AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramadan: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ

ದೈಹಿಕ ಅಂತರ ಪಾಲಿಸುವುದಕ್ಕಾಗಿ 3 ಪಾಳಿಯಲ್ಲಿ ಸಮಯವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಮಧ್ಯಾಹ್ನ 12.45 ರಿಂದ 1.45ರ ವರೆಗೆ ನಮಾಜ್ ಮಾಡಲು ಅವಕಾಶವಿರುತ್ತದೆ. ನಂತರ ಮಧ್ಯಾಹ್ನ 1.30 ರಿಂದ 2 ಗಂಟೆಯವರೆಗೆ ಮತ್ತು 2.30 ರಿಂದ 3 ಗಂಟೆಯವರೆಗೆ ನಮಾಜ್ ಮಾಡುವುದಕ್ಕೆ ರಾಜ್ಯ ಸರ್ಕಾರ ಅವಕಾಶವನ್ನು ನೀಡಿದೆ.

Ramadan: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ
ಪ್ರಾರ್ಥನೆ (ಸಾಂದರ್ಭಿಕ ಚಿತ್ರ)
sandhya thejappa
| Edited By: |

Updated on: Apr 13, 2021 | 4:23 PM

Share

ಬೆಂಗಳೂರು: ಮುಸ್ಲಿಂ ಧರ್ಮದ ಪವಿತ್ರ ಹಬ್ಬಗಳಲ್ಲಿ ರಂಜಾನ್ ಕೂಡಾ ಒಂದು. ಈ ಹಬ್ಬದಲ್ಲಿ ಉಪವಾಸ ಇರುವುದೇ ವಿಶೇಷತೆ. ರಾಜ್ಯದ ಮುಸ್ಲಿಂಮರು ಕೆಲವು ಕಡೆ ಇಂದಿನಿಂದ ಉಪವಾಸವಿದ್ದರೆ, ಇನ್ನು ಕೆಲವು ಕಡೆ ನಾಳೆಯಿಂದ ಉಪವಾಸವಿರುತ್ತಾರೆ. ಮಹಾಮಾರಿ ಕೊರೊನಾ ನಡುವೆಯೂ ರಾಜ್ಯದಲ್ಲಿ ಉಪವಾಸವನ್ನು ಆಚರಿಸುವ ಮುಸ್ಲಿಂಮರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಮಾರ್ಗಸೂಚಿಗಳು ಹೀಗಿವೆ * ಕಂಟೇನ್ಮೆಂಟ್ ಜೋನ್ಗಳಲ್ಲಿರುವ ಮಸೀದಿಗಳು ಬಂದ್ ಮಾಡಿರಬೇಕು. ಮುಂದಿನ ಆದೇಶದವರೆಗೆ ಬಂದ್ ಮಾಡಿರಬೇಕು. ಉಳಿದ ಮಸೀದಿಗಳಲ್ಲಿ ನಮಾಜ್  ಮಾಡಲು ಅವಕಾಶ ನೀಡಲಾಗಿದೆ. * ಉಪವಾಸ ಬಿಡುವಾಗ ಮಸೀದಿಗೆ ಆಹಾರ ತರಬಾರದು. * ಉಪವಾಸವನ್ನು ಮನೆಯಲ್ಲಿಯೇ ಬಿಡಬೇಕು. * ಸಾಮೂಹಿಕ ಪ್ರಾರ್ಥನೆಯಲ್ಲಿ ದೈಹಿಕ ಅಂತರ ಕಡ್ಡಾಯ * ಪ್ರಾರ್ಥನೆಗೂ ಮೊದಲು ಮಾಡುವ ಸ್ವಚ್ಛತೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. * ಮನೆಯಲ್ಲಿಯೇ ವುಲೂಹ್ ಮಾಡಿಕೊಂಡು ಬರಬೇಕು. * ನಮಾಜ್ ವೇಳೆ ಒಂದೇ ಕಾರ್ಪೆಟ್ ಬಳಸುವಂತಿಲ್ಲ. ವೈಯಕ್ತಿಕವಾಗಿ ಕಾರ್ಪೆಟ್ ಬಳಸಬೇಕು. * ಪ್ರಾರ್ಥನೆಗೆ 5 ನಿಮಿಷ ಮುಂಚಿತವಾಗಿ ಮಸೀದಿ ತೆರೆಯಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಮಸೀದಿಗಳಲ್ಲಿ ನಮಾಜ್ ಮಾಡುವುದಕ್ಕೆ ಸಮಯ ನಿಗದಿ ದೈಹಿಕ ಅಂತರ ಪಾಲಿಸುವುದಕ್ಕಾಗಿ 3 ಪಾಳಿಯ ಸಮಯವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಮಧ್ಯಾಹ್ನ 12.45 ರಿಂದ 1.45ರ ವರೆಗೆ ನಮಾಜ್ ಮಾಡಲು ಅವಕಾಶವಿರುತ್ತದೆ. ನಂತರ ಮಧ್ಯಾಹ್ನ 1.30 ರಿಂದ 2 ಗಂಟೆಯವರೆಗೆ ಮತ್ತು 2.30 ರಿಂದ 3 ಗಂಟೆಯವರೆಗೆ ನಮಾಜ್ ಮಾಡುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ದಾವಣಗೆರೆಯಲ್ಲಿ ಸಂಜೆ 7 ಗಂಟೆ ನಂತರ ಕೊವಿಡ್ ಲಸಿಕೆ ನೀಡಿಕೆ ದಾವಣಗೆರೆ: ರಂಜಾನ್ ಉಪವಾಸ ಹಿನ್ನೆಲೆ ನಾಳೆಯಿಂದ ಮುಸ್ಲಿಂಮರಿಗೆ ಸಂಜೆ 7 ಗಂಟೆ ನಂತರ ಕೊವಿಡ್ ಲಸಿಕೆ ನೀಡಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನಿರ್ಧರಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳ ಸಭೆಯಲ್ಲಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ ಅಂತಿಮ ತೀರ್ಮಾನ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ

Ramadan Time Table 2021: ಪವಿತ್ರ ಕುರಾನ್ ಸ್ವರ್ಗದಿಂದ ಭೂಮಿಗೆ ಬಂದಿದ್ದು ಇದೇ ರಂಜಾನ್ ತಿಂಗಳಲ್ಲಿ.. ರಂಜಾನ್ ಉಪವಾಸದ ವಿವರ ಇಲ್ಲಿದೆ

Ramadan 2021: ರಂಜಾನ್ ಹಬ್ಬದ ಪ್ರಾಮುಖ್ಯತೆ, ಉಪವಾಸದ ಆರಂಭ.. ಇವೆಲ್ಲದರ ಡಿಟೇಲ್ಸ್ ಇಲ್ಲಿದೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?