AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ. 22ರಂದೇ ಹೆರಿಗೆ ಕ್ರೇಜ್: ಬೆಂಗಳೂರಿನಲ್ಲಿ ರಾಮಲಲ್ಲಾ ಪ್ರತಿಷ್ಠಾನೆ ದಿನವೇ 60ಕ್ಕೂ ಹೆಚ್ಚು ಮಕ್ಕಳ ಜನನ

ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಅದ್ಧೂರಿಯಾಗಿ ನೆರವೇರಿದೆ. ಅಸಂಖ್ಯ ರಾಮಭಕ್ತರ ಶತಮಾನಗಳ ಕನಸು ಈಡೇರಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ಶುಭ ಗಳಿಗೆಯಲ್ಲಿ ತಮ್ಮ ಕಂದಮ್ಮಗಳನ್ನು ಹೆರಲು ನಿರ್ಧರಿಸಿದಂತಿದೆ. ಹೀಗಿರುವಾಗ ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ ರಾಜಧಾನಿಯಲ್ಲಿ 60ಕ್ಕೂ ಹೆಚ್ಚು ಕಂದಮ್ಮಗಳು ಜನ್ಮ ಪಡೆದುಕೊಂಡಿವೆ.

ಜ. 22ರಂದೇ ಹೆರಿಗೆ ಕ್ರೇಜ್: ಬೆಂಗಳೂರಿನಲ್ಲಿ ರಾಮಲಲ್ಲಾ ಪ್ರತಿಷ್ಠಾನೆ ದಿನವೇ 60ಕ್ಕೂ ಹೆಚ್ಚು ಮಕ್ಕಳ ಜನನ
ರಾಮಲಲ್ಲಾ, ಪ್ರತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Jan 22, 2024 | 5:48 PM

Share

ಬೆಂಗಳೂರು, ಜನವರಿ 22: ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ (Ramlalla pran pratishtha) ಅದ್ಧೂರಿಯಾಗಿ ನೆರವೇರಿದೆ. ಅಸಂಖ್ಯ ರಾಮಭಕ್ತರ ಶತಮಾನಗಳ ಕನಸು ಈಡೇರಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ಶುಭ ಗಳಿಗೆಯಲ್ಲಿ ತಮ್ಮ ಕಂದಮ್ಮಗಳನ್ನು ಹೆರಲು ನಿರ್ಧರಿಸಿದಂತಿದೆ. ಹೀಗಿರುವಾಗ ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ ರಾಜಧಾನಿಯಲ್ಲಿ 60ಕ್ಕೂ ಹೆಚ್ಚು ಕಂದಮ್ಮಗಳು ಜನ್ಮ ಪಡೆದುಕೊಂಡಿವೆ. ಸಿಲಿಕಾನ್ ಸಿಟಿಯಲ್ಲಿ ಜ. 22 ಡೆಲಿವರಿ ಡಿಮ್ಯಾಂಡ್ ಕ್ರೇಜ್ ಶುರುವಾಗಿದೆ. ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾನೆ ದಿನ ಕಂದಮ್ಮಗಳನ್ನು ಪಡೆಯಲು ಕೆಲ ಪೋಷಕರು ಆಸಕ್ತಿ ವಹಿಸಿದ್ದಾರೆ.

ಈ ಶುಭ ದಿನದಂದು ರಾಮನಂತಹ ಮಗು, ಸೀತೆಯಂತಹ ಮಗಳು ಪಡೆಯಲು ಸಿಟಿ ಪೋಷಕರು ಆಸಕ್ತಿ ವಹಿಸಿದ್ದಾರೆ. ಹಾಗಾಗಿ ಇದುವರೆಗೂ ರಾಜ್ಯದಲ್ಲಿ 40ಕ್ಕೂ ಹೆಚ್ಚು ಶಿಶುಗಳು ಜನಿಸಿವೆ.

ಯಾವ ಆಸ್ಪತ್ರೆಯಲ್ಲಿ ಎಷ್ಟು ಶಿಶುಗಳ ಜನನ

  • ವಾಣಿವಿಲಾಸ್ ಆಸ್ಪತ್ರೆಯಲ್ಲಿ 28 ಕಂದಮ್ಮಗಳು ಜನಿಸಿದ್ದು, ಈ ಪೈಕಿ 10 ನಾರ್ಮಲ್, 1 ಸಿಸೇರಿಯನ್ ಮಾಡಲಾಗಿದೆ. ಗಂಡು 16, ಹೆಣ್ಣು 12 ​
  • ಕೆಸಿ ಜನರಲ್ ಆಸ್ಪತ್ರೆಯಲ್ಲಿ ಈ ತನಕ 4 ಶಿಶುಗಳ ಜನನವಾಗಿದ್ದು, ಈ ಪೈಕಿ 2 ಸಹಜ, 2 ಸಿಸೇರಿಯೆನ್​
  • ಘೋಷಾ ಆಸ್ಪತ್ರೆಯಲ್ಲಿ ಒಟ್ಟು 6 ಕಂದಮ್ಮಗಳ ಜನನ, 5 ನಾರ್ಮಲ್, 1 ಸಿಸೇರಿಯನ್​
  • ಇತರೆ ಖಾಸಗಿ ಆಸ್ಪತ್ರೆಗಳಲ್ಲಿ 25 ಕ್ಕೂ ಅಧಿಕ ಮಕ್ಕಳ ಜನನವಾಗಿದೆ.
  • ಖಾಸಗಿ ಆಸ್ಪತ್ರೆಗಳಲ್ಲಿ ಡೆಲಿವರಿ ಮಾಹಿತಿ ನೀಡದಂತೆ ಪೋಷಕರು ತಾಕೀತು ಮಾಡಿದ್ದು, ಈ ಹಿನ್ನೆಲೆ ಡೆಲಿವರಿ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ

ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದ ಸಮಯಕ್ಕೇ ಮಗು ಜನಿಸುವಂತಾಗಲಿ ಎಂದು ಪೋಷಕರು ನಿರ್ಧರಿಸಿರುವಂತಹ ಸಾಕಷ್ಟು ಉದಾಹರಣೆಗಳು ಕಂಡುಬಂದಿವೆ. ತಮ್ಮ ಹೆರಿಗೆ ದಿನಾಂಕವನ್ನು ಜನವರಿ 22 ರ ಮೊದಲು ಅಥವಾ ನಂತರ ಕೆಲವು ದಿನಗಳಲ್ಲಿ ಮಾಡುವಂತೆ ಸಹ ವೈದ್ಯರಿಗೆ ವಿನಂತಿ ಮಾಡಿಕೊಂಡಿದ್ದಾರೆ.

ವಿಶಿಷ್ಟ ಕಾರ್ಯಕ್ಕೆ ಸಾಕ್ಷಿಯಾದ ಸಿದ್ದೇಶ್ವರ ಸಂಸ್ಥೆಯ ಆಸ್ಪತ್ರೆ

ವಿಜಯಪುರದಲ್ಲೊಂದು ವಿಶಿಷ್ಟ ಕಾರ್ಯಕ್ಕೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಆಸ್ಪತ್ರೆ ಸಾಕ್ಷಿಯಾಗಿದೆ. ಮೂರು ಗಂಡು ಮಕ್ಕಳಿಗೆ ರಾಮ ಎಂದು ನಾಮಕರಣ ಮಾಡಲಾಗಿದ್ದು, ಒಂದು ಹೆಣ್ಣು ಮಗುವಿಗೆ ಸೀತಾ ಎಂದು ಹೆಸರಿಡಲಾಗಿದೆ. ಶಾಸಕ ಯತ್ನಾಳ ಪುತ್ರ ರಾಮನಗೌಡ ಪಾಟೀಲ್, ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನಾಮಕರಣ ಮಾಡಲಾಗಿದೆ. ಆಸ್ಪತ್ರೆಯಲ್ಲಿ ರಾಮಮಂದಿರ ಉದ್ಘಾಟನೆಯ ಸಂಭ್ರಮಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:36 pm, Mon, 22 January 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ