AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ. 22ರಂದೇ ಹೆರಿಗೆ ಕ್ರೇಜ್: ಬೆಂಗಳೂರಿನಲ್ಲಿ ರಾಮಲಲ್ಲಾ ಪ್ರತಿಷ್ಠಾನೆ ದಿನವೇ 60ಕ್ಕೂ ಹೆಚ್ಚು ಮಕ್ಕಳ ಜನನ

ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಅದ್ಧೂರಿಯಾಗಿ ನೆರವೇರಿದೆ. ಅಸಂಖ್ಯ ರಾಮಭಕ್ತರ ಶತಮಾನಗಳ ಕನಸು ಈಡೇರಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ಶುಭ ಗಳಿಗೆಯಲ್ಲಿ ತಮ್ಮ ಕಂದಮ್ಮಗಳನ್ನು ಹೆರಲು ನಿರ್ಧರಿಸಿದಂತಿದೆ. ಹೀಗಿರುವಾಗ ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ ರಾಜಧಾನಿಯಲ್ಲಿ 60ಕ್ಕೂ ಹೆಚ್ಚು ಕಂದಮ್ಮಗಳು ಜನ್ಮ ಪಡೆದುಕೊಂಡಿವೆ.

ಜ. 22ರಂದೇ ಹೆರಿಗೆ ಕ್ರೇಜ್: ಬೆಂಗಳೂರಿನಲ್ಲಿ ರಾಮಲಲ್ಲಾ ಪ್ರತಿಷ್ಠಾನೆ ದಿನವೇ 60ಕ್ಕೂ ಹೆಚ್ಚು ಮಕ್ಕಳ ಜನನ
ರಾಮಲಲ್ಲಾ, ಪ್ರತಿನಿಧಿಕ ಚಿತ್ರ
Vinay Kashappanavar
| Edited By: |

Updated on:Jan 22, 2024 | 5:48 PM

Share

ಬೆಂಗಳೂರು, ಜನವರಿ 22: ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ (Ramlalla pran pratishtha) ಅದ್ಧೂರಿಯಾಗಿ ನೆರವೇರಿದೆ. ಅಸಂಖ್ಯ ರಾಮಭಕ್ತರ ಶತಮಾನಗಳ ಕನಸು ಈಡೇರಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ಶುಭ ಗಳಿಗೆಯಲ್ಲಿ ತಮ್ಮ ಕಂದಮ್ಮಗಳನ್ನು ಹೆರಲು ನಿರ್ಧರಿಸಿದಂತಿದೆ. ಹೀಗಿರುವಾಗ ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ ರಾಜಧಾನಿಯಲ್ಲಿ 60ಕ್ಕೂ ಹೆಚ್ಚು ಕಂದಮ್ಮಗಳು ಜನ್ಮ ಪಡೆದುಕೊಂಡಿವೆ. ಸಿಲಿಕಾನ್ ಸಿಟಿಯಲ್ಲಿ ಜ. 22 ಡೆಲಿವರಿ ಡಿಮ್ಯಾಂಡ್ ಕ್ರೇಜ್ ಶುರುವಾಗಿದೆ. ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾನೆ ದಿನ ಕಂದಮ್ಮಗಳನ್ನು ಪಡೆಯಲು ಕೆಲ ಪೋಷಕರು ಆಸಕ್ತಿ ವಹಿಸಿದ್ದಾರೆ.

ಈ ಶುಭ ದಿನದಂದು ರಾಮನಂತಹ ಮಗು, ಸೀತೆಯಂತಹ ಮಗಳು ಪಡೆಯಲು ಸಿಟಿ ಪೋಷಕರು ಆಸಕ್ತಿ ವಹಿಸಿದ್ದಾರೆ. ಹಾಗಾಗಿ ಇದುವರೆಗೂ ರಾಜ್ಯದಲ್ಲಿ 40ಕ್ಕೂ ಹೆಚ್ಚು ಶಿಶುಗಳು ಜನಿಸಿವೆ.

ಯಾವ ಆಸ್ಪತ್ರೆಯಲ್ಲಿ ಎಷ್ಟು ಶಿಶುಗಳ ಜನನ

  • ವಾಣಿವಿಲಾಸ್ ಆಸ್ಪತ್ರೆಯಲ್ಲಿ 28 ಕಂದಮ್ಮಗಳು ಜನಿಸಿದ್ದು, ಈ ಪೈಕಿ 10 ನಾರ್ಮಲ್, 1 ಸಿಸೇರಿಯನ್ ಮಾಡಲಾಗಿದೆ. ಗಂಡು 16, ಹೆಣ್ಣು 12 ​
  • ಕೆಸಿ ಜನರಲ್ ಆಸ್ಪತ್ರೆಯಲ್ಲಿ ಈ ತನಕ 4 ಶಿಶುಗಳ ಜನನವಾಗಿದ್ದು, ಈ ಪೈಕಿ 2 ಸಹಜ, 2 ಸಿಸೇರಿಯೆನ್​
  • ಘೋಷಾ ಆಸ್ಪತ್ರೆಯಲ್ಲಿ ಒಟ್ಟು 6 ಕಂದಮ್ಮಗಳ ಜನನ, 5 ನಾರ್ಮಲ್, 1 ಸಿಸೇರಿಯನ್​
  • ಇತರೆ ಖಾಸಗಿ ಆಸ್ಪತ್ರೆಗಳಲ್ಲಿ 25 ಕ್ಕೂ ಅಧಿಕ ಮಕ್ಕಳ ಜನನವಾಗಿದೆ.
  • ಖಾಸಗಿ ಆಸ್ಪತ್ರೆಗಳಲ್ಲಿ ಡೆಲಿವರಿ ಮಾಹಿತಿ ನೀಡದಂತೆ ಪೋಷಕರು ತಾಕೀತು ಮಾಡಿದ್ದು, ಈ ಹಿನ್ನೆಲೆ ಡೆಲಿವರಿ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದ ಸಮಯಕ್ಕೇ ಮಗು ಜನಿಸುವಂತಾಗಲಿ ಎಂದು ಪೋಷಕರು ನಿರ್ಧರಿಸಿರುವಂತಹ ಸಾಕಷ್ಟು ಉದಾಹರಣೆಗಳು ಕಂಡುಬಂದಿವೆ. ತಮ್ಮ ಹೆರಿಗೆ ದಿನಾಂಕವನ್ನು ಜನವರಿ 22 ರ ಮೊದಲು ಅಥವಾ ನಂತರ ಕೆಲವು ದಿನಗಳಲ್ಲಿ ಮಾಡುವಂತೆ ಸಹ ವೈದ್ಯರಿಗೆ ವಿನಂತಿ ಮಾಡಿಕೊಂಡಿದ್ದಾರೆ.

ವಿಶಿಷ್ಟ ಕಾರ್ಯಕ್ಕೆ ಸಾಕ್ಷಿಯಾದ ಸಿದ್ದೇಶ್ವರ ಸಂಸ್ಥೆಯ ಆಸ್ಪತ್ರೆ

ವಿಜಯಪುರದಲ್ಲೊಂದು ವಿಶಿಷ್ಟ ಕಾರ್ಯಕ್ಕೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಆಸ್ಪತ್ರೆ ಸಾಕ್ಷಿಯಾಗಿದೆ. ಮೂರು ಗಂಡು ಮಕ್ಕಳಿಗೆ ರಾಮ ಎಂದು ನಾಮಕರಣ ಮಾಡಲಾಗಿದ್ದು, ಒಂದು ಹೆಣ್ಣು ಮಗುವಿಗೆ ಸೀತಾ ಎಂದು ಹೆಸರಿಡಲಾಗಿದೆ. ಶಾಸಕ ಯತ್ನಾಳ ಪುತ್ರ ರಾಮನಗೌಡ ಪಾಟೀಲ್, ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನಾಮಕರಣ ಮಾಡಲಾಗಿದೆ. ಆಸ್ಪತ್ರೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂಭ್ರಮಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:36 pm, Mon, 22 January 24

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!