಗಾರ್ಡಾನ್ , ಶಾಂತಿನಗರ, ಕೋರಮಂಗಲ, ಶಿವಾನಂದ್ ಸರ್ಕಲ್ , ಒಕಲಿ ಪುರಂ‌ ಸೇರಿದಂತೆ ಹಲವೆಡೆ ಭಾರಿ ಮಳೆ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನರ ವೀಕೆಂಡ್ ಸುತ್ತಾಟಕ್ಕೆ ಬ್ರೇಕ್ ಬಿದಿದ್ದು,  ಟ್ರಾಫಿಕ್​ನಲ್ಲಿ ಸಿಲುಕಿ ವಾಹನ ಸವಾರರು ಪೇಚಾಡುತ್ತಿದ್ದಾರೆ. ಟ್ರಿನಿಟಿ ಸರ್ಕಲ್, ಎಮ್ ಜಿ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಜಯನಗರ, ಬಸವೇಶ್ವರ ವೃತ್ತ, ಶಿವಾನಂದ ಸರ್ಕಲ್, ವಸಂತ ನಗರ ಸುತ್ತಮುತ್ತ ಧಾರಾಕಾರ ಗಾಳಿ ಮಳೆ ಸುರಿಯುತ್ತಿದ್ದು, ರಾಜ್ಯದಲ್ಲಿ ಮುಂದಿನ ಎರಡು ದಿನವೂ ಭಾರೀ ಮಳೆ ಜತೆಗೆ ಗುಡುಗು ಹಾಗೂ ಸಿಡಿಲಿನ ಮುನ್ನೆಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಧರ್ಮರಾಯ ಸ್ವಾಮಿ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ದ್ರೌಪದಿ ಅಮ್ಮನ ಶಕ್ತ್ಯೋತ್ಸವಕ್ಕೆ ಕೊನೆ ಹಂತದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರಗ ಮಹೋತ್ಸವದ ಸಿದ್ಧತೆಗೆ ಮಳೆರಾಯ ಅಡ್ಡಿಯಾಗಿದೆ. ಈ ಬಾರಿ ಅದ್ದೂರಿ ಕರಗಕ್ಕೆ ಸಿದ್ಧತೆ ನಡೆದಿತ್ತಿರುವಾಗ್ಲೇ ವರುಣಾರ್ಭಟ ಶುರುವಾಗಿದೆ. ಶಿವಮೊಗ್ಗ ನಗರದಲ್ಲಿ ಧಾರಾಕಾರ ಗಾಳೆ ಮಳೆ ಹಿನ್ನಲೆ ಹೆಂಚಿನ ಮನೆಯ ಮೇಲೆ ತೆಂಗಿನ ಮರ ಮುರಿದು ಬಿದ್ದಿದೆ. ಮನೆಯಲ್ಲಿರುವ ಗೃಹಬಳಕೆ ವಸ್ತುಗಳಿಗೆ ಹಾನಿಯಾಗಿದೆ. ಗರದ ವಿವಿಧಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾವೇರಿಯಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಗಾಳಿ, ಗುಡುಗಿನೊಂದಿಗೆ ಮಳೆರಾಯನ ಆಗಮನವಾಗಿದೆ. ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ. ಅರ್ಧ ಗಂಟೆಯಿಂದ ಗಾಳಿ, ಗುಡುಗಿನೊಂದಿಗೆ ಮಳೆರಾಯ ಆರ್ಭಟಿಸುತ್ತಿದ್ದಾನೆ.

ಗದಗ ಜಿಲ್ಲೆಯಲ್ಲೂ ಗುಡುಗು ಸಹಿತ ಹಲವಡೆ ಮಳೆಯಾಗಿದ್ದು, ಸಿಡಿಲು ಬಡಿದು ಮೂವರ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಎರಡು, ಮುಂಡರಗಿ ತಾಲೂಕಿನ ಓರ್ವರು ಮೃತಪಟ್ಟಿದ್ದಾರೆ. ಮುರುಗೇಶ್ ಹೊಸಮನಿ 44, ಬಾಬು ದೊಡ್ಡಮನಿ 55 ಹಾಗೂ ಹನಮಪ್ಪ ಮನ್ನಾಪುರ ಎನ್ನುವವರ ಸಾವಿಗೀಡಾದವರು.

ಇದನ್ನೂ ಓದಿ:

IPL 2022 DC vs RCB playing XI: RCB ತಂಡದಲ್ಲಿ ಒಂದು ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು