AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದಲ್ಲಿ ತೇಲಿಹೋಗುತ್ತಿದ್ದ ರಾಜಹಂಸ ಬಸ್: ಸ್ಥಳೀಯರಿಂದ ಬಸ್ ತಡೆದು ಪ್ರಯಾಣಿಕರ ರಕ್ಷಣೆ

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗವಾದ ಮಡಿಕೇರಿ ತಾಲೂಕಿನ ಕಲ್ಲುಗುಂಡಿಯಲ್ಲಿ ಸುರಿದ ಭಾರೀ ಮಳೆಗೆ ರಾಜಹಂಸ ಬಸ್ ಕೊಚ್ಚಿ ಹೋಗಿದೆ. ಇದನ್ನು ನೋಡಿದ ಸಾರ್ವಜನಿಕರು ಬಸ್ ತಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.

ಪ್ರವಾಹದಲ್ಲಿ ತೇಲಿಹೋಗುತ್ತಿದ್ದ ರಾಜಹಂಸ ಬಸ್: ಸ್ಥಳೀಯರಿಂದ ಬಸ್ ತಡೆದು ಪ್ರಯಾಣಿಕರ ರಕ್ಷಣೆ
ಪ್ರಹವಾದಲ್ಲಿ ಕೊಚ್ಚಿ ಹೋಗುತ್ತಿದ್ದ ಬಸ್ ರಕ್ಷಣೆ
TV9 Web
| Edited By: |

Updated on:Aug 02, 2022 | 1:38 PM

Share

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗವಾದ ಮಡಿಕೇರಿ ತಾಲೂಕಿನ ಕಲ್ಲುಗುಂಡಿಯಲ್ಲಿ ಸುರಿದ ಭಾರೀ ಮಳೆಗೆ ಪಯಸ್ವಿನಿ ನದಿ ಉಕ್ಕಿ ಹರಿಯಲು ಆರಂಭವಾಗಿದೆ. ಇದರ ಜೊತೆಗೆ ರಸ್ತೆ ತುಂಬೆಲ್ಲಾ ನೀರು ತುಂಬಿ ಪ್ರವಾಹದ ಸ್ಥಿತಿಯೇ ನಿರ್ಮಾಣವಾಗಿತ್ತು. ಮಧ್ಯರಾತ್ರಿ ನದಿಯಂತೆ ರಸ್ತೆಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ರಾಜಹಂಸ ಬಸ್​ ಕೊಚ್ಚಿಕೊಂಡು ಹೋಗಿದ್ದು, ಕೂಡಲೇ ಎಚ್ಚೆತ್ತ ಸಾರ್ವಜನಿಕರು ಬಸ್ ತಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಈ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮಾರವಾರ ರಾತ್ರಿ ಭಾರೀ ಮಳೆಯಾಗಿದ್ದು, ಗಡಿಭಾಗಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಮನೆಗಳು ಜಲಾವೃತಗೊಂಡಿದ್ದು, ಇನ್ನು ಕೆಲವು ಮನೆಗಳು ಕುಸಿದುಬಿದ್ದಿವೆ. ಕಲ್ಲುಗುಂಡಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಅಂಗಡಿಗಳು ಜಲಾವೃತಗೊಂಡಿದ್ದು, 30ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿವೆ.

ಪವಾಡಸದೃಷ್ಯ ರೀತಿಯಲ್ಲಿ ಮಹಿಳೆ-ಮಕ್ಕಳು ಪಾರು

ಮನೆಯೊಂದರಲ್ಲಿ ಪವಾಡಸದೃಷ್ಯ ರೀತಿಯಲ್ಲಿ ಮಹಿಳೆ ಮತ್ತು ಮಕ್ಕಳು ಪಾರಾದ ಘಟನೆಯೊಂದು ಕಲ್ಲುಗುಂಡಿಯಲ್ಲಿ ನಡೆದಿದೆ. ನೀರಿನ ಒತ್ತಡಕ್ಕೆ ಕರುಣಾಕರ ಎಂಬವರ ಮನೆ ಬಾಗಿಲುಗಳು ಮುಚ್ಚಿಹೋಗಿದ್ದು, ಸೆರೆಗಳ ಮೂಲಕ ಮನೆಯೊಳಗೆ ನೀರು ನುಗ್ಗಿದೆ. ಈ ವೇಳೆ ಮನೆಯೊಳಗಿದ್ದ ಮಹಿಳೆಯ ಕುತ್ತಿಗೆ ಭಾಗದವರೆಗೆ ನೀರು ತುಂಬಿದ್ದು, ಇನ್ನೇನು ಜೀವ ಉಳಿಯಲು ಸಾಧ್ಯವಿಲ್ಲ ಎನ್ನುವಷ್ಟರಲ್ಲಿ ಬಾಗಿಲು ಒಡೆದಿದೆ. ನಿರಂತರ ನಾಲ್ಕು ಗಂಟೆಗಳ ಕಾಲ ಕಿಟಕಿಯಲ್ಲಿ ನಿಂತುಕೊಂಡ ಮಹಿಳೆ ಮತ್ತು ಮಕ್ಕಳು ಅದೃಷ್ಟವಾಶಾತ್ ಪ್ರಾಣಾಪಾಯದಿಂದ ಪರಾಗಿದ್ದಾರೆ. ಘಟನೆಯಲ್ಲಿ ಕರುಣಾಕರ ಅವರ ಪ್ರೀತಿಯ ನಾಯಿ ಸಾವನ್ನಪ್ಪಿದೆ.

ಕಲ್ಲುಗುಂಡಿಯಲ್ಲಿ ಭಯಾನಕ ಪರಿಸ್ಥಿತಿ

ಕಲ್ಲುಗುಂಡಿಯಲ್ಲಿ ರಣಾರ್ಭಟಕ್ಕೆ ಜನರು ಹೈರಾಣಾಗಿದ್ದಾರೆ. ಮಧ್ಯರಾತ್ರಿಯಿಂದ ಸುರಿಯಲು ಆರಂಭವಾದ ಭಾರೀ ಮಳೆ ಹಾಗೂ ನದಿಯ ಆರ್ಭಟಕ್ಕೆ ಗ್ರಾಮವೇ ಜಲಾವೃತಗೊಂಡಿದೆ. ಪರಿಣಾಮವಾಗಿ ಮನೆಗಳ ಒಳಗೆ ನೀರು ನುಗ್ಗಿ ಎಲ್ಲವನ್ನೂ ಹಾನಿಗೊಳಿಸಿದೆ. ಇದರಿಂದಾಗಿ ಜನರಿಗೆ ಉಡಲು ಬಟ್ಟೆಯೂ ಇಲ್ಲ, ಒಂದು ತೊಟ್ಟು ಕುಡಿಯುವ ನೀರು ಇಲ್ಲದಂತಾಗಿದೆ. ಕಳೆದ ರಾತ್ರಿ 12.30 ರಿಂದ ಬೆಳಗ್ಗಿನ ಜಾವ 5 ಗಂಟೆಯವರೆಗೂ ಗ್ರಾಮದ ಜನರು ಭಯಾನಕ ಪರಿಸ್ಥಿತಿಯನ್ನು ಎದುರಿಸಿದರು.

Published On - 11:52 am, Tue, 2 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್