AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ: ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸಿದ್ದರಾಮಯ್ಯಗೆ ಯಶ್​ಪಾಲ್ ಸುವರ್ಣ ಮನವಿ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಕೋಟ್ಯಾಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ, ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ: ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸಿದ್ದರಾಮಯ್ಯಗೆ ಯಶ್​ಪಾಲ್ ಸುವರ್ಣ ಮನವಿ
ಯಶ್​ಪಾಲ್ ಸುವರ್ಣ ಮತ್ತು ಸಿದ್ದರಾಮಯ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: Rakesh Nayak Manchi|

Updated on: Jan 01, 2024 | 4:13 PM

Share

ಉಡುಪಿ, ಜ.1: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಉಡುಪಿ ಶಾಸಕ ಯಶ್​ಪಾಲ್ ಸುವರ್ಣ (Yashpal Suvarna) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಯಶ್​ಪಾಲ್ ಸುವರ್ಣ, ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಗೆ ನಾಡಿನ ಜನತೆಯ ಪರವಾಗಿ ಕೋರಿಕೆ ಎಂದರು.

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ತಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಯಶ್​ಪಾಲ್ ಸುವರ್ಣ ಟ್ವೀಟ್

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ‌ ಹೋರಾಟ ಕೇಸ್​ಗೆ ಮರುಜೀವ: 31 ವರ್ಷದ ಬಳಿಕ ಆರೋಪಿಯ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದ್ದು, ಜನವರಿ 22 ರಂದು ಇದರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಸದ್ಯ ಮೈಸೂರು ನಗರದ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆ ಮಾಡಿದ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿದೆ. ಈ ಬಗ್ಗೆ ಈಗಾಗಲೇ ರಾಮಮಂದಿರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಲಲ್ಲಾ ವಿಗ್ರಹಕ್ಕೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆ ಕಲ್ಲು ಬಳಕೆ ಮಾಡಲಾಗಿದೆ.

ಕರ್ನಾಟಕ, ರಾಜಸ್ಥಾನದಿಂದ ತಂದ ಶಿಲೆಗಳಲ್ಲಿ ರಾಜಸ್ಥಾನ ಶಿಲ್ಪಿಗಳು ಮತ್ತು ಕರ್ನಾಟಕದ ಇಬ್ಬರು ಶಿಲ್ಪಿಗಳಿಂದ ಬಾಲರಾಮನ ವಿಗ್ರಹ ಕೆತ್ತನೆ ಮಾಡಲಾಗಿದೆ. ಕರ್ನಾಟಕದ ಅರುಣ್​ ಯೋಗಿರಾಜ್​​, ಗಣೇಶ್ ಭಟ್​ರಿಂದ ವಿಗ್ರಹ ಕೆತ್ತನೆ ಮಾಡಿದ್ದು, ಅಂತಿಮವಾಗಿ ಮೈಸೂರಿನ ಅರುಣ್​ ಯೋಗಿರಾಜ್ ಕೆತ್ತಿರುವ ವಿಗ್ರಹ ಆಯ್ಕೆ ಮಾಡಲಾಗಿದೆ.

ಕೆತ್ತನೆಗೆ ಬಳಸಿರುವ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಕಬ್ಬಿಣ 850 ಡಿಗ್ರಿಯಲ್ಲಿ ಕಾಯಿಸಿದರೆ ಕರಗಿ ಹೋಗುತ್ತೆ. ಆದರೆ ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆಸಿಡ್ ಹಾಕಿದರು ಏನೂ ಆಗಲ್ಲ. ಮಳೆ, ಗಾಳಿ, ಬಿಸಿಲಿಗೂ ಏನು ಆಗಲ್ಲ. ಕೃಷ್ಣ ಶೀಲೆ ಸಾಕಷ್ಟು ಗಟ್ಟಿಯಾದ ಕಲ್ಲು. ಮೈಸೂರು ಅರಮನೆಯಲ್ಲಿರುವ ಮೂರ್ತಿಗಳು ಕೃಷ್ಣ ಶಿಲೆಯಲ್ಲೇ ಮಾಡಲಾಗಿದೆ ಎಂದು ಶಿಲ್ಪಿ ಸೂರ್ಯ ಪ್ರಕಾಶ್ ಹೇಳಿದ್ದಾರೆ. ಮೈಸೂರಿನ ಎಚ್.ಡಿ ಕೋಟೆ ಹಾಗೂ ಹಾಸನದಲ್ಲಿ ಮಾತ್ರ ಕೃಷ್ಣ ಶೀಲೆ ಕಲ್ಲುಗಳು ಸಿಗುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು