AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಕರಾವಳಿ ತೀರದಲ್ಲಿ ಮುಂದುವರಿಯಲಿದೆ ವರುಣಾರ್ಭಟ: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹದ ಎಚ್ಚರಿಕೆ

Weather Forecast: ಸದ್ಯ ಬಾರ್ಮರ್​, ಭಿಲ್ವಾರಾ, ಧೋಲ್​ಪುರ, ಅಲಿಗಢ್​, ಮೀರತ್​, ಅಂಬಾಲಾ, ಅಮೃತಸರದ ಮೂಲಕ ಸದ್ಯ ನೈಋತ್ಯ ಮಾನ್ಸೂನ್​ ಹಾದು ಹೋಗುತ್ತಿದೆ. ಇನ್ನುಳಿದ ರಾಜಸ್ಥಾನ, ಉತ್ತರಪ್ರದೇಶದ ಪಶ್ಚಿಮ ಭಾಗಗಳು, ಹರ್ಯಾಣ, ಚಂಡೀಗಢ್​, ದೆಹಲಿ ಮತ್ತು ಪಂಜಾಬ್​​ನ್ನು ಪ್ರವೇಶಿಸಲು ಗಾಳಿ ಅಡ್ಡವಾಗುತ್ತಿದೆ.

Karnataka Weather: ಕರ್ನಾಟಕದ ಕರಾವಳಿ ತೀರದಲ್ಲಿ ಮುಂದುವರಿಯಲಿದೆ ವರುಣಾರ್ಭಟ: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹದ ಎಚ್ಚರಿಕೆ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
TV9 Web
| Edited By: |

Updated on:Jun 26, 2021 | 8:07 AM

Share

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ನಿನ್ನೆ (ಜೂ.25)ರಿಂದಲೂ ಮಳೆಯಾಗುತ್ತಿದೆ. ಹಾಗೇ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ. ಇದೇ ರೀತಿಯ ವಾತಾವರಣ ಜೂ.27ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕದ್ರಾ, ಗೋಕರ್ಣ, ಸಿದ್ದಾಪುರ, ಉಡುಪಿ ಜಿಲ್ಲೆಯ ಕೋಟಾ, ಕಾರ್ಕಳ, ಕಲಬುರ್ಗಿ, ಯಾದಗಿರಿ, ಶಿವಮೊಗ್ಗದ ತೀರ್ಥಹಳ್ಳಿ ಸೇರಿ ಹಲವು ಕಡೆ ಜಾಸ್ತಿ ಪ್ರಮಾಣದಲ್ಲಿ ಮಳೆಸುರಿಯುತ್ತಿದೆ. ಮುಂದಿನ 24ಗಂಟೆಯಲ್ಲಿ ಸಹ ಇದೇ ಹವಾಮಾನ ಅಂದರೆ, ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಆದರೆ ಮೀನುಗಾರರಿಗೆ ಯಾವುದೇ ಅಪಾಯದ ಎಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನಲ್ಲೂ ಹೆಚ್ಚಿನ ಪ್ರದೇಶದಲ್ಲಿ ಮಳೆ ಬೀಳಲಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಕೆಲವೇ ಪ್ರದೇಶಗಳಲ್ಲಿ ಮಳೆ ಬೀಳಲಿದೆ. ಇನ್ನು ಗುಡುಗು ಸಹ ಇರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಮಳೆಯ ಪ್ರಮಾಣ ತಗ್ಗಿದೆ. ನೈಋತ್ಯ ಮಾನ್ಸೂನ್​ ದುರ್ಬಲ ಆಗಿರುವ ಕಾರಣಕ್ಕೆ ಕಡಿಮೆಯಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕೃಷಿ ಚಟುವಟಿಕೆಗಳೂ ಭರದಿಂದ ನಡೆಯುತ್ತಿವೆ.

ಬೆಂಗಳೂರು ಹವಾಮಾನ ಬೆಂಗಳೂರಿನಲ್ಲಿ ಇಂದಿನಂದ ಜೂ.29ರವರೆಗೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕನಿಷ್ಠ ತಾಪಮಾನ 30 ಡಿಗ್ರಿಯಿಂದ 20 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಗಾಳಿಯ ಪ್ರಮಾಣ ಹೆಚ್ಚಿರಲಿದೆ. ಹೆಚ್ಚು-ಕಡಿಮೆ ಬೆಂಗಳೂರಿನಲ್ಲಿ ಜೂ.30ರವರೆಗೂ ಇದೇ ವಾತಾವರಣ ಮುಂದುವರಿಯಲಿದ್ದು, ಜು.1ರಬಳಿಕ ವಾತಾವರಣ ಬದಲಾಗಬಹುದು ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಇನ್ನು ಸದ್ಯ ಬಾರ್ಮರ್​, ಭಿಲ್ವಾರಾ, ಧೋಲ್​ಪುರ, ಅಲಿಗಢ್​, ಮೀರತ್​, ಅಂಬಾಲಾ, ಅಮೃತಸರದ ಮೂಲಕ ಸದ್ಯ ನೈಋತ್ಯ ಮಾನ್ಸೂನ್​ ಹಾದು ಹೋಗುತ್ತಿದೆ. ಇನ್ನುಳಿದ ರಾಜಸ್ಥಾನ, ಉತ್ತರಪ್ರದೇಶದ ಪಶ್ಚಿಮ ಭಾಗಗಳು, ಹರ್ಯಾಣ, ಚಂಡೀಗಢ್​, ದೆಹಲಿ ಮತ್ತು ಪಂಜಾಬ್​​ನ್ನು ಪ್ರವೇಶಿಸಲು ಗಾಳಿ ಅಡ್ಡವಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಿಂದ ಬೀಸುವ ಬಲವಾದ ಗಾಳಿ ಮತ್ತು ಬಂಗಾಳಕೊಲ್ಲಿಯಿಂದ ತೇವಾಂಶವನ್ನು ಹೊತ್ತು ತರುವ ಗಾಳಿಯಿಂದ ಈಶಾನ್ಯ ರಾಜ್ಯಗಳಲ್ಲಿ ಮುಂದಿನ 5ದಿನಗಳ ಕಾಲ ಸಿಕ್ಕಾಪಟೆ ಮಳೆಯಾಗುವ ಸಾಧ್ಯತೆ ಇದೆ. ಅಸ್ಸಾಂ, ಮೇಘಾಲಯದ ಹಲವೆಡೆ ಭರ್ಜರಿ ಮಳೆ ನಿರೀಕ್ಷೆ ಮಾಡಲಾಗಿದೆ ಎಂದು ಐಎಂಡಿ ತಿಳಿಸಿದೆ. ಅಸ್ಸಾಂನ ನೆರೆಹೊರೆ ಪ್ರದೇಶಗಳು, ಅರುಣಾಚಲ ಪ್ರದೇಶಗಳಲ್ಲಿ ಸುಮಾರು 250 ಮಿಮೀ ಮಳೆಯಾಗಲಿದ್ದು, ನದಿಗಳು ತುಂಬಿ ಹರಿದು ಪ್ರವಾಹಪರಿಸ್ಥಿತಿ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ. ಹಾಗೇ, ಕೊಂಕಣ ಮತ್ತು ಮಲ್ಬಾರ್​ ಕರಾವಳಿ ತೀರದಲ್ಲಿ ಮಳೆ ಮುಂದುವರಿಯಲಿದೆ.

ಇದನ್ನೂ ಓದಿ: ನಿಂಗೂ, ನಿನ್ನ ಫ್ರೆಂಡ್​ಶಿಪ್​ಗೂ ದೊಡ್ಡ ನಮಸ್ಕಾರ; ಮಂಜುಗೆ ಗುಡ್​ ಬೈ ಹೇಳಿದ ದಿವ್ಯಾ ಸುರೇಶ್​

Published On - 8:06 am, Sat, 26 June 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ