AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಮನವೊಲಿಸುವಲ್ಲಿ ಯಶಸ್ವಿಯಾದ ಕುಮಾರಸ್ವಾಮಿ

ಲೋಕಸಭಾ ಚುನಾವಣೆ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದರಿಂದಾಗಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಅಸಮಾಧಾನಗೊಂಡಿದ್ದರು. ಇದೀಗ ನಾಳೆ ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಜೆಡಿಎಸ್ ಪಾಲಿಗೆ ಒಂದು ಮತ ಕೂಡ ಅತ್ಯಮೂಲ್ಯವಾಗಿದೆ. ಹೀಗಾಗಿ ಶರಣಗೌಡ ಕಂದಕೂರು ಅವರ ಅಸಮಾಧಾನ ಸರಿಪಡಿಸಲು ಕುಮಾರಸ್ವಾಮಿ ಹರಸಾಹಸಪಟ್ಟಿದ್ದು, ಕೊನೆಗೂ ಫಲಪ್ರದವಾಗಿದೆ.

ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಮನವೊಲಿಸುವಲ್ಲಿ ಯಶಸ್ವಿಯಾದ ಕುಮಾರಸ್ವಾಮಿ
ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಮನವೊಲಿಸುವಲ್ಲಿ ಯಶಸ್ವಿಯಾದ ಕುಮಾರಸ್ವಾಮಿ
ಸುನಿಲ್​ ಎಮ್​ ಹೆಚ್​
| Edited By: Rakesh Nayak Manchi|

Updated on: Feb 26, 2024 | 9:53 PM

Share

ಬೆಂಗಳೂರು, ಫೆ.26: ನಾಳೆ ರಾಜ್ಯಸಭೆ ಚುನಾವಣೆ (Rajya Sabha Elections) ನಡೆಯಲಿದ್ದು, ಜೆಡಿಎಸ್ (JDS) ಪಾಲಿಗೆ ಒಂದು ಮತ ಕೂಡ ಅತ್ಯಮೂಲ್ಯವಾಗಿದೆ. ಹೀಗಾಗಿ ಬಿಜೆಪಿ (BJP) ಜೊತೆಗಿನ ಮೈತ್ರಿಯಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು (Sharanagouda Kundkur) ಅವರನ್ನು ಮನವೋಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಯಶಸ್ವಿಯಾಗಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಕಾರಣದಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಶರಣಗೌಡ ಸಹೋದರ ಮಲ್ಲಿಕಾರ್ಜುನ್ ರೆಡ್ಡಿ ಅವರ ನಿವಾಸದಲ್ಲಿ ​ ಕುಮಾರಸ್ವಾಮಿ ಮತ್ತು ನಿಖಿಲ್ ಅವರು ಶರಣಗೌಡ ಅವರನ್ನು ಮನವೋಲಿಸುವ ಕಸರತ್ತು ನಡೆಸಿದ್ದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಎನ್​ಡಿಎಗೆ ಮತ್ತೊಂದು ಶಾಕ್, ಜೆಡಿಎಸ್​ ಪ್ಲ್ಯಾನ್ ಠುಸ್​!

ಮಲ್ಲಿಕಾರ್ಜುನ್ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಕೊನೆಗೂ ಶರಣಗೌಡ ಅವರನ್ನು ಮನವೋಲಿಸುವಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಯಶಸ್ವಿಯಾಗಿದ್ದಾರೆ. ನಿಮ್ಮ ಜೊತೆ ಇರುತ್ತೇವೆ ಎಂದ ಶರಣಗೌಡ ಸಹೋದರ ಮಲ್ಲಿಕಾರ್ಜುನ್ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ