AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮ್ಯಾಟೊ ಬಳಿಕ ಈರುಳ್ಳಿ ಸರದಿ; ನಿರಂತರ ಮಳೆ ಕಾರಣ ಈರುಳ್ಳಿ ದರದಲ್ಲಿ ಏರಿಕೆ

Onion Rate: ಬೆಂಗಳೂರು ನಗರದಲ್ಲಿ ಈರುಳ್ಳಿ ಕೊರತೆ ಎದುರಾಗಿದೆ. ಮಳೆಯಿಂದಾಗಿ ಈರುಳ್ಳಿ ಸರಬರಾಜಿನಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರದಲ್ಲಿ ಕಳೆದ ವಾರದಿಂದ ಮಳೆ ಜೋರಾಗಿದೆ.

ಟೊಮ್ಯಾಟೊ ಬಳಿಕ ಈರುಳ್ಳಿ ಸರದಿ; ನಿರಂತರ ಮಳೆ ಕಾರಣ ಈರುಳ್ಳಿ ದರದಲ್ಲಿ ಏರಿಕೆ
ಈರುಳ್ಳಿ ದರದಲ್ಲಿ ಏರಿಕೆ
TV9 Web
| Edited By: |

Updated on:Oct 25, 2021 | 9:49 PM

Share

ಬೆಂಗಳೂರು: ಬೆಲೆ ಏರಿಕೆ ವಿಚಾರದಲ್ಲಿ ಟೊಮ್ಯಾಟೊ ಬಳಿಕ ಈಗ ಈರುಳ್ಳಿ ಸರದಿ ಬಂದಿದೆ. ನಿರಂತರ ಮಳೆಗೆ ಈರುಳ್ಳಿ ದರದಲ್ಲಿ ಏರಿಕೆ ಕಂಡುಬಂದಿದೆ. ಬೆಲೆ ಏರಿಕೆ ಜೊತೆಗೆ ಈರುಳ್ಳಿ ಸ್ಟಾಕ್ ಕೊರತೆ ಕೂಡ ಹೆಚ್ಚಾಗಿದೆ. ಬೆಂಗಳೂರು ನಗರದಲ್ಲಿ ಈರುಳ್ಳಿ ಕೊರತೆ ಎದುರಾಗಿದೆ. ಮಳೆಯಿಂದಾಗಿ ಈರುಳ್ಳಿ ಸರಬರಾಜಿನಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರದಲ್ಲಿ ಕಳೆದ ವಾರದಿಂದ ಮಳೆ ಜೋರಾಗಿದೆ.

ಈ ಹಿನ್ನೆಲೆಯಲ್ಲಿ ಮೊದಲು 1 ಲಕ್ಷ 80 ಸಾವಿರ ಮೂಟೆಗಳು ಎಪಿಎಂಸಿಗೆ ಬರುತ್ತಿದ್ದದ್ದು, ಈಗ ಮಳೆಯಿಂದಾಗಿ ಕೇವಲ 1 ಲಕ್ಷ ಮೂಟೆಗಳು ಮಾತ್ರ ಬರುತ್ತಿವೆ. ಬರುತ್ತಿರುವ ಮೊಟೆಗಳಲ್ಲೂ ಶೇಕಡಾ 75 ರಷ್ಟು ಮಾಲು ಹಾಳಾಗಿರೋದೇ ಇದೆ ಎಂದು ಹೇಳುತ್ತಿದ್ದಾರೆ. ಮಳೆ ಹೀಗೆ ಮುಂದುವರೆದರೆ ಈರುಳ್ಳಿ ದರ ಮತ್ತಷ್ಟು ಏರಿಕೆ‌ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ 1 ಕೆ.ಜಿ.ಗೆ 20 ರಿಂದ 30 ರೂಪಾಯಿ ಇದ್ದ ಈರುಳ್ಳಿ ದರ ಈಗ ಪ್ರತೀ ಕೆ.ಜಿ ಈರುಳ್ಳಿಗೆ 50 ರಿಂದ 60 ರೂಪಾಯಿಗೆ ಏರಿಕೆ ಆಗಿದೆ. ಉತ್ತಮ ಗುಣಮಟ್ಟದ ಈರುಳ್ಳಿ ಹೋಲ್ ಸೆಲ್ ನಲ್ಲಿ 50 ಕೆ.ಜಿಗೆ 1700-1800 ರೂಪಾಯಿ ಆಗಿದೆ.

ಅಕಾಲಿಕ ಮಳೆಯಿಂದ ಆದ ಬೆಳೆ ಹಾನಿಯ ವರದಿಗಳ ಮಧ್ಯೆಯೂ ಮಂಡಿಗಳಿಗೆ ನಿಧಾನಗತಿಯಲ್ಲಿ ಬಂದಿದ್ದರಿಂದ ಟೊಮೆಟೊ ರೀಟೇಲ್ ಬೆಲೆ, ವಾರದ ಹಿಂದೆ ಮೆಟ್ರೋಗಳಲ್ಲಿ ಪ್ರತಿ ಕೇಜಿಗೆ 93 ರೂಪಾಯಿ ಆಗಿತ್ತು, ಎಂದು ಸರ್ಕಾರದ ಅಂಕಿ- ಅಂಶಗಳಿಂದ ತಿಳಿದುಬಂದಿತ್ತು. ಮೆಟ್ರೋ ನಗರಗಳ ಪೈಕಿ ಕೊಲ್ಕತ್ತಾದಲ್ಲಿ ಟೊಮೆಟೊ ಪ್ರತಿ ಕೇಜಿಗೆ ರೂ. 93, ಚೆನ್ನೈನಲ್ಲಿ ರೂ. 60, ದೆಹಲಿಯಲ್ಲಿ ರೂ. 59 ಮತ್ತು ಚೆನ್ನೈನಲ್ಲಿ ರೂ. 53 ಎಂದು ದತ್ತಾಂಶವು ತೋರಿಸಿತ್ತು.

ಗ್ರಾಹಕರ ವ್ಯವಹಾರಗಳ ಸಚಿವಾಲಯವು ಟ್ರ್ಯಾಕ್ ಮಾಡಿದ 175ಕ್ಕೂ ಹೆಚ್ಚು ನಗರಗಳ ಪೈಕಿ 50ಕ್ಕೂ ಹೆಚ್ಚಿನ ಕಡೆ ಟೊಮೆಟೊ ಚಿಲ್ಲರೆ ಬೆಲೆ ಪ್ರತಿ ಕೇಜಿಗೆ 50 ರೂಪಾಯಿಗಿಂತ ಅಧಿಕವಾಗಿತ್ತು. ಸಗಟು ಮಾರುಕಟ್ಟೆಗಳಲ್ಲಿ ಕೂಡ ಟೊಮೆಟೊವನ್ನು ಕೋಲ್ಕತ್ತಾದಲ್ಲಿ ಪ್ರತಿ ಕೇಜಿಗೆ 84 ರೂಪಾಯಿ, ಚೆನ್ನೈನಲ್ಲಿ 52 ರೂಪಾಯಿ, ಮುಂಬೈನಲ್ಲಿ 30 ರೂಪಾಯಿ ಮತ್ತು ದೆಹಲಿಯಲ್ಲಿ ಪ್ರತಿ ಕೇಜಿಗೆ 29.50 ರೂಪಾಯಿಯಂತೆ ಮಾರಲಾಗಿತ್ತು. ಪ್ರಮುಖವಾಗಿ ಟೊಮೆಟೊ ಬೆಳೆಯುತ್ತಿರುವ ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯ ಮಧ್ಯೆ ಕಳಪೆ ಆಗಮನದಿಂದಾಗಿ ಟೊಮೆಟೊ ಬೆಲೆಗಳು ದೃಢವಾಗಿತ್ತು.

ಇದನ್ನೂ ಓದಿ: ಟೊಮ್ಯಾಟೊ ಬೆಲೆಯಲ್ಲಿ ಏರಿಕೆ; ಏಷ್ಯಾದಲ್ಲೇ ಅತಿದೊಡ್ಡ ಟೊಮ್ಯಾಟೊ ಮಾರುಕಟ್ಟೆ ಕೋಲಾರದಲ್ಲಿ ಹೇಗಿದೆ ಸ್ಥಿತಿಗತಿ?

ಇದನ್ನೂ ಓದಿ: Chintamani: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ

Published On - 2:56 pm, Mon, 25 October 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ