AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election Result: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್​ ಸಿಂಗ್, ಜೈರಾಮ್ ರಮೇಶ್​ಗೆ ಗೆಲುವು

ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಮೂವರು, ಕಾಂಗ್ರೆಸ್​ನ ಒಬ್ಬರು ಜಯಶಾಲಿಯಾಗಿದ್ದಾರೆ. ಮತ್ತು ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಒಬ್ಬ ಅಭ್ಯರ್ಥಿಗೆ ಸೋಲಾಗಿದೆ.

Rajya Sabha Election Result: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್​ ಸಿಂಗ್, ಜೈರಾಮ್ ರಮೇಶ್​ಗೆ ಗೆಲುವು
ರಾಜ್ಯಸಭಾ ಚುನಾವಣೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 10, 2022 | 9:28 PM

Share

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಮೂವರು, ಕಾಂಗ್ರೆಸ್​ನ ಒಬ್ಬರು ಜಯಶಾಲಿಯಾಗಿದ್ದಾರೆ. ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಒಬ್ಬ ಅಭ್ಯರ್ಥಿಗೆ ಸೋಲಾಗಿದೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್​ ಮತ್ತು ಲೆಹರ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಮನ್ಸೂರ್​ ಅಲಿ ಖಾನ್ ಅವರಿಗೆ ಸೋಲಾಗಿದ್ದು, ಜೈರಾಮ್ ರಮೇಶ್ ವಿಜಯಶಾಲಿಯಾಗಿದ್ದಾರೆ. ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ ಸೋಲಾಗಿದೆ.

ರಾಜ್ಯದ 4 ರಾಜ್ಯಸಭಾ ಸ್ಥಾನಗಳಿಗೆ ನಡೆದ ಮತದಾನ ಮಧ್ಯಾಹ್ನ 2 ಗಂಟೆ ವೇಳೆಗೆ ಅಂತ್ಯವಾಯಿತು. ಒಟ್ಟು 224 ಶಾಸಕರು ಮತ ಚಲಾಯಿಸಿದ್ದಾರೆ. ಇಬ್ಬರು ಶಾಸಕರಿಂದ ಅಡ್ಡ ಮತದಾನವಾಗಿದೆ (ಕ್ರಾಸ್​ ವೋಟಿಂಗ್). ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಿತು. ಜೆಡಿಎಸ್​ನ ಎಚ್​.ಡಿ.ರೇವಣ್ಣ ಅವರು ಸರಿಯಾದ ರೀತಿಯಲ್ಲಿ ಮತದಾನ ಮಾಡಲಿಲ್ಲ, ಅವರ ಮತ ಅಸಿಂಧುಗೊಳಿಸಬೇಕು ಎಂದು ಕಾಂಗ್ರೆಸ್ ಮತ್ತು ಬಿಜೆಪಿ ದೂರು ಸಲ್ಲಿಸಿತ್ತು.

ಮೂರು ರಾಜ್ಯಗಳಲ್ಲಿ ಚುನಾವಣೆ

ಜೂನ್ 10ರಂದು ನಡೆದ ಮತದಾನದ ಮೂಲಕ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ 16 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ರಾಜಸ್ಥಾನ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಲ್ಲಿ ಚುನಾವಣೆ ನಡೆಯಿತು. ಒಟ್ಟು 57 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಹಲವು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೇವಲ 16 ಸ್ಥಾನಗಳಿಗೆ ಮತದಾನ ನಡೆಯಿತು.

ರಾಜ್ಯಸಭೆಯು ಪ್ರಸ್ತುತ 245 ಸದಸ್ಯರನ್ನು ಹೊಂದಿದೆ. ಇದರಲ್ಲಿ 233 ಚುನಾಯಿತ ಮತ್ತು 12 ನಾಮನಿರ್ದೇಶಿತ ಸದಸ್ಯರು ಸೇರಿದ್ದಾರೆ. ಸಂವಿಧಾನದ ಪ್ರಕಾರ ಮೇಲ್ಮನೆಯು 250 ಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರಬಾರದು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 233 ಸದಸ್ಯರನ್ನು ಆಯ್ಕೆ ಮಾಡಿದರೆ ರಾಷ್ಟ್ರಪತಿಗಳು ಉಳಿದ 12 ಮಂದಿಯನ್ನು ನಾಮನಿರ್ದೇಶನ ಮಾಡುತ್ತಾರೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:27 pm, Fri, 10 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ