AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರ ನಡುವೆ ‘ಘೋಷಣಾ ಸಮರ’

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ತವರು ಊರಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಮೇಲೆ ವಿನಾಕಾರಣ ಎಫ್ಐಆರ್ ದಾಖಲು ಮಾಡಿದೆ ಎಂದು ಸರ್ಕಾರದ ವಿರುದ್ಧ ಆರೋಪಿಸುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರ ನಡುವೆ ‘ಘೋಷಣಾ ಸಮರ’
ಕಾಂಗ್ರೆಸ್​ ಪ್ರತಿಭಟನಾ ಮೆರವಣಿಗೆ
sandhya thejappa
|

Updated on:Mar 13, 2021 | 5:32 PM

Share

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರವರ ಬೆಂಬಲಿಗರಿಂದ ಪರಸ್ಪರ ಘೋಷಣೆ ಕೇಳಿಬಂದಿದೆ. ಮುಂದಿನ ಸಿಎಂ ಸಿದ್ದರಾಮಯ್ಯಗೆ ಜೈ ಎಂದು ಘೋಷಣೆ ಕೂಗಿದ ಕೆಲವೇ ಕ್ಷಣಗಳಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರು ಡಿಕೆ.. ಡಿಕೆ.. ಎಂದು ಡಿ.ಕೆ.ಶಿವಕುಮಾರ್ ಹೆಸರನ್ನು ಕೂಗಿದ್ದಾರೆ. ಈ ಘಟನೆ ಜಿಲ್ಲೆಯ ಪ್ರವಾಸಿ ಮಂದಿರ ಮುಂದೆ ನಡೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕೆ ಇಬ್ಬರ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆಯಾ ಎನ್ನುವ ಅನುಮಾನ ಸೃಷ್ಟಿಯಾಗಿದೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ತವರು ಊರಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಮೇಲೆ ವಿನಾಕಾರಣ ಎಫ್ಐಆರ್ ದಾಖಲು ಮಾಡಿದೆ ಎಂದು ಸರ್ಕಾರದ ವಿರುದ್ಧ ಆರೋಪಿಸುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡಿದ್ದ ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲೇ ಇಬ್ಬರ ನಾಯಕರ ಬೆಂಬಲಿಗರು ಪರಸ್ಪರ ಘೋಷಣೆ ಕೂಗಿದ್ದಾರೆ.

ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಕಾರ್ಯಕರ್ತರು ಡಿಕೆ.. ಡಿಕೆ.. ಎಂದು ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿ.ಕೆ.ಶಿವಕುಮಾರ್ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಹಾಕುವಂತೆ ತಿಳಿಸಿದರು. ಮೆರವಣಿಗೆಯಲ್ಲಿ ಸಲೀಂ ಅಹ್ಮದ್, ಈಶ್ವರ ಖಂಡ್ರೆ, ಎಸ್ ಎಸ್ ಪಾಟೀಲ್ ಹಾಗೂ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

ಇದನ್ನೂ ಓದಿ

ಶಿವಮೊಗ್ಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್​; ಸಿಎಂ ತವರು ಜಿಲ್ಲೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ

ಸದನದಲ್ಲಿ ಅಂಗಿ ಬಿಚ್ಚಿದ ಸಂಗಮೇಶ್​ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಆರಗ ಜ್ಞಾನೇಂದ್ರ

Published On - 5:22 pm, Sat, 13 March 21

ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು