AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೊ ಬಳಿಕ ಈರುಳ್ಳಿ ಸರದಿ; ನಿರಂತರ ಮಳೆ ಕಾರಣ ಈರುಳ್ಳಿ ದರದಲ್ಲಿ ಏರಿಕೆ

Onion Rate: ಬೆಂಗಳೂರು ನಗರದಲ್ಲಿ ಈರುಳ್ಳಿ ಕೊರತೆ ಎದುರಾಗಿದೆ. ಮಳೆಯಿಂದಾಗಿ ಈರುಳ್ಳಿ ಸರಬರಾಜಿನಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರದಲ್ಲಿ ಕಳೆದ ವಾರದಿಂದ ಮಳೆ ಜೋರಾಗಿದೆ.

ಟೊಮ್ಯಾಟೊ ಬಳಿಕ ಈರುಳ್ಳಿ ಸರದಿ; ನಿರಂತರ ಮಳೆ ಕಾರಣ ಈರುಳ್ಳಿ ದರದಲ್ಲಿ ಏರಿಕೆ
ಈರುಳ್ಳಿ ದರದಲ್ಲಿ ಏರಿಕೆ
Follow us
TV9 Web
| Updated By: ganapathi bhat

Updated on:Oct 25, 2021 | 9:49 PM

ಬೆಂಗಳೂರು: ಬೆಲೆ ಏರಿಕೆ ವಿಚಾರದಲ್ಲಿ ಟೊಮ್ಯಾಟೊ ಬಳಿಕ ಈಗ ಈರುಳ್ಳಿ ಸರದಿ ಬಂದಿದೆ. ನಿರಂತರ ಮಳೆಗೆ ಈರುಳ್ಳಿ ದರದಲ್ಲಿ ಏರಿಕೆ ಕಂಡುಬಂದಿದೆ. ಬೆಲೆ ಏರಿಕೆ ಜೊತೆಗೆ ಈರುಳ್ಳಿ ಸ್ಟಾಕ್ ಕೊರತೆ ಕೂಡ ಹೆಚ್ಚಾಗಿದೆ. ಬೆಂಗಳೂರು ನಗರದಲ್ಲಿ ಈರುಳ್ಳಿ ಕೊರತೆ ಎದುರಾಗಿದೆ. ಮಳೆಯಿಂದಾಗಿ ಈರುಳ್ಳಿ ಸರಬರಾಜಿನಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರದಲ್ಲಿ ಕಳೆದ ವಾರದಿಂದ ಮಳೆ ಜೋರಾಗಿದೆ.

ಈ ಹಿನ್ನೆಲೆಯಲ್ಲಿ ಮೊದಲು 1 ಲಕ್ಷ 80 ಸಾವಿರ ಮೂಟೆಗಳು ಎಪಿಎಂಸಿಗೆ ಬರುತ್ತಿದ್ದದ್ದು, ಈಗ ಮಳೆಯಿಂದಾಗಿ ಕೇವಲ 1 ಲಕ್ಷ ಮೂಟೆಗಳು ಮಾತ್ರ ಬರುತ್ತಿವೆ. ಬರುತ್ತಿರುವ ಮೊಟೆಗಳಲ್ಲೂ ಶೇಕಡಾ 75 ರಷ್ಟು ಮಾಲು ಹಾಳಾಗಿರೋದೇ ಇದೆ ಎಂದು ಹೇಳುತ್ತಿದ್ದಾರೆ. ಮಳೆ ಹೀಗೆ ಮುಂದುವರೆದರೆ ಈರುಳ್ಳಿ ದರ ಮತ್ತಷ್ಟು ಏರಿಕೆ‌ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ 1 ಕೆ.ಜಿ.ಗೆ 20 ರಿಂದ 30 ರೂಪಾಯಿ ಇದ್ದ ಈರುಳ್ಳಿ ದರ ಈಗ ಪ್ರತೀ ಕೆ.ಜಿ ಈರುಳ್ಳಿಗೆ 50 ರಿಂದ 60 ರೂಪಾಯಿಗೆ ಏರಿಕೆ ಆಗಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಹೋಲ್ ಸೆಲ್ ನಲ್ಲಿ 50 ಕೆ.ಜಿಗೆ 1700-1800 ರೂಪಾಯಿ ಆಗಿದೆ.

ಅಕಾಲಿಕ ಮಳೆಯಿಂದ ಆದ ಬೆಳೆ ಹಾನಿಯ ವರದಿಗಳ ಮಧ್ಯೆಯೂ ಮಂಡಿಗಳಿಗೆ ನಿಧಾನಗತಿಯಲ್ಲಿ ಬಂದಿದ್ದರಿಂದ ಟೊಮೆಟೊ ರೀಟೇಲ್ ಬೆಲೆ, ವಾರದ ಹಿಂದೆ ಮೆಟ್ರೋಗಳಲ್ಲಿ ಪ್ರತಿ ಕೇಜಿಗೆ 93 ರೂಪಾಯಿ ಆಗಿತ್ತು, ಎಂದು ಸರ್ಕಾರದ ಅಂಕಿ- ಅಂಶಗಳಿಂದ ತಿಳಿದುಬಂದಿತ್ತು. ಮೆಟ್ರೋ ನಗರಗಳ ಪೈಕಿ ಕೊಲ್ಕತ್ತಾದಲ್ಲಿ ಟೊಮೆಟೊ ಪ್ರತಿ ಕೇಜಿಗೆ ರೂ. 93, ಚೆನ್ನೈನಲ್ಲಿ ರೂ. 60, ದೆಹಲಿಯಲ್ಲಿ ರೂ. 59 ಮತ್ತು ಚೆನ್ನೈನಲ್ಲಿ ರೂ. 53 ಎಂದು ದತ್ತಾಂಶವು ತೋರಿಸಿತ್ತು.

ಗ್ರಾಹಕರ ವ್ಯವಹಾರಗಳ ಸಚಿವಾಲಯವು ಟ್ರ್ಯಾಕ್ ಮಾಡಿದ 175ಕ್ಕೂ ಹೆಚ್ಚು ನಗರಗಳ ಪೈಕಿ 50ಕ್ಕೂ ಹೆಚ್ಚಿನ ಕಡೆ ಟೊಮೆಟೊ ಚಿಲ್ಲರೆ ಬೆಲೆ ಪ್ರತಿ ಕೇಜಿಗೆ 50 ರೂಪಾಯಿಗಿಂತ ಅಧಿಕವಾಗಿತ್ತು. ಸಗಟು ಮಾರುಕಟ್ಟೆಗಳಲ್ಲಿ ಕೂಡ ಟೊಮೆಟೊವನ್ನು ಕೋಲ್ಕತ್ತಾದಲ್ಲಿ ಪ್ರತಿ ಕೇಜಿಗೆ 84 ರೂಪಾಯಿ, ಚೆನ್ನೈನಲ್ಲಿ 52 ರೂಪಾಯಿ, ಮುಂಬೈನಲ್ಲಿ 30 ರೂಪಾಯಿ ಮತ್ತು ದೆಹಲಿಯಲ್ಲಿ ಪ್ರತಿ ಕೇಜಿಗೆ 29.50 ರೂಪಾಯಿಯಂತೆ ಮಾರಲಾಗಿತ್ತು. ಪ್ರಮುಖವಾಗಿ ಟೊಮೆಟೊ ಬೆಳೆಯುತ್ತಿರುವ ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯ ಮಧ್ಯೆ ಕಳಪೆ ಆಗಮನದಿಂದಾಗಿ ಟೊಮೆಟೊ ಬೆಲೆಗಳು ದೃಢವಾಗಿತ್ತು.

ಇದನ್ನೂ ಓದಿ: ಟೊಮ್ಯಾಟೊ ಬೆಲೆಯಲ್ಲಿ ಏರಿಕೆ; ಏಷ್ಯಾದಲ್ಲೇ ಅತಿದೊಡ್ಡ ಟೊಮ್ಯಾಟೊ ಮಾರುಕಟ್ಟೆ ಕೋಲಾರದಲ್ಲಿ ಹೇಗಿದೆ ಸ್ಥಿತಿಗತಿ?

ಇದನ್ನೂ ಓದಿ: Chintamani: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ

Published On - 2:56 pm, Mon, 25 October 21

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ