AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rains in Bengaluru: ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ! ಆರೆಂಜ್ ಅಲರ್ಟ್​ ಘೋಷಣೆ: 69 ಮಿಮೀ​ ಮಳೆ ದಾಖಲು

ನೈಋತ್ಯ ಮುಂಗಾರು ಪರಿಣಾಮ ಬೆಂಗಳೂರಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಹೆಚ್ಎಎಲ್​​ ಏರ್​​ಪೋರ್ಟ್​ 9.2 ಮಿಲಿಮೀಟರ್​, ಎಲೆಕ್ಟ್ರಾನಿಕ್ ಸಿಟಿ 29 ಮಿ.ಮೀ., ಮಾದಾವರ 4.5 ಮಿ.ಮೀ ಸೋಂಪುರ (ಬೆಂಗಳೂರು ನಗರ) 5.5 ಮಿ.ಮೀ.​ ಮಳೆ ದಾಖಲಾಗಿದೆ ಎಂದು ಬೆಂಗಳೂರಿನ ಮಳೆ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Rains in Bengaluru: ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ! ಆರೆಂಜ್ ಅಲರ್ಟ್​ ಘೋಷಣೆ: 69 ಮಿಮೀ​ ಮಳೆ ದಾಖಲು
ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ! ಆರೆಂಜ್ ಅಲರ್ಟ್​ ಘೋಷಣೆ: 69 ಮಿಮೀ​ ಮಳೆ ದಾಖಲು
Vinayak Hanamant Gurav
| Edited By: |

Updated on:Jun 02, 2024 | 10:34 PM

Share

ಬೆಂಗಳೂರು, ಜೂನ್​ 02: ನಗದರಲ್ಲಿ ನಿನ್ನೆ ಮಳೆ (Rain) ಹೀಗೆ ಬಂದು ಹಾಗೆ ಕಣ್ಮರೆಯಾಗಿತ್ತು. ಇವತ್ತು ಬೆಳಗ್ಗೆಯಿಂದ ಸುಡು ಬಿಸಿಲಿಗೆ ಅಬ್ಬಬ್ಬಾ ಎನಿಸಿದ್ರೆ, ಸಂಜೆಯಾಗುತ್ತಿದ್ದಂತೆ ಸುರಿದ ಜೋರು ಮಳೆಗೆ ಸಿಲಿಕಾನ್​ ಸಿಟಿ ಜನ ಬೆಚ್ಚಿಬಿದ್ದಿದ್ದಾರೆ. ಹೀಗಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ಇನ್ನು ಇಂದು ನಗರದಲ್ಲಿ 69 ಮಿಲಿಮೀಟರ್​ ಮಳೆ ಪ್ರಮಾಣ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನೈಋತ್ಯ ಮುಂಗಾರು ಪರಿಣಾಮ ಬೆಂಗಳೂರಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಹೆಚ್ಎಎಲ್​​ ಏರ್​​ಪೋರ್ಟ್​ 9.2 ಮಿಲಿಮೀಟರ್​, ಎಲೆಕ್ಟ್ರಾನಿಕ್ ಸಿಟಿ 29 ಮಿ.ಮೀ., ಮಾದಾವರ 4.5 ಮಿ.ಮೀ ಸೋಂಪುರ(ಬೆಂಗಳೂರು ನಗರ) 5.5 ಮಿ.ಮೀ.​ ಮಳೆ ದಾಖಲಾಗಿದೆ ಎಂದು ಬೆಂಗಳೂರಿನ ಮಳೆ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ

ಮೆಜೆಸ್ಟಿಕ್​, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಶಿವಾಜಿನಗರ, ಜಯನಗರ, ಹೆಬ್ಬಾಳ, ಮಾಗಡಿ ರಸ್ತೆ, ಕೋರಮಂಗಲ, ಕೆ.ಆರ್​.ಪುರಂ, ವಿಧಾನಸೌಧ, ಟೌನ್​ಹಾಲ್​​, ಕೆ.ಆರ್​.ಮಾರ್ಕೆಟ್,​ ಕಾರ್ಪೊರೇಷನ್​​, ಶಿವಾಜಿನಗರ, ಜಯನಗರ, ಸದಾಶಿವನಗರ, ಹೆಬ್ಬಾಳ, ಯಲಹಂಕ, ವಿಜಯನಗರ, ಮೈಸೂರು ರಸ್ತೆ, ಕೆಂಗೇರಿ, ಮಾಗಡಿ ರಸ್ತೆ, ಮಡಿವಾಳ, ಕೋರಮಂಗಲ, ಹೊಸೂರು ರಸ್ತೆ, ಕೆ.ಆರ್​.ಪುರಂ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಾ ಬಿರುಗಾಳಿ ಸಹಿತ ವರ್ಷಧಾರೆ ಆಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಸಂಜೆಯಿಂದ ಶುರುವಾದ ಮಳೆಗೆ ಬೆಂಗಳೂರು ನಡುಗಿದೆ. ಯಾವ ರಸ್ತೆಗೆ ಕಾಲಿಟ್ಟರೂ ನೀರು ಪ್ರವಾಹದಂತೆ ಹರೀತಿತ್ತು. ಮಾರ್ಕೆಟ್, ಮೆಜೆಸ್ಟಿಕ್, ಕೆಪಿ ಅಗ್ರಹಾರ, ಶಾಂತಿನಗರ, ಜಯನಗರ, ರಾಜಾಜಿನಗರ, ಕೋರಮಂಗಲ, ಮಡಿವಾಳ, ಹೆಬ್ಬಾಳ ಸೇರಿದಂತೆ ಹಲವು ರಸ್ತೆಗಳಲ್ಲಿ 2-3 ಅಡಿಯಷ್ಟು ನೀರು ನಿಂತಿತ್ತು. ಇಡೀ ರಸ್ತೆಗಳೇ ಕೆರೆಗಳಾಗಿದ್ದವು. ಅಂಗಡಿ, ಮನೆಗಳಿಗೂ ಮೋರಿ ನೀರು ನುಗ್ಗಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ವರುಣಾರ್ಭಟಕ್ಕೆ ನಗರದ ಹಲವೆಡೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ವರುಣನ ಅಬ್ಬರಕ್ಕೆ ನೂರಕ್ಕೂ ಹೆಚ್ಚು ಮರಗಳು ಧರಶಾಹಿ ಆಗಿದ್ದು, ಬಿಬಿಎಂಪಿ ಕಂಟ್ರೋಲ್ ರೂಂಗೆ ದೂರುಗಳು ಬಂದಿವೆ. ಇಲ್ಲಿಯವರೆಗೆ ವಿವಿಧೆಡೆ 118 ಮರಗಳು, 128 ಕೊಂಬೆಗಳು ಧರಶಾಹಿಯಾಗಿದ್ದು, ಆ ಪೈಕಿ ಕೇವಲ 48 ಕಡೆ ಮಾತ್ರ ಮರಗಳ ತೆರವು ಕಾರ್ಯ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆ ಇನ್ನೂ ಹಲವೆಡೆ ಮರಗಳು ತೆರವು ಮಾಡಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Sun, 2 June 24

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ