AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾದರಲ್ಲಿದ್ದರು. ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದು ಹೊರಬರುತ್ತಿದ್ದಂತೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ.

BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​
ಶಾಸಕ ಮುನಿರತ್ನ
ಶಿವಪ್ರಸಾದ್​ ಬಿ.
| Edited By: ವಿವೇಕ ಬಿರಾದಾರ|

Updated on:Sep 20, 2024 | 9:52 AM

Share

ಬೆಂಗಳೂರು, ಸೆಪ್ಟೆಂಬರ್​ 20: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ (BJP) ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ಬೆದರಿಕೆ, ಜಾತಿ ನಿಂದನೆ ಮೇಲೆ ಜೈಲು ಸೇರಿದ್ದ ಮುನಿರತ್ನ

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.

ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:33 am, Fri, 20 September 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ