Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಇಂದೂ ಕೂಡಾ ಶಾಲಾ -ಕಾಲೇಜುಗಳಿಗೆ ರಜೆ; ಉಡುಪಿಯಲ್ಲಿ ಭಾರಿ ಮಳೆಯ ಎಚ್ಚರಿಕೆ

ಮಡಿಕೇರಿ ತಾಲೂಕಿನ ಕೊಯನಾಡು ಬಳಿ ಪಯಸ್ವಿನಿ ನದಿಗೆ ಕಟ್ಟಲಾಗಿರುವ ಕಿಂಡಿ ಅಣೆಕಟ್ಟಿನ ತಡೆಗೋಡೆಗೆ ಹಾನಿಯಾಗಿದ್ದು, ತಡೆಗೋಡೆ ಕುಸಿದು ಬೀಳುವ ಆತಂಕ ಶುರುವಾಗಿದೆ.

ಕೊಡಗಿನಲ್ಲಿ ಇಂದೂ ಕೂಡಾ ಶಾಲಾ -ಕಾಲೇಜುಗಳಿಗೆ ರಜೆ; ಉಡುಪಿಯಲ್ಲಿ ಭಾರಿ ಮಳೆಯ ಎಚ್ಚರಿಕೆ
ಕಿಂಡಿ ಅಣೆಕಟ್ಟಿನ ತಡೆಗೋಡೆಗೆ ಹಾನಿಯಾಗಿದೆ
Follow us
TV9 Web
| Updated By: sandhya thejappa

Updated on:Jul 09, 2022 | 8:44 AM

ಕೊಡಗು: ರಾಜ್ಯದಲ್ಲಿ ಹಲವೆಡೆ ಭಾರಿ ಮಳೆ (Heavy Rain) ಮುಂದುವರಿದಿದ್ದು, ಜನ ಜೀವನ ಅಸ್ತವ್ಯಸ್ಥವಾಗಿದೆ. ಕೊಡಗಿನಾದ್ಯಂತ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಇಂದು ಕೂಡಾ ಶಾಲಾ- ಕಾಲೇಜುಗಳಿಗೆ (Schools And Colleges) ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಡಿಸಿ ಡಾ ಬಿಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ಇನ್ನು ಮಡಿಕೇರಿ ತಾಲೂಕಿನ ಕೊಯನಾಡು ಬಳಿ ಪಯಸ್ವಿನಿ ನದಿಗೆ ಕಟ್ಟಲಾಗಿರುವ ಕಿಂಡಿ ಅಣೆಕಟ್ಟಿನ ತಡೆಗೋಡೆಗೆ ಹಾನಿಯಾಗಿದ್ದು, ತಡೆಗೋಡೆ ಕುಸಿದು ಬೀಳುವ ಆತಂಕ ಶುರುವಾಗಿದೆ.

ಉಡುಪಿಯಲ್ಲಿ ಇಂದು ಭಾರಿ ಮಳೆಯಾಗುವ ಎಚ್ಚರಿಕೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಜಿಲ್ಲಾಡಳಿತ ಈಗಾಗಲೇ ಶಾಲಾ-ಕಾಲೇಜಿಗೆ ರಜೆ ನೀಡಿದೆ. ಜಿಲ್ಲೆಯಲ್ಲಿ  ಕಳೆದ 1 ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: ಸೀಟ್​​​ ಬೆಲ್ಟ್​​ ಧರಿಸದೆ ಸಿಕ್ಕಿಬಿದ್ದವ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸಬ್​​ವೇ ಟ್ರ್ಯಾಕ್ ಮೇಲಿಂದ ಕಟ್ಟಡದ ಮೇಲೆ ಜಿಗಿದು ಕಾಲು ಮುರಿದುಕೊಂಡ!

ಇದನ್ನೂ ಓದಿ
Image
Shinzo Abe Death: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ; ಭಾರತದಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ
Image
Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು
Image
ಸೀಟ್​​​ ಬೆಲ್ಟ್​​ ಧರಿಸದೆ ಸಿಕ್ಕಿಬಿದ್ದವ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸಬ್​​ವೇ ಟ್ರ್ಯಾಕ್ ಮೇಲಿಂದ ಕಟ್ಟಡದ ಮೇಲೆ ಜಿಗಿದು ಕಾಲು ಮುರಿದುಕೊಂಡ!
Image
Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಗುಡ್ಡ ಕುಸಿತ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕಾರವಾರ ನಗರ ಹೊರವಲಯದ ಬಿಣಗಾ ಬಳಿ ಗೋವಾ-ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಈ ಹಿನ್ನೆಲೆ  ಹಿನ್ನೆಲೆ ಸಂಚಾರ ಅಸ್ತವ್ಯಸ್ತವಾಗಿದೆ. ಸದ್ಯ ರಸ್ತೆಯಲ್ಲಿ ಬಿದ್ದ ಮಣ್ಣನ್ನು ಜಿಲ್ಲಾಡಳಿತ ತೆರವುಗೊಳಿಸುತ್ತಿದೆ.

ಕೆಆರ್‌ಎಸ್ ಡ್ಯಾಂ ಒಳ ಹರಿವು ಪ್ರಮಾಣ ಹೆಚ್ಚಳ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಡ್ಯಾಂ ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಇದೆ. ಇನ್ನೂ ಮೂರು ದಿನದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ  ಸದ್ಯ 121.42 ಅಡಿ ನೀರು ಭರ್ತಿಯಾಗಿದೆ. ಒಳ ಹರಿವಿನ ಪ್ರಮಾಣ 34.304 ಕ್ಯೂಸೆಕ್ ಇದ್ದರೆ, ಹೊರ ಹರಿವಿನ ಪ್ರಮಾಣ 3,307 ಕ್ಯೂಸೆಕ್ ಇದೆ.

ಇದನ್ನೂ ಓದಿ: Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು

ಚಿಕ್ಕಮಗಳೂರಿನಲ್ಲಿ ಕಿರು ಸೇತುವೆ ಕುಸಿತ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಮಣಬೂರಿನಲ್ಲಿದ್ದ ಕಿರು ಸೇತುವೆ ಕುಸಿದಿದೆ. ರಸ್ತೆಗಳು ಕುಸಿಯುತ್ತಿರುವುದರಿಂದ ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ. ಇನ್ನು ಕೊಪ್ಪ ತಾಲೂಕಿನ ಬಸರಿಕಟ್ಟೆಯ ಸಮೀಪ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿವೆ.

ಯಾದಗಿರಿಯಲ್ಲಿ ಪ್ರವಾಹ ಭೀತಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಯಾದಗಿರಿಯ ಕೃಷ್ಣಾ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಶುರುವಾಗಿದೆ. ಪ್ರವಾಹ ಮುನ್ಸೂಚನೆ ಹಿನ್ನೆಲೆ ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದಾರೆ. ಪೊಲೀಸರು ನದಿ ಸುತ್ತಮುತ್ತ ಗ್ರಾಮಗಳಿಗೆ ಭೇಟಿ ನೀಡಿ, ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಸೂಚನೆ ನೀಡುತ್ತಿದ್ದಾರೆ.

ಪ್ರವಾಹದಿಂದ ಬೆಳೆ ನಾಶ: ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಜೋರಾಗಿದ್ದರಿಂದ ವರದಾ, ತುಂಗಭದ್ರಾ, ಕುಮುದ್ವತಿ ನದಿ ತುಂಬಿ ಹರಿಯುತ್ತಿವೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೇರೂರು ಗ್ರಾಮದ ಬಳಿ ನದಿಗಳ ಪ್ರವಾಹದಿಂದ ಮೆಕ್ಕೆಜೋಳ, ಕಬ್ಬು, ಚೆಂಡು ಹೂವಿನ ಬೆಳೆ ನಾಶವಾಗಿದೆ.

Published On - 8:22 am, Sat, 9 July 22

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ