AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿಂದು ಮೊಳಗಲಿದೆ ಅನ್ನದಾತರ ಕಹಳೆ.. ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ವಿಧಾನಸೌಧ ಚಲೋ

ಬಾರುಕೋಲು ಬೀಸಿದ್ದಾಯ್ತು.. ಟ್ರ್ಯಾಕ್ಟರ್​ ನುಗ್ಗಿಸಿದ್ದಾಯ್ತು.. ರಸ್ತೆ ರಸ್ತೆಯನ್ನೇ ಬಂದ್ ಮಾಡಿ, ರೋಷಾಗ್ನಿ ಹೊರಹಾಕಿದ್ದಾಯ್ತು.. ಆದ್ರೆ, ಕೇಂದ್ರ ಸರ್ಕಾರ ಮಾತ್ರ ಕೃಷಿ ಕಾಯ್ದೆ ಹಿಂಪಡೆಯೋಕೆ ಮುಂದಾಗ್ತಿಲ್ಲ.. ಇದೀಗ, ಹೋರಾಟ ನಾಲ್ಕು ತಿಂಗಳನ್ನು ಪೂರೈಸ್ತಿದ್ದು, ಇಂದು ಸಿಟಿಯಲ್ಲಿ ಮತ್ತೊಮ್ಮೆ ಬೃಹತ್​ ಱಲಿಗೆ ರೈತರು ಸಜ್ಜಾಗಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿಂದು ಮೊಳಗಲಿದೆ ಅನ್ನದಾತರ ಕಹಳೆ.. ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ವಿಧಾನಸೌಧ ಚಲೋ
ರಾಕೇಶ್ ಟಿಕಾಯತ್​
ಆಯೇಷಾ ಬಾನು
ಆಯೇಷಾ ಬಾನು|

Updated on: Mar 22, 2021 | 7:01 AM

Share

ಬೆಂಗಳೂರು: ಒಂದೇ ಒಂದು ಗುಟುರು.. ರೈತರ ಹೆಸ್ರಲ್ಲಿ ಸುರಿಸಿದ ಕಣ್ಣೀರು.. ಅನ್ನದಾತರ ಎದುರು ನಿಂತು ರಾಕೇಶ್​​ ಟಿಕಾಯತ್​​​​​​​​​​ ಗುಡುಗುತ್ತಿದ್ರೆ, ಕೇಂದ್ರ ಸರ್ಕಾರ ಅಕ್ಷರಶಃ ಬೆಚ್ಚಿ ಬೀಳ್ತಿತ್ತು. ದೆಹಲಿ ಗಡಿಯಲ್ಲಿ ರಾಕೇಶ್​​ ಮೊಳಗಿಸಿದ ಕಹಳೆಗೆ, ರೈತರ ಮಾರುತವೇ ನಿರ್ಮಾಣವಾಗಿತ್ತು. ಕೃಷಿ ಕಾಯ್ದೆಗಳ ವಿರುದ್ಧ ಹೋರಾಟದ ಕ್ರಾಂತಿ ಶುರುಮಾಡಿರೋ, ಟಿಕಾಯತ್ ಈಗ, ರಾಜ್ಯಕ್ಕೂ ಎಂಟ್ರಿಕೊಟ್ಟಿದ್ದಾರೆ. ಇಂದು ಹಸಿರು ಸೈನಿಕರ ಜತೆ ಬೆಂಗಳೂರಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.

ಇಂದು ಬೆಂಗಳೂರಿನಲ್ಲಿ ರೈತರ ಪ್ರತಿಭಟನಾ ಕಹಳೆ! ದೆಹಲಿ ಗಡಿಯಲ್ಲಿ ದಂಗೆ ಎದ್ದಿರೋ ಅನ್ನದಾತರ ಹೋರಾಟ ಮತ್ತೊಂದು ಸ್ವರೂಪಕ್ಕೆ ತಿರುಗಿದೆ. ಇದೇ ತಿಂಗಳ 26ಕ್ಕೆ ಪ್ರತಿಭಟನೆ ನಾಲ್ಕು ತಿಂಗಳು ಪೂರೈಸಲಿದ್ದು, ಭಾರತ್​​ ಬಂದ್​ಗೆ ರೈತರು ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲೇ ಸಾಲು ಸಾಲು ಸಮಾವೇಶ ನಡೀತಿದ್ದು, ಇಂದು ಬೆಂಗಳೂರಲ್ಲೂ ಶಕ್ತಿ ಪ್ರದರ್ಶನ ತೋರಲಿದ್ದಾರೆ. ಸುಮಾರು 25 ಸಾವಿರಕ್ಕೂ ಹೆಚ್ಚು ರೈತರು ವಿಧಾನಸೌಧ ಚಲೋ ನಡೆಸಲಿದ್ದಾರೆ. ದೆಹಲಿಯಲ್ಲಿ ರೈತ ಚಳವಳಿ ಮುನ್ನಡೆಸುತ್ತಿರೋ ರಾಕೇಶ್ ಟಿಕಾಯತ್, ಡಾ. ಸುದರ್ಶನ್ ಪಾಲ್, ಯುದ್ದವೀರ್ ಸಿಂಗ್ ಕೂಡ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ​​ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರೆಲ್ಲ ಱಲಿಯಲ್ಲಿ ಭಾಗವಹಿಸುತ್ತಿದ್ದು, ಸಿಲಿಕಾನ್​​ ಸಿಟಿಯಲ್ಲಿ ಹೋರಾಟದ ರೋಷಾಗ್ನಿ ಹೊತ್ತಿಉರಿಯಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಱಲಿ ಆರಂಭ ಅಂದಹಾಗೇ, ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಇಂದಿನ ಹೋರಾಟ ಆಯೋಜನೆ ಮಾಡಿದೆ.. ಬೆಳಗ್ಗೆ 11 ಗಂಟೆ ಸುಮಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಱಲಿ ಶುರುವಾಗಲಿದೆ. ಕ್ರಾಂತಿವೀರ ಸಂಗೊಳ್ಳಿ ಫ್ಲೈ ಓವರ್ ಮೂಲಕ ಶೇಷಾದ್ರಿ ರೋಡ್ ತಲುಪುವ ಹೋರಾಟಗಾರರು, ಅಲ್ಲಿಂದ ಕೆ.ಆರ್ ಸರ್ಕಲ್ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಪ್ಲಾನ್ ಮಾಡಿದ್ದಾರೆ. ಆದರೆ ಪೊಲೀಸರು ಮಾತ್ರ ಫ್ರೀಡಂಪಾರ್ಕ್​​​​ನಲ್ಲೇ ಱಲಿಗೆ ಬ್ರೇಕ್​​​ಹಾಕಲು ತಯಾರಿ ಮಾಡ್ಕೊಂಡಿದ್ದಾರೆ. ರಾಜ್ಯ ರೈತ ನಾಯಕರಾದ ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್ ಹೋರಾಟಕ್ಕೆ ಸಾಥ್​ ಕೊಡ್ತಿದ್ದಾರೆ. ಹಾಗೇ, ರೈತರು, ದಲಿತಪರ ಸಂಘಟನೆ, ಕಾರ್ಮಿಕರು, ಮಹಿಳಾ ಮತ್ತು ವಿದ್ಯಾರ್ಥಿ ಸಂಘಟನೆಗಳು ಱಲಿಯಲ್ಲಿ ಪಾಲ್ಗೊಳ್ಳಲಿವೆ.

ಒಟ್ನಲ್ಲಿ, ಅನ್ನದಾತರ ಹೋರಾಟ ನೂರು ದಿನದ ಗಡಿದಾಟಿದ್ರೂ, ಕೇಂದ್ರ ಸರ್ಕಾರ ತಲೆ ಕೆಡಿಸಿಕೊಳ್ತಿಲ್ಲ. ಹೀಗಾಗಿ, ಮೇಲಿಂದ ಮೇಲೆ ಪ್ರತಿಭಟನೆ ಪೆಟ್ಟು ಕೊಡಲು ರೈತ ಪಡೆ ಮುಂದಾಗಿದೆ. ಇಂದು ಬೆಂಗಳೂರಲ್ಲಿ ಮತ್ತೊಮ್ಮೆ ರಣಕಹಳೆಗೆ ಸಜ್ಜಾಗಿದ್ದು, ಸರ್ಕಾರಕ್ಕೆ ಹೇಗೆ ಬಿಸಿ ಮುಟ್ಟಿಸ್ತಾರೆ ಕಾದು ನೋಡ್ಬೇಕು.

ಇದನ್ನೂ ಓದಿ: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ